<p><strong>ಬೆಂಗಳೂರು:</strong> ತಾಂತ್ರಿಕ ಸಮಿತಿಯು ನೀಡಿದ ವರದಿ ಆಧಾರದ ಮೇಲೆ ತುಮಕೂರಿನಲ್ಲಿ ಹೇಮಾವತಿ ಎಕ್ಸ್ಪ್ರೆಸ್ ನಾಲೆ ಕಾಮಗಾರಿಯನ್ನು ಆರಂಭಿಸಲಾಗಿದೆ. ಬಿಜೆಪಿಯು ರಾಜಕೀಯ ಕಾರಣಗಳಿಗಾಗಿ ವಿರೋಧ ಮಾಡುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ₹1,500 ಕೋಟಿ ವೆಚ್ಚದಲ್ಲಿ ನಾಲೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಕೆಲಸ ಆರಂಭವಾಗುತ್ತಿದ್ದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ವಿರೋಧ ಮಾಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ನಾಲೆ ಕಾಮಗಾರಿ ಅನುಷ್ಠಾನಕ್ಕೆ ಜಲ ಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಲವು ಸಭೆಗಳನ್ನು ನಡೆಸಲಾಗಿತ್ತು. ಆ ಭಾಗದ ಸಂಸದರು, ಶಾಸಕರು ಭಾಗವಹಿಸಿದ್ದರು. ತಾಂತ್ರಿಕ ಸಮಿತಿ ರಚಿಸಲು ಒತ್ತಾಯಿಸಿದ್ದರು. ಸಮಿತಿ ಕಾಮಗಾರಿ ಕೈಗೊಳ್ಳಲು ಸಮ್ಮತಿ ನೀಡಿದ ನಂತರವೇ ಕಾಮಗಾರಿ ಆರಂಭಿಸಲಾಗಿದೆ. ಪ್ರಸ್ತಾವವನ್ನು ಸಮಿತಿ ತಿರಸ್ಕರಿಸಿದ್ದರೆ ಯೋಜನೆಯನ್ನೇ ರದ್ದು ಮಾಡುತ್ತಿದ್ದೆವು. ಈ ಎಲ್ಲ ವಿಷಯ ಗೊತ್ತಿದ್ದರೂ ಬಿಜೆಪಿ ಏಕೆ ವಿರೋಧ ಮಾಡುತ್ತಿದೆ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ತಾಂತ್ರಿಕ ಸಮಿತಿಯು ನೀಡಿದ ವರದಿ ಆಧಾರದ ಮೇಲೆ ತುಮಕೂರಿನಲ್ಲಿ ಹೇಮಾವತಿ ಎಕ್ಸ್ಪ್ರೆಸ್ ನಾಲೆ ಕಾಮಗಾರಿಯನ್ನು ಆರಂಭಿಸಲಾಗಿದೆ. ಬಿಜೆಪಿಯು ರಾಜಕೀಯ ಕಾರಣಗಳಿಗಾಗಿ ವಿರೋಧ ಮಾಡುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ₹1,500 ಕೋಟಿ ವೆಚ್ಚದಲ್ಲಿ ನಾಲೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಕೆಲಸ ಆರಂಭವಾಗುತ್ತಿದ್ದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ವಿರೋಧ ಮಾಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿದರು.</p>.<p>ಹೇಮಾವತಿ ಎಕ್ಸ್ಪ್ರೆಸ್ ನಾಲೆ ಕಾಮಗಾರಿ ಅನುಷ್ಠಾನಕ್ಕೆ ಜಲ ಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಲವು ಸಭೆಗಳನ್ನು ನಡೆಸಲಾಗಿತ್ತು. ಆ ಭಾಗದ ಸಂಸದರು, ಶಾಸಕರು ಭಾಗವಹಿಸಿದ್ದರು. ತಾಂತ್ರಿಕ ಸಮಿತಿ ರಚಿಸಲು ಒತ್ತಾಯಿಸಿದ್ದರು. ಸಮಿತಿ ಕಾಮಗಾರಿ ಕೈಗೊಳ್ಳಲು ಸಮ್ಮತಿ ನೀಡಿದ ನಂತರವೇ ಕಾಮಗಾರಿ ಆರಂಭಿಸಲಾಗಿದೆ. ಪ್ರಸ್ತಾವವನ್ನು ಸಮಿತಿ ತಿರಸ್ಕರಿಸಿದ್ದರೆ ಯೋಜನೆಯನ್ನೇ ರದ್ದು ಮಾಡುತ್ತಿದ್ದೆವು. ಈ ಎಲ್ಲ ವಿಷಯ ಗೊತ್ತಿದ್ದರೂ ಬಿಜೆಪಿ ಏಕೆ ವಿರೋಧ ಮಾಡುತ್ತಿದೆ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>