<p><strong>ಬೆಂಗಳೂರು: </strong>ಬೆಂಗಳೂರು ನಗರದ ಉಸ್ತುವಾರಿಗಾಗಿ ಸಚಿವರಾದ ಆರ್. ಅಶೋಕ ಮತ್ತು ವಿ. ಸೋಮಣ್ಣ ನಡುವೆ ಜಟಾಪಟಿ ಆರಂಭವಾಗಿದೆ. ಅಶೋಕ ಅವರ ವರ್ತನೆ ಕುರಿತು ಸೋಮಣ್ಣ ಏಕವಚನದಲ್ಲೇ ಹರಿಹಾಯ್ದಿದ್ದಾರೆ.</p>.<p>ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಸೋಮಣ್ಣ, ‘ನಾನು ಮಂತ್ರಿಯಾಗಿದ್ದಾಗ ಅಶೋಕ ಕೇವಲ ಶಾಸಕನಾಗಿದ್ದ. ಅವನ ಅಪ್ಪ, ಅಮ್ಮ ಅಶೋಕ ಎಂದು ಯಾಕೆ ಹೆಸರಿಟ್ಟರೋ ಗೊತ್ತಿಲ್ಲ. ಸಾಮ್ರಾಟನಂತೆ ಆಡುತ್ತಾನೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾವು ಕರೆದ ಸಭೆಗೆ ಅಶೋಕ ಬಂದಿಲ್ಲ. ಆ ರೀತಿ ತಾವು ಮಾಡುವುದಿಲ್ಲ. ಅಶೋಕ ಕರೆಯುವ ಸಭೆಗೆ ಹಾಜರಾಗಲಾಗುವುದು ಎಂದರು.</p>.<p>ತಮ್ಮ ಹಿರಿತನ ಕುರಿತು ಹಲವು ಬಾರಿ ಪ್ರಸ್ತಾಪಿಸಿದ ಸೋಮಣ್ಣ, ಬೆಂಗಳೂರು ನಗರ ಉಸ್ತುವಾರಿ ಸಚಿವರ ಹುದ್ದೆಗೆ ತಮ್ಮನ್ನೂ ಪರಿಗಣಿಸಬೇಕು ಎಂದರು.</p>.<p><strong>ಸಿಎಂ ಪರಮಾಧಿಕಾರ:</strong> ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅಶೋಕ, 'ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಮುಖ್ಯಮಂತ್ರಿ ನಿರ್ಧಾರಕ್ಕೆ ನಾನು ಬದ್ಧ' ಎಂದರು.</p>.<p>'ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ಅದನ್ನು ತಮಗೆ ನೀಡುವಂತೆ ಎಂ.ಟಿ.ಬಿ. ನಾಗರಾಜ್ ಕೇಳಿದಾಗ ಬಿಟ್ಟುಕೊಟ್ಟಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೆ' ಎಂದು ಹೇಳಿದರು.</p>.<p>'ಯಾವುದೇ ಸಚಿವರು ಸಭೆ ಕರೆದರೂ ನಾನು ಹಾಜರಾಗುತ್ತೇನೆ. ಶಾಸಕರು ಸಭೆ ಕರೆದರೂ ಹೋಗುವೆ. ನನ್ನ ಪೂರ್ವನಿಗದಿತ ಕಾರ್ಯಕ್ರಮ ಅಥವಾ ಪ್ರವಾಸ ಇದ್ದರೆ ಮಾತ್ರ ಹಾಜರಾಗಲು ಸಾಧ್ಯವಾಗುವುದಿಲ್ಲ' ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/congress-minority-muslim-votes-araga-jnanendra-bjp-874123.html" target="_blank">ಅಲ್ಪಸಂಖ್ಯಾತರ ಮತಗಳಿಗೆ ಜೊಲ್ಲು ಸುರಿಸುವ ಕಾಂಗ್ರೆಸ್:ಆರಗಜ್ಞಾನೇಂದ್ರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು ನಗರದ ಉಸ್ತುವಾರಿಗಾಗಿ ಸಚಿವರಾದ ಆರ್. ಅಶೋಕ ಮತ್ತು ವಿ. ಸೋಮಣ್ಣ ನಡುವೆ ಜಟಾಪಟಿ ಆರಂಭವಾಗಿದೆ. ಅಶೋಕ ಅವರ ವರ್ತನೆ ಕುರಿತು ಸೋಮಣ್ಣ ಏಕವಚನದಲ್ಲೇ ಹರಿಹಾಯ್ದಿದ್ದಾರೆ.