<p><strong>ನವದೆಹಲಿ</strong>: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆಯೇ ಅಥವಾ ನಾನು ಹೇಳಿದ್ದೀನಾ?, ಪಕ್ಷದ ಸಂಘಟನೆ ಬಗ್ಗೆ ಮಾತ್ರ ಹೈಕಮಾಂಡ್ ನಾಯಕರನ್ನು ಭೇಟಿ ಆಗುತ್ತೇನೆ’ ಎಂದು ಅವರು ಹೇಳಿದ್ದಾರೆ. </p><p>‘ನಮ್ಮ ಹೈಕಮಾಂಡ್ ಏನು ಹೇಳುತ್ತಾರೊ ಹಾಗೇ ಕೇಳಿಕೊಂಡು ಹೋಗುತ್ತೇನೆ. ಐದು ವರ್ಷ, ಹತ್ತು ವರ್ಷ, ಹದಿನೈದು ವರ್ಷ... ಎಷ್ಟು ವರ್ಷ ಸಿಎಂ ಆಗಿರಬೇಕು ಎಂದು ಹೈಕಮಾಂಡ್ ಹೇಳುತ್ತಾರೆ. ನಮಗೆ ಹೇಳಿದ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ’ ಎಂದು ಅವರು ಹೇಳಿದ್ದಾರೆ.</p><p>‘ನಾನು ಪಕ್ಷದ ಚೌಕಟ್ಟು ಬಿಟ್ಟು ಏನನ್ನು ಮಾಡುವುದಿಲ್ಲ. ಯಾವ ನವೆಂಬರ್ ಕ್ರಾಂತಿಯೂ ಇಲ್ಲ. ಡಿಸೆಂಬರ್ ಇಲ್ಲ, ಜನವರಿ... ಫೆಬ್ರುವರಿ ಏನು ಇಲ್ಲ. ಬದಲಾಗಿ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕ್ರಾಂತಿ ಆಗಲಿದೆ’ ಎಂದು ಅವರು ನುಡಿದಿದ್ದಾರೆ. </p><p>2025, 2026ಕ್ಕೂ ಯಾವ ಕ್ರಾಂತಿಯೂ ಆಗುವುದಿಲ್ಲ. ಆಕಾಂಕ್ಷಿಗಳಿಗೆ ಏನನ್ನು ಹೇಳಬೇಕು ಅದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಸಂಪುಟ ಪುನಾರಚನೆ ಕುರಿತು ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆಯೇ ಅಥವಾ ನಾನು ಹೇಳಿದ್ದೀನಾ?, ಪಕ್ಷದ ಸಂಘಟನೆ ಬಗ್ಗೆ ಮಾತ್ರ ಹೈಕಮಾಂಡ್ ನಾಯಕರನ್ನು ಭೇಟಿ ಆಗುತ್ತೇನೆ’ ಎಂದು ಅವರು ಹೇಳಿದ್ದಾರೆ. </p><p>‘ನಮ್ಮ ಹೈಕಮಾಂಡ್ ಏನು ಹೇಳುತ್ತಾರೊ ಹಾಗೇ ಕೇಳಿಕೊಂಡು ಹೋಗುತ್ತೇನೆ. ಐದು ವರ್ಷ, ಹತ್ತು ವರ್ಷ, ಹದಿನೈದು ವರ್ಷ... ಎಷ್ಟು ವರ್ಷ ಸಿಎಂ ಆಗಿರಬೇಕು ಎಂದು ಹೈಕಮಾಂಡ್ ಹೇಳುತ್ತಾರೆ. ನಮಗೆ ಹೇಳಿದ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ’ ಎಂದು ಅವರು ಹೇಳಿದ್ದಾರೆ.</p><p>‘ನಾನು ಪಕ್ಷದ ಚೌಕಟ್ಟು ಬಿಟ್ಟು ಏನನ್ನು ಮಾಡುವುದಿಲ್ಲ. ಯಾವ ನವೆಂಬರ್ ಕ್ರಾಂತಿಯೂ ಇಲ್ಲ. ಡಿಸೆಂಬರ್ ಇಲ್ಲ, ಜನವರಿ... ಫೆಬ್ರುವರಿ ಏನು ಇಲ್ಲ. ಬದಲಾಗಿ 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ ಕ್ರಾಂತಿ ಆಗಲಿದೆ’ ಎಂದು ಅವರು ನುಡಿದಿದ್ದಾರೆ. </p><p>2025, 2026ಕ್ಕೂ ಯಾವ ಕ್ರಾಂತಿಯೂ ಆಗುವುದಿಲ್ಲ. ಆಕಾಂಕ್ಷಿಗಳಿಗೆ ಏನನ್ನು ಹೇಳಬೇಕು ಅದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>