ರಾಜ್ಯ ರಾಜಕಾರಣದಲ್ಲಿ ಈಗ ಆಪರೇಷನ್ ಕಮಲದ ಚರ್ಚೆ ಜೋರಾಗ್ತಿದೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ರಮೇಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ ಬೆಳಗಾವಿಯಲ್ಲಿ ದಿಢೀರ್ ಸುದ್ದಿಗೋಷ್ಟಿ ನಡೆಸಿರುವ ರಮೇಶ್ ಡಿಕೆಶಿವಕುಮಾರ್ ಪುಕ್ಕಲ ಎಂದು ಟೀಕೆ ಮಾಡಿದ್ದಾರೆ.