<p><strong>ಬೆಂಗಳೂರು:</strong> ಬಿಜೆಪಿಯಲ್ಲಿ ಹಿರಿಯರಿಗೆ ಬೆಲೆ ಇಲ್ಲ ಎನ್ನುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ಇತಿಹಾಸ ಮರೆತಂತೆ ಕಾಣುತ್ತದೆ ಎಂದು ಬಿಜೆಪಿಯ ಕರ್ನಾಟಕ ಘಟಕ ಟ್ವೀಟ್ ಮಾಡಿದೆ.</p>.<p>ಸುರ್ಜೇವಾಲ ಹೇಳಿಕೆಗೆ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ, ‘ಗಾಂಧಿ ಕುಟುಂಬದ ಏಳಿಗೆಗಾಗಿ ನೀವು ಅಪಮಾನಿಸಿದ ನಾಯಕರ ಪಟ್ಟಿ ಕೊಡಬೇಕೇ, ಸುರ್ಜೇವಾಲ’ ಎಂದು ಪ್ರಶ್ನಿಸಿದೆ.</p>.<p><strong>ಓದಿ:</strong><a href="https://www.prajavani.net/karnataka-news/karnataka-cabinet-expansion-chief-minister-basavaraj-bommai-to-delhi-853733.html" itemprop="url">ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ</a></p>.<p>‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಎರಡೆರಡು ಬಾರಿ ಸೋಲಿಸಿದ್ದು ಕಾಂಗ್ರೆಸ್ ಎಂಬುದನ್ನು ದೇಶದ ಜನರು ಮರೆತಿಲ್ಲ. ಹಿರಿಯ ನಾಯಕ, ದಲಿತ ಮುತ್ಸದ್ಧಿಯೊಬ್ಬರಿಗೆ ಕಾಂಗ್ರೆಸ್ ಪಕ್ಷ ನೀಡಿದ ಗೌರವದ ಪರಿ ಇದುವೆಯಾ’ ಎಂದು #ಕುತಂತ್ರಿಕಾಂಗ್ರೆಸ್ ಎಂಬ ಹ್ಯಾಷ್ಟ್ಯಾಗ್ ಮೂಲಕ ಬಿಜೆಪಿ ಪ್ರಶ್ನಿಸಿದೆ.</p>.<p>‘ಸೀತಾರಾಂ ಕೇಸರಿಯವರನ್ನು ಶೌಚಾಲಯದಲ್ಲಿ ಕೂಡಿ ಹಾಕಿದ್ದು, ಪಿ.ವಿ. ನರಸಿಂಹರಾವ್ ಪಾರ್ಥಿವ ಶರೀರಕ್ಕೆ ಪಕ್ಷದ ಕಚೇರಿಯಲ್ಲಿ ಗೌರವ ಸಲ್ಲಿಕೆಗೆ ಅವಕಾಶ ತಪ್ಪಿಸಿದ್ದು ಯಾವ ರೀತಿಯ ಗೌರವ? ಕಾಂಗ್ರೆಸ್ ಪಕ್ಷವು ಹಿರಿಯರಿಗೆ ಕೊಡುವ ಗೌರವದ ಪರಿ ಇದುವೇ’ ಎಂದು ಬಿಜೆಪಿ ಟ್ವೀಟ್ನಲ್ಲಿ ಉಲ್ಲೇಖಿಸಿದೆ.</p>.<p><strong>ಓದಿ:</strong><a href="https://www.prajavani.net/india-news/cong-james-bond-of-spying-when-in-govt-pegasus-a-fabricated-issue-naqvi-853693.html" itemprop="url">ಕಾಂಗ್ರೆಸ್ಸಿಗರು ‘ಬೇಹುಗಾರಿಕೆಯ ಜೇಮ್ಸ್ಬಾಂಡ್ಗಳು’: ಕೇಂದ್ರ ಸಚಿವ ನಖ್ವಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಜೆಪಿಯಲ್ಲಿ ಹಿರಿಯರಿಗೆ ಬೆಲೆ ಇಲ್ಲ ಎನ್ನುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಾಂಗ್ರೆಸ್ ಇತಿಹಾಸ ಮರೆತಂತೆ ಕಾಣುತ್ತದೆ ಎಂದು ಬಿಜೆಪಿಯ ಕರ್ನಾಟಕ ಘಟಕ ಟ್ವೀಟ್ ಮಾಡಿದೆ.