<p><strong>ಬೆಂಗಳೂರು:</strong> ಬಿಜೆಪಿಯ ಹಿರಿಯ ಶಾಸಕ ಉಮೇಶ ಕತ್ತಿ ನೇತೃತ್ವದಲ್ಲಿ ಕೆಲವು ಶಾಸಕರು ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<p>ಇದು ಅತೃಪ್ತರ ಸಭೆಯೋ ಅಥವಾ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಲು ನಡೆಸಿದ ಸಭೆಯೋ ಎಂಬ ಗೊಂದಲ ಪಕ್ಷದ ನಾಯಕರಲ್ಲೇ ಮೂಡಿದೆ. ಸಭೆಯ ಸುದ್ದಿ ಮಾಧ್ಯಮಗಳಲ್ಲಿ ಪ್ರಮುಖವಾಗಿ ಬಿತ್ತರವಾಗುತ್ತಿದ್ದಂತೆಸಚಿವರು ಮತ್ತು ಬಿಜೆಪಿ ಶಾಸಕರು ಈ ಕುರಿತು ವಿವಿಧ ರೀತಿಯ ಹೇಳಿಕೆಗಳನ್ನು ನೀಡಿದರು. ‘ಸರ್ಕಾರ ಸುಭದ್ರವಾಗಿದೆ, ಯಡಿಯೂರಪ್ಪನವರೇ ನಮ್ಮ ನಾಯಕರು, ಮುಂದಿನ ಮೂರುವರ್ಷ ಅವರೇ ಮುಖ್ಯಮಂತ್ರಿ’ ಎಂದು ಬಲವಾಗಿ ಸಮರ್ಥಿಸಿಕೊಂಡರು. ಬಸನಗೌಡ ಪಾಟೀಲ ಯತ್ನಾಳ ತಮ್ಮ ಅಸಮಾಧಾನ ಹೊರಹಾಕಿದರು.</p>.<p>ಈ ಬೆಳವಣಿಗೆ ಬೆನ್ನಲ್ಲೇ, ಯಡಿಯೂರಪ್ಪ ಅವರು ತಮ್ಮ ಆಪ್ತ ಶಾಸಕರ ಸಭೆ ಕರೆದಿದ್ದಾರೆ ಎಂಬ ಸುದ್ದಿ ಹರಿದಾಡಿತು. ತಕ್ಷಣವೇ ಟ್ವೀಟ್ ಮಾಡಿದ ಅವರು, ಅಂತಹ ಯಾವುದೇ ಸಭೆ ಕರೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಬೆಳವಣಿಗೆಗಳ ಬಗ್ಗೆ ಬಹಿರಂಗ ಹೇಳಿಕೆ ನೀಡದ ಯಡಿಯೂರಪ್ಪ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವಲ್ಲಿ ಮಗ್ನರಾದರು.</p>.<p>ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ‘ಕತ್ತಿ ಸಹೋದರರಿಗೆ ಸಮಸ್ಯೆಗಳಿದ್ದಲ್ಲಿ ಮುಖ್ಯಮಂತ್ರಿ ಬಳಿಗೆ ಹೋಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಪಕ್ಷದ ಆಂತರಿಕ ವಿಷಯಗಳನ್ನು ಮಾಧ್ಯಮದ ಮುಂದೆ ಹೇಳಿಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿಲ್ಲ’ ಎಂದಿದ್ದಾರೆ.</p>.<p>ಕೊಳ್ಳೇಗಾಲದಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ , ‘ಲಾಕ್ಡೌನ್ನಿಂದ ಶಾಸಕರು ಪರಸ್ಪರ ಭೇಟಿಯಾಗಲು ಆಗಿರಲಿಲ್ಲ. ಈಗ ಸಭೆ ಸೇರಿದರೆ ತಪ್ಪೇನು ಇಲ್ಲ. ಅದರಿಂದ ಸರ್ಕಾರಕ್ಕೆ ಯಾವುದೇ ಸಂಕಷ್ಟ ಇಲ್ಲ. ನಮ್ಮ ನಾಯಕ ಯಡಿಯೂರಪ್ಪ ಹೇಳಿದರೆ ವಾರದಲ್ಲಿ ಕಾಂಗ್ರೆಸ್ನ ಐವರು ಶಾಸಕ ರಾಜೀನಾಮೆ ಕೊಡಿಸುತ್ತೇನೆ’ ಎಂದರು.</p>.