ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ದೆಹಲಿ ಅಂಗಳಕ್ಕೆ ಬಿಜೆಪಿ ಬಣ ಕದನ

ರಾಷ್ಟ್ರ ರಾಜಧಾನಿಗೆ ತೆರಳಿದ ಯತ್ನಾಳ ಬಣ | ಬಿಎಸ್‌ವೈ ಮನೆಯಲ್ಲಿ ವಿಜಯೇಂದ್ರ ನಿಷ್ಠರ ಸಭೆ
Published : 1 ಡಿಸೆಂಬರ್ 2024, 23:30 IST
Last Updated : 1 ಡಿಸೆಂಬರ್ 2024, 23:30 IST
ಫಾಲೋ ಮಾಡಿ
Comments
ವಿಜಯೇಂದ್ರ ಬಣ ನಾನು ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ದಾಖಲೆಗಳು ಇವೆ ಎಂದಿದ್ದಾರೆ. ಅವು ಇದ್ದದ್ದೇ ಆದರೆ ತಕ್ಷಣವೇ ಬಹಿರಂಗಪಡಿಸಲಿಬಿ. ಯತ್ನಾಳ
ವೈವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಯತ್ನಾಳ ಹಿಂದೆ ಇರುವ ಶಕ್ತಿ ಯಾವುದು? ಅವರಿಗೆ ವರಿಷ್ಠರ ಬೆಂಬಲ ಇಲ್ಲ. ಅವರ ಹಿಂದೆ ಇರುವುದು ನಾಲ್ಕಾರು ಜನ ಮಾತ್ರ. ಇದೇ 10ರಂದು ದಾವಣೆಗೆರೆಯಲ್ಲಿ 60ಕ್ಕೂ ಹೆಚ್ಚು ಶಾಸಕರು ಸೇರುತ್ತೇವೆ. ಯತ್ನಾಳರ ಉಚ್ಚಾಟನೆಯ ತೀರ್ಮಾನ ಮಾಡುತ್ತೇವೆ
ಎಂ.ಪಿ.ರೇಣುಕಾಚಾರ್ಯ ಬಿಜೆಪಿ ಮುಖಂಡ
ಸ್ವಪಕ್ಷೀಯರ ವಿರುದ್ಧವೇ ಮಾತನಾಡುತ್ತಿರುವ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ವಿಷಯದಿಂದ ನಾವು ಹಿಂದೆ ಸರಿದಿಲ್ಲ
ಬಿ.ಸಿ.ಪಾಟೀಲ ಬಿಜೆಪಿ ಮುಖಂಡ
ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳಲು ನಿಮ್ಮನ್ನು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷನಾಗಿ ಮಾಡಿಲ್ಲ. ಈ ಬಗ್ಗೆ ಹುಷಾರಾಗಿರಿ
ಅರವಿಂದ ಲಿಂಬಾವಳಿಬಿಜೆಪಿ ಮುಖಂಡ
ರಮೇಶ ಜಾರಕಿಹೊಳಿ ಆಪರೇಷನ್‌ ಮಾಡಿದ್ದರಿಂದ ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಈಗ ನಮ್ಮನ್ನು ಆಪರೇಷನ್‌ ಮಾಡುತ್ತಾರಂತೆ. ಇಡೀ ರಾಜ್ಯದಲ್ಲಿ ಆಪರೇಷನ್‌ ಮಾಡುವಲ್ಲಿ ನಾವು ಟಾಪ್‌ಮೋಸ್ಟ್‌ ಡಾಕ್ಟರ್‌ಗಳಿದ್ದೇವೆ.ನಿಮ್ಮ ನರನಾಡಿಗಳನ್ನೇ ಕಟ್ ಮಾಡುತ್ತೇವೆ
ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ಶಾಸಕ
