ನಗರದ ಸಿವಿಲ್ ಕೋರ್ಟ್ ಮುಂಭಾಗದಲ್ಲಿ ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ನಮ್ಮ ಜಾಹೀರಾತುಗಳ ಬಗ್ಗೆ ಬಿಜೆಪಿಯವರು ಖಾಸಗಿ ದೂರು ನೀಡಿದ್ದಾರೆ. ನಾವು ಸುಮ್ಮನೆ ಜಾಹೀರಾತು ನೀಡಿಲ್ಲ. ಬಿಜೆಪಿ ನಾಯಕರ, ಸಚಿವರ ಹೇಳಿಕೆಗಳ ಆಧಾರದ ಮೇಲೆ ಹಾಗೂ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಆಧರಿಸಿ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ಪತ್ರಿಕಾ ಜಾಹೀರಾತು ನೀಡಿದ್ದೆವು. ಇದನ್ನೆಲ್ಲಾ ನಾವು ಸಾಬೀತು ಮಾಡುತ್ತೇವೆ’ ಎಂದರು.