ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

‘ಕೈ’ ಐದು ಗ್ಯಾರಂಟಿ; ಸಚಿವರಲ್ಲೇ ಭಿನ್ನರಾಗ

ಪರಿಷ್ಕರಣೆ ಅಗತ್ಯ–ಸತೀಶ * ಬದಲಿಸುವ, ಕತ್ತರಿಸುವ ಉದ್ದೇಶವಿಲ್ಲ– ಡಿಕೆಶಿ
Published : 15 ಆಗಸ್ಟ್ 2024, 0:37 IST
Last Updated : 15 ಆಗಸ್ಟ್ 2024, 0:37 IST
ಫಾಲೋ ಮಾಡಿ
Comments
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ
ಜಿ.ಪರಮೇಶ್ವರ
ಜಿ.ಪರಮೇಶ್ವರ
ಆರ್. ಅಶೋಕ
ಆರ್. ಅಶೋಕ
‘ಫಲಾನುಭವಿಗಳಿಗೆ ಗುರುತಿನ ಚೀಟಿ’ ‌‘
ಹೆಚ್ಚು ಆದಾಯ ಇರುವವರು ತೆರಿಗೆ ಪಾವತಿದಾರರು ಕೂಡ ಗ್ಯಾರಂಟಿ ಯೋಜನೆಗಳನ್ನು ಪಡೆಯುತ್ತಿದ್ದಾರೆಂದು ಕೆಲವರು ದೂರಿದ್ದಾರೆ. ಅಂತಹ ಪ್ರಕರಣಗಳನ್ನು ಪರಿಶೀಲಿಸಲಾಗುವುದು. ಈ ಯೋಜನೆಗಳ ಫಲಾನುಭವಿಗಳಿಗೆ ಗುರುತಿನ ಚೀಟಿ ವಿತರಿಸಲು ಆಲೋಚಿಸುತ್ತಿದ್ದೇವೆ. ಈ ವಿಚಾರವಾಗಿ ಗ್ಯಾರಂಟಿ ಸಮಿತಿ ಪರಿಶೀಲನೆ ಮಾಡಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ‘ಗ್ಯಾರಂಟಿ ಯೋಜನೆಗಳಿಂ‌ದಾಗಿ ಶಾಸಕರಿಗೆ ನೀಡುವ ಅನುದಾನ ಕೊರತೆಯಾಗಿದೆ ಎಂದು ಸಚಿವರು ಅಸಮಾಧಾನಗೊಂಡಿದ್ದಾರೆ’ ಎಂದು ಹೇಳಿದಾಗ ‘ಅದೆಲ್ಲ‌ ಸುಳ್ಳು ನಮ್ಮ ಸರ್ಕಾರ ಇಂತಹ ದೊಡ್ಡ ಯೋಜನೆ ಜಾರಿ ಮಾಡಿದೆ ಎಂಬ ಕಾರಣಕ್ಕೆ ವಿರೋಧ ಪಕ್ಷದವರು ಅಸೂಯೆಗೊಂಡಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲವೆಂದು ಯಾವ ಸಚಿವರೂ ಹೇಳಿಲ್ಲ’ ಎಂದರು. ‘ಬಿಜೆಪಿಯವರು ನೂರು ಜನ್ಮ ಎತ್ತಿಬಂದರೂ ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದೂ ಹೇಳಿದರು.
‘ಮಿತಿ ಹಾಕಿದರೆ ₹10 ಸಾವಿರ ಕೋಟಿ ಉಳಿತಾಯ’
‘ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ನಾನು ಹೈಕಮಾಂಡ್‌ಗೆ ಹೇಳಿಲ್ಲ. ಬದಲಾಗಿ ಕೆಲವು ಮಿತಿಗಳನ್ನು ಹೇರಬೇಕೆಂದು ಸಲಹೆ ನೀಡಿದ್ದೇನೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು ‘ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ ಶ್ರೀಮಂತರನ್ನು ಹೊರಗಿಡಬೇಕು. ಇದರಿಂದ ವಾರ್ಷಿಕ ₹10 ಸಾವಿರ ಕೋಟಿ ಉಳಿತಾಯ ಆಗಲಿದೆ. ಸದ್ಯ ಅಮೆರಿಕ ಮೂಲದ ವೈದ್ಯರು ಕೂಡಾ ಯೋಜನೆಯ ಲಾಭ ಪಡೆಯುತ್ತಿದ್ದಾರೆ’ ಎಂದರು. ‘ಗ್ಯಾರಂಟಿ’ಗಳು ಬಡವರಿಗೆ ತಲುಪಬೇಕು ಶ್ರೀಮಂತರಿಗೆ ಬೇಡ ಎಂದು ಜನರು ಹೇಳುತ್ತಿದ್ದಾರೆ. ಜನರ ಅಭಿಪ್ರಾಯವನ್ನು ಹೈಕಮಾಂಡ್‌ಗೆ ವಿವರವಾಗಿ ತಿಳಿಸಿದ್ದೇನೆ. ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದ ಜನಪ್ರಿಯತೆ ಹೆಚ್ಚಲಿದೆ’ ಎಂದರು. ‘ರಾಜ್ಯದಲ್ಲಿ ಶೇ 82ರಷ್ಟು ಬಿಪಿಎಲ್ ಕುಟುಂಬಗಳಿವೆ. ಆ ಕುಟುಂಬಗಳು ಗ್ಯಾರಂಟಿಗಳ ಪ್ರಯೋಜನ ಪಡೆಯಬೇಕೆಂಬುದು ಗುರಿ. ಹೀಗಾಗಿ ಈ ಯೋಜನೆಗಳ ಬಗ್ಗೆ ಸಮಗ್ರ ಪರಾಮರ್ಶೆಯ ಅಗತ್ಯವಿದೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.
ಸಂಪನ್ಮೂಲವೇ ಇಲ್ಲದೆ ಗ್ಯಾರಂಟಿ ಜಾರಿ: ಅಶೋಕ್ ವ್ಯಂಗ್ಯ
ಕಾಂಗ್ರೆಸ್ ಸರ್ಕಾರ ‘ಸಂಪನ್ಮೂಲ’ದ ಗ್ಯಾರಂಟಿಯೇ ಇಲ್ಲದೇ ಜನರಿಗೆ ಟೋಪಿ ಹಾಕಲು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಈಗ ಕಾಂಗ್ರೆಸ್‌ ಪಕ್ಷದ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿಗೆ ಬಂದಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು ‘ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಆದರೆ ಈಗಿನ ಸ್ಥಿತಿಯಲ್ಲಿ ಸರ್ಕಾರ ಬಳಿ ಹಣವೇ ಇಲ್ಲ. ಆದರೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ’ ಎಂದರು. ಹಣಕಾಸು ಸ್ಥಿತಿಯನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ವಿವಿಧ ಇಲಾಖೆಗಳು ನಷ್ಟದಲ್ಲಿವೆ ಎಂದು ಅವರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT