ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಿಎಂ ಅಬ್ಬರದೊಂದಿಗೆ ಘೋಷಿಸಿದ ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಪ್ರತ್ಯೇಕ ಅರ್ಜಿ ಹಾಕುವ ವ್ಯವಸ್ಥೆಯೇ ಇಲ್ಲ. ಸಾಮಾನ್ಯ ವರ್ಗದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಹೀಗಾಗಿ ಇದುವರೆಗೂ ಕೇವಲ 16 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ದೊರಕಿದೆ. ಬೊಮ್ಮಾಯಿಯವರೇ, ಇಂತಹ ಖಾಲಿ ಡಬ್ಬ ಅಲ್ಲಾಡಿಸಿ ಹೆಚ್ಚು ಸದ್ದು ಮಾಡಿದಿರಲ್ಲವೇ? ಎಂದು ಪ್ರಶ್ನಿಸಿದೆ.