<p><strong>ಬೆಂಗಳೂರು:</strong> ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕ ನಿಗದಿಯಾದ ಬೆನ್ನಲ್ಲೇ, ಅವರ ಉಡುಗೆ–ತೊಡುಗೆ ಸೇರಿದಂತೆ ‘ಭಗವದ್ಗೀತೆ’ಯಲ್ಲಿನ ವಾಕ್ಯಗಳನ್ನು ಉಲ್ಲೇಖಿಸಿದ್ದರ ಕುರಿತಾದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p><p>‘ಶುಭಗಳಿಗೆ ಬರಬೇಕಾದ್ರೆ ಯಾರೂ ಯಾರನ್ನೂ ತಡೆಯಲಿಕ್ಕೆ ಸಾಧ್ಯವಿಲ್ಲ’ ಎಂದು ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಖಾಸಗಿ ವಾಹಿನಿಯಲ್ಲಿ ಮಾತನಾಡಿದ್ದರು. </p><p>‘ಒಂದು ತಿಳ್ಕೊಳ್ಳಿ. ಶುಭಗಳಿಗೆ ಬರಬೇಕಾದ್ರೆ ಯಾರೂ ಯಾರನ್ನೂ ತಡೆಯಲಿಕ್ಕೆ ಸಾಧ್ಯ ಇಲ್ಲ. ಆ ಘಳಿಗೆ ಆ ಮುಹೂರ್ತ ಯಾವ ಕಾಲಕ್ಕೆ ಬರಬೇಕೋ ಬರ್ತದೆ. ನಮ್ಮ ಡ್ಯೂಟಿ ನಾವು ಕೆಲಸ ಮಾಡಿಕೊಂಡು ಹೋಗುತ್ತಾ ಇರ್ತೀವಿ. ಭಗವದ್ಗೀತೆಯಲ್ಲಿ ಹೇಳಿದ ಹಾಗೆ ‘ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ’. ಅಂದರೆ, ನಾವು ಮಾಡುವ ಪ್ರಯತ್ನವನ್ನು ಮಾಡಬೇಕು. ಫಲಾಫಲಗಳನ್ನು ದೇವರಿಗೆ ಬಿಡಬೇಕು’ ಎಂದು ಡಿಕೆಶಿ ಹೇಳಿಕೊಂಡಿದ್ದರು. </p><p>ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಬುಧವಾರ) ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.</p>.ಯಶಸ್ಸು ಸಿಗಲು ಧರ್ಮರಾಯ, ಕರ್ಣ, ಅರ್ಜುನ,ಕೃಷ್ಣನ ತಂತ್ರ ಅನುಸರಿಸಬೇಕು ಎಂದಿದ್ದ DK.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನಾಂಕ ನಿಗದಿಯಾದ ಬೆನ್ನಲ್ಲೇ, ಅವರ ಉಡುಗೆ–ತೊಡುಗೆ ಸೇರಿದಂತೆ ‘ಭಗವದ್ಗೀತೆ’ಯಲ್ಲಿನ ವಾಕ್ಯಗಳನ್ನು ಉಲ್ಲೇಖಿಸಿದ್ದರ ಕುರಿತಾದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p><p>‘ಶುಭಗಳಿಗೆ ಬರಬೇಕಾದ್ರೆ ಯಾರೂ ಯಾರನ್ನೂ ತಡೆಯಲಿಕ್ಕೆ ಸಾಧ್ಯವಿಲ್ಲ’ ಎಂದು ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಖಾಸಗಿ ವಾಹಿನಿಯಲ್ಲಿ ಮಾತನಾಡಿದ್ದರು. </p><p>‘ಒಂದು ತಿಳ್ಕೊಳ್ಳಿ. ಶುಭಗಳಿಗೆ ಬರಬೇಕಾದ್ರೆ ಯಾರೂ ಯಾರನ್ನೂ ತಡೆಯಲಿಕ್ಕೆ ಸಾಧ್ಯ ಇಲ್ಲ. ಆ ಘಳಿಗೆ ಆ ಮುಹೂರ್ತ ಯಾವ ಕಾಲಕ್ಕೆ ಬರಬೇಕೋ ಬರ್ತದೆ. ನಮ್ಮ ಡ್ಯೂಟಿ ನಾವು ಕೆಲಸ ಮಾಡಿಕೊಂಡು ಹೋಗುತ್ತಾ ಇರ್ತೀವಿ. ಭಗವದ್ಗೀತೆಯಲ್ಲಿ ಹೇಳಿದ ಹಾಗೆ ‘ಕರ್ಮಣ್ಯೇ ವಾಧಿಕಾರಸ್ತೇ ಮಾ ಫಲೇಷು ಕದಾಚನ’. ಅಂದರೆ, ನಾವು ಮಾಡುವ ಪ್ರಯತ್ನವನ್ನು ಮಾಡಬೇಕು. ಫಲಾಫಲಗಳನ್ನು ದೇವರಿಗೆ ಬಿಡಬೇಕು’ ಎಂದು ಡಿಕೆಶಿ ಹೇಳಿಕೊಂಡಿದ್ದರು. </p><p>ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು (ಬುಧವಾರ) ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.</p>.ಯಶಸ್ಸು ಸಿಗಲು ಧರ್ಮರಾಯ, ಕರ್ಣ, ಅರ್ಜುನ,ಕೃಷ್ಣನ ತಂತ್ರ ಅನುಸರಿಸಬೇಕು ಎಂದಿದ್ದ DK.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>