<p><strong>ಮಂಡ್ಯ:</strong> ‘ಬಿಹಾರ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ರಚನೆ ಆಗಬಹುದೇನೋ. ಆದರೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷಕ್ಕೆ ಬಿಟ್ಟಿದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘34 ಮಂದಿ ಸಚಿವರಾಗಿದ್ದಾರೆ. ಉಳಿದ ಆಕಾಂಕ್ಷಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಮುಖ್ಯಮಂತ್ರಿ ಅವರು ಕರೆದಿರುವ ಡಿನ್ನರ್ ಮೀಟಿಂಗ್ಗೂ ರಾಜಕೀಯಕ್ಕೂ ಸಂಬಂಧವಿಲ್ಲ, ವಿರೋಧ ಮಾಡುವವರು ಸಲ್ಲದ ಮಾತು ಹೇಳುತ್ತಿದ್ದಾರೆ ಅಷ್ಟೆ’ ಎಂದು ಪ್ರತಿಪಾದಿಸಿದರು.</p>.<div><blockquote>ಕಾಂಗ್ರೆಸ್ ನಾಯಕರೇ ಹೇಳಿದಂತೆ ನವೆಂಬರ್ಗೆ ಕ್ರಾಂತಿ ಆಗುವುದೋ ಜನವರಿಯಲ್ಲಿ ಸಂಕ್ರಾಂತಿ ಆಗುವುದೋ ಗೊತ್ತಿಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿಯಾಗುವುದು ನಿಶ್ಚಿತ</blockquote><span class="attribution">ಬಿ.ಶ್ರೀರಾಮುಲು ಬಿಜೆಪಿ ನಾಯಕ ಮಾಜಿ ಸಚಿವ</span></div>.<h2>ಸಿ.ಎಂ ಯಾಕಾಗಬಾರದು –ಪರಮೇಶ್ವರ್ </h2>.<p><strong>ಹುಬ್ಬಳ್ಳಿ:</strong> ‘ಮುಖ್ಯಮಂತ್ರಿ ಆಗುವ ಅಸೆ ಇದೆಯೇ’ ಎಂಬ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ‘ಯಾಕಾಗಬಾರದು? ಎಂದು ಪ್ರಶ್ನಿಸಿದ್ದಾರೆ. ಇಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ‘ಎಲ್ಲ ಶಾಸಕರಿಗೆ ಸಚಿವರಾಗುವ ಆಸೆ ಇರುತ್ತದೆ. ಸಂಪುಟ ಪುನರ್ ರಚನೆ 3 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿ ವಿಷಯಗಳ ಬಗ್ಗೆ ಮುಖ್ಯಮಂತ್ರಿ ವರಿಷ್ಠರು ನಿರ್ಧರಿಸುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಬಿಹಾರ ಚುನಾವಣೆ ಬಳಿಕ ಸಚಿವ ಸಂಪುಟ ಪುನರ್ರಚನೆ ಆಗಬಹುದೇನೋ. ಆದರೆ, ಮುಖ್ಯಮಂತ್ರಿ ಬದಲಾವಣೆ ವಿಚಾರ ಪಕ್ಷಕ್ಕೆ ಬಿಟ್ಟಿದ್ದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘34 ಮಂದಿ ಸಚಿವರಾಗಿದ್ದಾರೆ. ಉಳಿದ ಆಕಾಂಕ್ಷಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗುತ್ತದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಮುಖ್ಯಮಂತ್ರಿ ಅವರು ಕರೆದಿರುವ ಡಿನ್ನರ್ ಮೀಟಿಂಗ್ಗೂ ರಾಜಕೀಯಕ್ಕೂ ಸಂಬಂಧವಿಲ್ಲ, ವಿರೋಧ ಮಾಡುವವರು ಸಲ್ಲದ ಮಾತು ಹೇಳುತ್ತಿದ್ದಾರೆ ಅಷ್ಟೆ’ ಎಂದು ಪ್ರತಿಪಾದಿಸಿದರು.</p>.<div><blockquote>ಕಾಂಗ್ರೆಸ್ ನಾಯಕರೇ ಹೇಳಿದಂತೆ ನವೆಂಬರ್ಗೆ ಕ್ರಾಂತಿ ಆಗುವುದೋ ಜನವರಿಯಲ್ಲಿ ಸಂಕ್ರಾಂತಿ ಆಗುವುದೋ ಗೊತ್ತಿಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿಯಾಗುವುದು ನಿಶ್ಚಿತ</blockquote><span class="attribution">ಬಿ.ಶ್ರೀರಾಮುಲು ಬಿಜೆಪಿ ನಾಯಕ ಮಾಜಿ ಸಚಿವ</span></div>.<h2>ಸಿ.ಎಂ ಯಾಕಾಗಬಾರದು –ಪರಮೇಶ್ವರ್ </h2>.<p><strong>ಹುಬ್ಬಳ್ಳಿ:</strong> ‘ಮುಖ್ಯಮಂತ್ರಿ ಆಗುವ ಅಸೆ ಇದೆಯೇ’ ಎಂಬ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ‘ಯಾಕಾಗಬಾರದು? ಎಂದು ಪ್ರಶ್ನಿಸಿದ್ದಾರೆ. ಇಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ‘ಎಲ್ಲ ಶಾಸಕರಿಗೆ ಸಚಿವರಾಗುವ ಆಸೆ ಇರುತ್ತದೆ. ಸಂಪುಟ ಪುನರ್ ರಚನೆ 3 ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿ ವಿಷಯಗಳ ಬಗ್ಗೆ ಮುಖ್ಯಮಂತ್ರಿ ವರಿಷ್ಠರು ನಿರ್ಧರಿಸುವರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>