ಆದರೆ, ನಿನ್ನೆ (ಶನಿವಾರ) ಸಂಜೆ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ನಿಂದ ಲಾಲ್ಬಾಗ್ ವೆಸ್ಟ್ ಗೇಟ್ಗೆ ಪ್ರಯಾಣಿಸುವ ವೇಳೆ ಸಿದ್ದರಾಮಯ್ಯ ಅವರಿಗೆ ಜೀರೊ ಟ್ರಾಫಿಕ್ ಸೌಲಭ್ಯವನ್ನು ಪೊಲೀಸರು ಕಲ್ಪಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಈ ಭಾಗದಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಿದ್ದರಿಂದ ಮುಖ್ಯಮಂತ್ರಿ ಬೇರೊಂದು ಕಾರ್ಯಕ್ರಮಕ್ಕೆ ತುರ್ತು ತೆರಳಬೇಕಾಗಿದ್ದರಿಂದ ಟ್ರಾಫಿಕ್ ತೆರವು ಮಾಡಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.