<p><strong>ಹೊಸಪೇಟೆ (ವಿಜಯನಗರ):</strong> ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಸಭೆಯ ವೇಳೆ ನಾವೆಲ್ಲ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದೆವು. ಆಗ ಇಂತಿಷ್ಟು ಸಮಯಕ್ಕೆ ಸಿಎಂ ಎಂಬ ಷರತ್ತು ಇರಲಿಲ್ಲ, ಸದ್ಯಕ್ಕಂತೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.</p><p>ಇಲ್ಲಿಗೆ ಸಮೀಪದ ಬೈಲವದ್ದಿಗೇರಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್ಪಿ ಸಭೆಯ ಹೊರತಾಗಿ ಪಕ್ಷದ ವರಿಷ್ಠರು ಅಧಿಕಾರ ಹಂಚಿಕೆ ಬಗ್ಗೆ ಹೇಳಿದ್ದರೆ ಅದು ನನಗೆ ಗೊತ್ತಿಲ್ಲ, ಅದರ ಬಗ್ಗೆ ವರಿಷ್ಠರೇ ಹೇಳುತ್ತಾರೆ ಎಂದರು.</p><p>‘ನಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿಎಂ, ಡಿಸಿಎಂ ಇಬ್ಬರೂ ಹೇಳಿದ್ದಾರೆ. ವರಿಷ್ಠರ ಸೂಚನೆಯಂತೆ ನಡೆದುಕೊಳ್ಳುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ನ ಯಾವ ಶಾಸಕರೂ ಮಾರಾಟಕ್ಕಿಲ್ಲ, ಬರೀ ಬೆಂಕಿ ಹಚ್ಚುವುದಷ್ಟೇ ಬಿಜೆಪಿ ಕೆಲಸ’ ಎಂದರು.</p><p><strong>ಸೋನಿಯಾ ಇಲ್ಲದಿದ್ದರೆ...:</strong> ಸೋನಿಯಾ ಗಾಂಧಿ ಅವರು ಪಕ್ಷದ ಚುಕ್ಕಾಣಿ ಹಿಡಿಯದೆ ಇದ್ದಿದ್ದರೆ ಬಿಜೆಪಿಯವರು ಹೇಳುತ್ತಿರುವಂತೆ ದೇಶ ಎಂದೋ ಕಾಂಗ್ರೆಸ್ ಮುಕ್ತ ಆಗಿಬಿಟ್ಟಿರುತ್ತಿತ್ತು ಎಂದು ಕೆ.ಜೆ.ಜಾರ್ಜ್ ಅವರು ಇದಕ್ಕೆ ಮೊದಲು ನಡೆದ ಸಮಾರಂಭದಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ಸಭೆಯ ವೇಳೆ ನಾವೆಲ್ಲ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ದೆವು. ಆಗ ಇಂತಿಷ್ಟು ಸಮಯಕ್ಕೆ ಸಿಎಂ ಎಂಬ ಷರತ್ತು ಇರಲಿಲ್ಲ, ಸದ್ಯಕ್ಕಂತೂ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.</p><p>ಇಲ್ಲಿಗೆ ಸಮೀಪದ ಬೈಲವದ್ದಿಗೇರಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಲ್ಪಿ ಸಭೆಯ ಹೊರತಾಗಿ ಪಕ್ಷದ ವರಿಷ್ಠರು ಅಧಿಕಾರ ಹಂಚಿಕೆ ಬಗ್ಗೆ ಹೇಳಿದ್ದರೆ ಅದು ನನಗೆ ಗೊತ್ತಿಲ್ಲ, ಅದರ ಬಗ್ಗೆ ವರಿಷ್ಠರೇ ಹೇಳುತ್ತಾರೆ ಎಂದರು.</p><p>‘ನಮ್ಮೊಳಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಿಎಂ, ಡಿಸಿಎಂ ಇಬ್ಬರೂ ಹೇಳಿದ್ದಾರೆ. ವರಿಷ್ಠರ ಸೂಚನೆಯಂತೆ ನಡೆದುಕೊಳ್ಳುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ನ ಯಾವ ಶಾಸಕರೂ ಮಾರಾಟಕ್ಕಿಲ್ಲ, ಬರೀ ಬೆಂಕಿ ಹಚ್ಚುವುದಷ್ಟೇ ಬಿಜೆಪಿ ಕೆಲಸ’ ಎಂದರು.</p><p><strong>ಸೋನಿಯಾ ಇಲ್ಲದಿದ್ದರೆ...:</strong> ಸೋನಿಯಾ ಗಾಂಧಿ ಅವರು ಪಕ್ಷದ ಚುಕ್ಕಾಣಿ ಹಿಡಿಯದೆ ಇದ್ದಿದ್ದರೆ ಬಿಜೆಪಿಯವರು ಹೇಳುತ್ತಿರುವಂತೆ ದೇಶ ಎಂದೋ ಕಾಂಗ್ರೆಸ್ ಮುಕ್ತ ಆಗಿಬಿಟ್ಟಿರುತ್ತಿತ್ತು ಎಂದು ಕೆ.ಜೆ.ಜಾರ್ಜ್ ಅವರು ಇದಕ್ಕೆ ಮೊದಲು ನಡೆದ ಸಮಾರಂಭದಲ್ಲಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>