</p>.<p>ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಸೋಮಣ್ಣ, ‘ನಾನು ಮಂತ್ರಿಯಾಗಿದ್ದಾಗ ಅಶೋಕ ಕೇವಲ ಶಾಸಕನಾಗಿದ್ದ. ಅವನ ಅಪ್ಪ, ಅಮ್ಮ ಅಶೋಕ ಎಂದು ಯಾಕೆ ಹೆಸರಿಟ್ಟರೋ ಗೊತ್ತಿಲ್ಲ. ಸಾಮ್ರಾಟನಂತೆ ಆಡುತ್ತಾನೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ತಾವು ಕರೆದ ಸಭೆಗೆ ಅಶೋಕ ಬಂದಿಲ್ಲ. ಆ ರೀತಿ ತಾವು ಮಾಡುವುದಿಲ್ಲ. ಅಶೋಕ ಕರೆಯುವ ಸಭೆಗೆ ಹಾಜರಾಗಲಾಗುವುದು ಎಂದರು.</p>.<p>ತಮ್ಮ ಹಿರಿತನ ಕುರಿತು ಹಲವು ಬಾರಿ ಪ್ರಸ್ತಾಪಿಸಿದ ಸೋಮಣ್ಣ, ಬೆಂಗಳೂರು ನಗರ ಉಸ್ತುವಾರಿ ಸಚಿವರ ಹುದ್ದೆಗೆ ತಮ್ಮನ್ನೂ ಪರಿಗಣಿಸಬೇಕು ಎಂದರು.</p>.<p><strong>ಸಿಎಂ ಪರಮಾಧಿಕಾರ:</strong> ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅಶೋಕ, 'ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಮುಖ್ಯಮಂತ್ರಿ ನಿರ್ಧಾರಕ್ಕೆ ನಾನು ಬದ್ಧ' ಎಂದರು.</p>.<p>'ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಲಾಗಿತ್ತು. ಅದನ್ನು ತಮಗೆ ನೀಡುವಂತೆ ಎಂ.ಟಿ.ಬಿ. ನಾಗರಾಜ್ ಕೇಳಿದಾಗ ಬಿಟ್ಟುಕೊಟ್ಟಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೆ' ಎಂದು ಹೇಳಿದರು.</p>.<p>'ಯಾವುದೇ ಸಚಿವರು ಸಭೆ ಕರೆದರೂ ನಾನು ಹಾಜರಾಗುತ್ತೇನೆ. ಶಾಸಕರು ಸಭೆ ಕರೆದರೂ ಹೋಗುವೆ. ನನ್ನ ಪೂರ್ವನಿಗದಿತ ಕಾರ್ಯಕ್ರಮ ಅಥವಾ ಪ್ರವಾಸ ಇದ್ದರೆ ಮಾತ್ರ ಹಾಜರಾಗಲು ಸಾಧ್ಯವಾಗುವುದಿಲ್ಲ' ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/congress-minority-muslim-votes-araga-jnanendra-bjp-874123.html" target="_blank">ಅಲ್ಪಸಂಖ್ಯಾತರ ಮತಗಳಿಗೆ ಜೊಲ್ಲು ಸುರಿಸುವ ಕಾಂಗ್ರೆಸ್:ಆರಗಜ್ಞಾನೇಂದ್ರ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>