<p><strong>ಬೆಂಗಳೂರು: </strong>‘ನಾನು ಹೊನ್ನಾಳಿಯ ಮಧ್ಯಕರ್ನಾಟಕ ಭಾಗದವನು. ಉತ್ತರ ಕರ್ನಾಟಕವನ್ನು ಗೌರವಿಸುತ್ತೇನೆ. ನಾನು ಹೊನ್ನಾಳಿಯ ಅಂಜದ ಗಂಡು’ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ವಿನಾ ಕಾರಣ ಪಕ್ಷ, ನಾಯಕರ ಬಗ್ಗೆ ಮಾತನಾಡಬಾರದು. ಪಕ್ಷ ತಾಯಿ ಸಮಾನ. ನಾನು ತಾಯಿಯನ್ನು ಗೌರವಿಸುತ್ತೇನೆ. ಯಡಿಯೂರಪ್ಪ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದಿಂದಲೇ ಬಂದು ಈಗ ಮುಖ್ಯಮಂತ್ರಿ ಆಗಿದ್ದಾರೆ’ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-politics-bs-yediyurappa-bjp-basangouda-patil-yatnal-govind-karjol-793862.html" target="_blank">ನಾನು ಯಾವುದಕ್ಕೂ ಅಂಜುವ ಮಗ ಅಲ್ಲ; ಮತ್ತೆ ಗುಡುಗಿದ ಶಾಸಕ ಯತ್ನಾಳ್</a></strong></p>.<p>‘ಹಾಗೆಂದು ಯಡಿಯೂರಪ್ಪ ಪರವಾಗಿಯೂ ಬ್ಯಾಟಿಂಗ್ ಮಾಡುತ್ತಿಲ್ಲ. ಯಡಿಯೂರಪ್ಪ ಅವರನ್ನು ಸಮರ್ಥನೆ ಮಾಡಿಕೊಳ್ಳದೆ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ’ ಎಂದು ಪ್ರಶ್ನಿಸಿದರು.</p>.<p>‘ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ. ನಾನು ಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ದೇನೆ. ಯಾರಿಗೂ ಹೆದರುವವನು ಅಲ್ಲ. ಯಾರನ್ನೂ ಹೆದರಿಸಿಲ್ಲ’ ಎಂದೂ ಹೇಳಿದರು.</p>.<p>ಯತ್ನಾಳ್ ಹೆಸರು ಪ್ರಸ್ತಾಪಿಸದೆ ಮಾತನಾಡಿದ ರೇಣುಕಾಚಾರ್ಯ, ‘ಹೊನ್ನಾಳಿಯ ಹೊಡೆತ ಇಡೀ ರಾಜ್ಯಕ್ಕೆ ಗೊತ್ತು. ವರ್ಷಕ್ಕೆ ಎರಡು ಬಾರಿ ಕುಸ್ತಿ ನಡೆಯುತ್ತದೆ. ಅದೂ ದೊಡ್ಡಮಟ್ಟದಲ್ಲಿ ನಡೆಯುತ್ತದೆ’ ಎಂದು ಕುಟುಕಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-politics-bs-yediyurappa-bjp-basangouda-patil-yatnal-mp-renukacharya-793595.html" target="_blank">ಬಿಎಸ್ವೈ ತಂದೆ ಸಮಾನ, ಪಕ್ಷ ತಾಯಿ ಸಮಾನ; ಯತ್ನಾಳ ವಿರುದ್ಧ ರೇಣುಕಾಚಾರ್ಯ ಗರಂ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ನಾನು ಹೊನ್ನಾಳಿಯ ಮಧ್ಯಕರ್ನಾಟಕ ಭಾಗದವನು. ಉತ್ತರ ಕರ್ನಾಟಕವನ್ನು ಗೌರವಿಸುತ್ತೇನೆ. ನಾನು ಹೊನ್ನಾಳಿಯ ಅಂಜದ ಗಂಡು’ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ವಿನಾ ಕಾರಣ ಪಕ್ಷ, ನಾಯಕರ ಬಗ್ಗೆ ಮಾತನಾಡಬಾರದು. ಪಕ್ಷ ತಾಯಿ ಸಮಾನ. ನಾನು ತಾಯಿಯನ್ನು ಗೌರವಿಸುತ್ತೇನೆ. ಯಡಿಯೂರಪ್ಪ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದಿಂದಲೇ ಬಂದು ಈಗ ಮುಖ್ಯಮಂತ್ರಿ ಆಗಿದ್ದಾರೆ’ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-politics-bs-yediyurappa-bjp-basangouda-patil-yatnal-govind-karjol-793862.html" target="_blank">ನಾನು ಯಾವುದಕ್ಕೂ ಅಂಜುವ ಮಗ ಅಲ್ಲ; ಮತ್ತೆ ಗುಡುಗಿದ ಶಾಸಕ ಯತ್ನಾಳ್</a></strong></p>.<p>‘ಹಾಗೆಂದು ಯಡಿಯೂರಪ್ಪ ಪರವಾಗಿಯೂ ಬ್ಯಾಟಿಂಗ್ ಮಾಡುತ್ತಿಲ್ಲ. ಯಡಿಯೂರಪ್ಪ ಅವರನ್ನು ಸಮರ್ಥನೆ ಮಾಡಿಕೊಳ್ಳದೆ ಕುಮಾರಸ್ವಾಮಿಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವೇ’ ಎಂದು ಪ್ರಶ್ನಿಸಿದರು.</p>.<p>‘ನಾನು ನಾಲ್ಕು ಬಾರಿ ಶಾಸಕನಾಗಿದ್ದೇನೆ. ನಾನು ಮಂತ್ರಿಯಾಗಿದ್ದಾಗ ಸಾಕಷ್ಟು ಕೆಲಸ ಮಾಡಿದ್ದೇನೆ. ಯಾರಿಗೂ ಹೆದರುವವನು ಅಲ್ಲ. ಯಾರನ್ನೂ ಹೆದರಿಸಿಲ್ಲ’ ಎಂದೂ ಹೇಳಿದರು.</p>.<p>ಯತ್ನಾಳ್ ಹೆಸರು ಪ್ರಸ್ತಾಪಿಸದೆ ಮಾತನಾಡಿದ ರೇಣುಕಾಚಾರ್ಯ, ‘ಹೊನ್ನಾಳಿಯ ಹೊಡೆತ ಇಡೀ ರಾಜ್ಯಕ್ಕೆ ಗೊತ್ತು. ವರ್ಷಕ್ಕೆ ಎರಡು ಬಾರಿ ಕುಸ್ತಿ ನಡೆಯುತ್ತದೆ. ಅದೂ ದೊಡ್ಡಮಟ್ಟದಲ್ಲಿ ನಡೆಯುತ್ತದೆ’ ಎಂದು ಕುಟುಕಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-politics-bs-yediyurappa-bjp-basangouda-patil-yatnal-mp-renukacharya-793595.html" target="_blank">ಬಿಎಸ್ವೈ ತಂದೆ ಸಮಾನ, ಪಕ್ಷ ತಾಯಿ ಸಮಾನ; ಯತ್ನಾಳ ವಿರುದ್ಧ ರೇಣುಕಾಚಾರ್ಯ ಗರಂ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>