ವಕ್ಫ್ ಹೋರಾಟದ ಕೊನೆಗೆ ದಾವಣಗೆರೆಯಲ್ಲಿ ಸಮಾವೇಶ ನಡೆಸಿ, 10 ಲಕ್ಷ ಜನರನ್ನು ಸೇರಿಸುತ್ತೇವೆ
ರಮೇಶ ಜಾರಕಿಹೊಳಿಬಿಜೆಪಿ ಶಾಸಕ
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಒಂದೇ ವಿಷಯಕ್ಕೆ ಹೋರಾಟ ಮಾಡುತ್ತಿದ್ದಾರೆ. ಎಲ್ಲ ಪಕ್ಷಗಳಲ್ಲೂ ಸಣ್ಣ–ಪುಟ್ಟ ಸಮಸ್ಯೆಗಳು ಇರುವುದು ಸಹಜ. ಎಲ್ಲ ಗೊಂದಲಗಳನ್ನು ಪರಿಹರಿಸುವಷ್ಟು ನಮ್ಮ ಹೈಕಮಾಂಡ್ ಶಕ್ತಿಯುತವಾಗಿದೆ
ಗೋವಿಂದ ಕಾರಜೋಳ, ಬಿಜೆಪಿ ಸಂಸದ
ಯಾವುದೇ ಪಕ್ಷದಲ್ಲಿ ಈ ರೀತಿಯ ಗೊಂದಲಗಳು ಇರಬಾರದು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪಕ್ಷದಲ್ಲಿನ ಗೊಂದಲ ಈಗಾಗಲೇ ವರಿಷ್ಠರ ಗಮನಕ್ಕೆ ಬಂದಿದ್ದು, ಅವರು ಸೂಕ್ತ ಸಮಯದಲ್ಲಿ ಸರಿಯಾದ ಕ್ರಮ ಕೈಗೊಳ್ಳುವ ವಿಶ್ವಾಸವಿದೆ. ಬಿಜೆಪಿಯಲ್ಲಿನ ಗೊಂದಲ ಬೇಗ ಬಗೆಹರಿಯುತ್ತದೆ
ಜಗದೀಶ ಶೆಟ್ಟರ್, ಬಿಜೆಪಿ ಸಂಸದ
ಬಿಜೆಪಿಯೂ ಸೇರಿ ಯಾವ ಪಕ್ಷದಲ್ಲೂ ವೈಚಾರಿಕತೆ, ನೈತಿಕತೆ ಇಲ್ಲ. ಬಯ್ಯುವುದು, ಬೊಗಳೆ ಬಿಡುವುದೇ ಕೆಲಸವಲ್ಲ. ರಾಜ್ಯದಿಂದ ಕೇಂದ್ರ ಸಚಿವರಾಗಿರುವ ಶೋಭಾ ಕರಂದ್ಲಾಜೆ, ಪ್ರಲ್ಹಾದ ಜೋಶಿ ರಾಜ್ಯಕ್ಕೆ ಬರುತ್ತಾರೆ, ಯಾರನ್ನೋ ಬೈದು ಹೋಗುತ್ತಾರೆ. ಜಿಲ್ಲಾ ಪಂಚಾಯಿತಿ ಸದಸ್ಯರಿಗಿಂತ ಕಡೆಯಾಗಿ ಮಾತನಾಡುತ್ತಿದ್ದೀರಲ್ಲಾ? ಅಭಿವೃದ್ಧಿ ಬಗ್ಗೆ ಮಾತನಾಡಿ
ಎ.ಎಚ್‌.ವಿಶ್ವನಾಥ್‌, ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ
ನಿಷ್ಠೆ ಎಂಬುದು ಸನ್ನಿವೇಶದ ಅವಶ್ಯಕತೆ ಅಲ್ಲ, ಜೀವನದ ಜೀವಾಳ. ರಾಷ್ಟ್ರ ನಿಷ್ಠೆ - ಪಕ್ಷ ನಿಷ್ಠೆ ಅತ್ಯಂತ ಶ್ರೇಷ್ಠವಾದದ್ದು’. ಇವತ್ತಿನ ಬಿಜೆಪಿಯ ಕೆಲವರ ಹೇಳಿಕೆ-ಪ್ರತಿಹೇಳಿಕೆಗಳನ್ನು ಕೇಳಿಸಿಕೊಳ್ಳುವಾಗ, ಹಿರಿಯರಾದ ದಿವಂಗತ ಅನಂತ್ ಕುಮಾರ್ ಅವರು ಹೇಳುತ್ತಿದ್ದ ಮೇಲಿನ ಮಾತು ನೆನಪಾಯಿತು
ಸಿ.ಟಿ.ರವಿ, ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT