‘ದೂರುದಾರರು ತಮ್ಮ ಆರೋಪಗಳನ್ನು ಸಾಬೀತುಪಡಿಸುವಂತಹ ಒಂದೇ ಒಂದು ತುಣುಕು ದಾಖಲೆಯನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ. ಹೀಗಾಗಿ, ಅವರು ತಮ್ಮ ಆರೋಪ ಸಾಬೀತುಪಡಿಸುವಲ್ಲಿ ವಿಫಲವಾಗಿದ್ದಾರೆ. ಹೀಗಾಗಿ, ಐಪಿಸಿ ಕಲಂ 181 ರ ಅಡಿಯಲ್ಲಿ ಕುಮಾರಸ್ವಾಮಿ ಅವರು ಯಾವುದೇ ಅಪರಾಧ ಎಸಗಿಲ್ಲ‘ ಎಂದು ಆದೇಶದಲ್ಲಿ ವಿವರಿಸಲಾಗಿದೆ.