<p>‘ಮಂತ್ರಿ ಮಾಡಿ ಅಂತ ಕೈಚಾಚುವ ಅಯೋಗ್ಯ ನಾನಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುವವರೆಗೂ ಮಂತ್ರಿ ಮಾಡಿ ಎಂದು ಕೇಳುವುದಿಲ್ಲ. ಮೋದಿ, ಅಮಿತ್ ಶಾ ಮತ್ತು ನಡ್ಡಾ ನಮ್ಮ ನಾಯಕರು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.</p>.<p><strong>ಪ್ರತಿಕ್ರಿಯೆ</strong></p>.<p>ಇನ್ನಷ್ಟು ಉತ್ತಮ ಆಡಳಿತ ನಡೆಸಬೇಕು. ಯಡಿಯೂರಪ್ಪ ವಯಸ್ಸಿಗೆ ಮೀರಿ ಕೆಲಸ ಮಾಡುತ್ತಿದ್ದಾರೆ. ಕೆಲವು ಸಚಿವರು ಅಭಿವೃದ್ಧಿ ಬಗ್ಗೆ ಗಮನಹರಿಸಿಲ್ಲ ಎಂದುಚಿತ್ರದುರ್ಗ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.</p>.<p>ನಾನು ಕೆಲವು ಶಾಸಕರ ಸಭೆ ಕರೆದಿದ್ದೇನೆ ಎಂದು ಸುದ್ದಿಯಾಗಿದೆ. ಸತ್ಯಕ್ಕೆ ದೂರವಾದ ವಿಚಾರ, ಯಾವುದೇ ಸಭೆ ಕರೆದಿಲ್ಲ ಎಂದು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪಸ್ಪಷ್ಟಪಡಿಸಿದರು.</p>.<p>ಉಮೇಶ ಕತ್ತಿ ಏನು ಹೇಳಿದರೂ ಲೆಕ್ಕಕ್ಕೆ ಇಲ್ಲ. ಸರ್ಕಾರ ಬೀಳುತ್ತದೆ ಎಂಬ ಗುಲ್ಲು ಬಹಳ ದಿನದಿಂದಲೂ ಇದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿಯ ಹಿರಿಯ ಶಾಸಕ ಉಮೇಶ ಕತ್ತಿ ನೇತೃತ್ವದಲ್ಲಿ ಕೆಲವು ಶಾಸಕರು ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.</p>.<p>ಇದು ಅತೃಪ್ತರ ಸಭೆಯೋ ಅಥವಾ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರ ಮೇಲೆ ಒತ್ತಡ ಹೇರಲು ನಡೆಸಿದ ಸಭೆಯೋ ಎಂಬ ಗೊಂದಲ ಪಕ್ಷದ ನಾಯಕರಲ್ಲೇ ಮೂಡಿದೆ. ಸಭೆಯ ಸುದ್ದಿ ಮಾಧ್ಯಮಗಳಲ್ಲಿ ಪ್ರಮುಖವಾಗಿ ಬಿತ್ತರವಾಗುತ್ತಿದ್ದಂತೆಸಚಿವರು ಮತ್ತು ಬಿಜೆಪಿ ಶಾಸಕರು ಈ ಕುರಿತು ವಿವಿಧ ರೀತಿಯ ಹೇಳಿಕೆಗಳನ್ನು ನೀಡಿದರು. ‘ಸರ್ಕಾರ ಸುಭದ್ರವಾಗಿದೆ, ಯಡಿಯೂರಪ್ಪನವರೇ ನಮ್ಮ ನಾಯಕರು, ಮುಂದಿನ ಮೂರುವರ್ಷ ಅವರೇ ಮುಖ್ಯಮಂತ್ರಿ’ ಎಂದು ಬಲವಾಗಿ ಸಮರ್ಥಿಸಿಕೊಂಡರು. ಬಸನಗೌಡ ಪಾಟೀಲ ಯತ್ನಾಳ ತಮ್ಮ ಅಸಮಾಧಾನ ಹೊರಹಾಕಿದರು.</p>.<p>ಈ ಬೆಳವಣಿಗೆ ಬೆನ್ನಲ್ಲೇ, ಯಡಿಯೂರಪ್ಪ ಅವರು ತಮ್ಮ ಆಪ್ತ ಶಾಸಕರ ಸಭೆ ಕರೆದಿದ್ದಾರೆ ಎಂಬ ಸುದ್ದಿ ಹರಿದಾಡಿತು. ತಕ್ಷಣವೇ ಟ್ವೀಟ್ ಮಾಡಿದ ಅವರು, ಅಂತಹ ಯಾವುದೇ ಸಭೆ ಕರೆದಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಬೆಳವಣಿಗೆಗಳ ಬಗ್ಗೆ ಬಹಿರಂಗ ಹೇಳಿಕೆ ನೀಡದ ಯಡಿಯೂರಪ್ಪ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವಲ್ಲಿ ಮಗ್ನರಾದರು.