‘ಯಡಿಯೂರಪ್ಪ ಅವರ ಪರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ನನಗೆ ನೋಟಿಸ್ ನೀಡಲಾಗಿದೆ. ಇನ್ನು ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡದಂತೆ ಯಡಿಯೂರಪ್ಪ ಸೂಚಿಸಿದ್ದಾರೆ. ಅವರ ಸೂಚನೆಯನ್ನು ಪಾಲಿಸುತ್ತೇನೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶೀಘ್ರದಲ್ಲಿ ಭೇಟಿಮಾಡಿ ಬಿಜೆಪಿ ರಾಜ್ಯ ಘಟಕದಲ್ಲಿನ ಬೆಳವಣಿಗೆಗಳ ಕುರಿತು ತಿಳಿಸುತ್ತೇನೆ. ನಾನು ಸುಮ್ಮನೆ ಕೂರುವುದಿಲ್ಲ’ ಎಂದು ರೇಣುಕಾಚಾರ್ಯ ಹೇಳಿದರು.