</p>.<p>ಸುರ್ಜೇವಾಲ ಹೇಳಿಕೆಗೆ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ, ‘ಗಾಂಧಿ ಕುಟುಂಬದ ಏಳಿಗೆಗಾಗಿ ನೀವು ಅಪಮಾನಿಸಿದ ನಾಯಕರ ಪಟ್ಟಿ ಕೊಡಬೇಕೇ, ಸುರ್ಜೇವಾಲ’ ಎಂದು ಪ್ರಶ್ನಿಸಿದೆ.</p>.<p><strong>ಓದಿ:</strong><a href="https://www.prajavani.net/karnataka-news/karnataka-cabinet-expansion-chief-minister-basavaraj-bommai-to-delhi-853733.html" itemprop="url">ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ</a></p>.<p>‘ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಎರಡೆರಡು ಬಾರಿ ಸೋಲಿಸಿದ್ದು ಕಾಂಗ್ರೆಸ್ ಎಂಬುದನ್ನು ದೇಶದ ಜನರು ಮರೆತಿಲ್ಲ. ಹಿರಿಯ ನಾಯಕ, ದಲಿತ ಮುತ್ಸದ್ಧಿಯೊಬ್ಬರಿಗೆ ಕಾಂಗ್ರೆಸ್ ಪಕ್ಷ ನೀಡಿದ ಗೌರವದ ಪರಿ ಇದುವೆಯಾ’ ಎಂದು #ಕುತಂತ್ರಿಕಾಂಗ್ರೆಸ್ ಎಂಬ ಹ್ಯಾಷ್ಟ್ಯಾಗ್ ಮೂಲಕ ಬಿಜೆಪಿ ಪ್ರಶ್ನಿಸಿದೆ.</p>.<p>‘ಸೀತಾರಾಂ ಕೇಸರಿಯವರನ್ನು ಶೌಚಾಲಯದಲ್ಲಿ ಕೂಡಿ ಹಾಕಿದ್ದು, ಪಿ.ವಿ. ನರಸಿಂಹರಾವ್ ಪಾರ್ಥಿವ ಶರೀರಕ್ಕೆ ಪಕ್ಷದ ಕಚೇರಿಯಲ್ಲಿ ಗೌರವ ಸಲ್ಲಿಕೆಗೆ ಅವಕಾಶ ತಪ್ಪಿಸಿದ್ದು ಯಾವ ರೀತಿಯ ಗೌರವ? ಕಾಂಗ್ರೆಸ್ ಪಕ್ಷವು ಹಿರಿಯರಿಗೆ ಕೊಡುವ ಗೌರವದ ಪರಿ ಇದುವೇ’ ಎಂದು ಬಿಜೆಪಿ ಟ್ವೀಟ್ನಲ್ಲಿ ಉಲ್ಲೇಖಿಸಿದೆ.</p>.<p><strong>ಓದಿ:</strong><a href="https://www.prajavani.net/india-news/cong-james-bond-of-spying-when-in-govt-pegasus-a-fabricated-issue-naqvi-853693.html" itemprop="url">ಕಾಂಗ್ರೆಸ್ಸಿಗರು ‘ಬೇಹುಗಾರಿಕೆಯ ಜೇಮ್ಸ್ಬಾಂಡ್ಗಳು’: ಕೇಂದ್ರ ಸಚಿವ ನಖ್ವಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>