</p>.<p>ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿರುವ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ‘ಕತ್ತಿ ಸಹೋದರರಿಗೆ ಸಮಸ್ಯೆಗಳಿದ್ದಲ್ಲಿ ಮುಖ್ಯಮಂತ್ರಿ ಬಳಿಗೆ ಹೋಗಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಪಕ್ಷದ ಆಂತರಿಕ ವಿಷಯಗಳನ್ನು ಮಾಧ್ಯಮದ ಮುಂದೆ ಹೇಳಿಕೊಳ್ಳುವ ವ್ಯವಸ್ಥೆ ನಮ್ಮ ಪಕ್ಷದಲ್ಲಿಲ್ಲ’ ಎಂದಿದ್ದಾರೆ.</p>.<p>ಕೊಳ್ಳೇಗಾಲದಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ , ‘ಲಾಕ್ಡೌನ್ನಿಂದ ಶಾಸಕರು ಪರಸ್ಪರ ಭೇಟಿಯಾಗಲು ಆಗಿರಲಿಲ್ಲ. ಈಗ ಸಭೆ ಸೇರಿದರೆ ತಪ್ಪೇನು ಇಲ್ಲ. ಅದರಿಂದ ಸರ್ಕಾರಕ್ಕೆ ಯಾವುದೇ ಸಂಕಷ್ಟ ಇಲ್ಲ. ನಮ್ಮ ನಾಯಕ ಯಡಿಯೂರಪ್ಪ ಹೇಳಿದರೆ ವಾರದಲ್ಲಿ ಕಾಂಗ್ರೆಸ್ನ ಐವರು ಶಾಸಕ ರಾಜೀನಾಮೆ ಕೊಡಿಸುತ್ತೇನೆ’ ಎಂದರು.</p>.<p>‘ಮಂತ್ರಿ ಮಾಡಿ ಅಂತ ಕೈಚಾಚುವ ಅಯೋಗ್ಯ ನಾನಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುವವರೆಗೂ ಮಂತ್ರಿ ಮಾಡಿ ಎಂದು ಕೇಳುವುದಿಲ್ಲ. ಮೋದಿ, ಅಮಿತ್ ಶಾ ಮತ್ತು ನಡ್ಡಾ ನಮ್ಮ ನಾಯಕರು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.</p>.<p><strong>ಪ್ರತಿಕ್ರಿಯೆ</strong></p>.<p>ಇನ್ನಷ್ಟು ಉತ್ತಮ ಆಡಳಿತ ನಡೆಸಬೇಕು. ಯಡಿಯೂರಪ್ಪ ವಯಸ್ಸಿಗೆ ಮೀರಿ ಕೆಲಸ ಮಾಡುತ್ತಿದ್ದಾರೆ. ಕೆಲವು ಸಚಿವರು ಅಭಿವೃದ್ಧಿ ಬಗ್ಗೆ ಗಮನಹರಿಸಿಲ್ಲ ಎಂದುಚಿತ್ರದುರ್ಗ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.</p>.<p>ನಾನು ಕೆಲವು ಶಾಸಕರ ಸಭೆ ಕರೆದಿದ್ದೇನೆ ಎಂದು ಸುದ್ದಿಯಾಗಿದೆ. ಸತ್ಯಕ್ಕೆ ದೂರವಾದ ವಿಚಾರ, ಯಾವುದೇ ಸಭೆ ಕರೆದಿಲ್ಲ ಎಂದು ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪಸ್ಪಷ್ಟಪಡಿಸಿದರು.</p>.<p>ಉಮೇಶ ಕತ್ತಿ ಏನು ಹೇಳಿದರೂ ಲೆಕ್ಕಕ್ಕೆ ಇಲ್ಲ. ಸರ್ಕಾರ ಬೀಳುತ್ತದೆ ಎಂಬ ಗುಲ್ಲು ಬಹಳ ದಿನದಿಂದಲೂ ಇದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>