ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಪರೇಷನ್ ಹಸ್ತದ ಚರ್ಚೆ: ಕುತೂಹಲ ಮೂಡಿಸಿದ ಕಟ್ಟಾ– ಡಿಕೆಶಿ ಭೇಟಿ

Published 21 ಆಗಸ್ಟ್ 2023, 23:31 IST
Last Updated 21 ಆಗಸ್ಟ್ 2023, 23:31 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಕೆಲವು ಶಾಸಕರು ಮತ್ತೆ ಮಾತೃಪಕ್ಷ ಸೇರಲು ಮುಂದಾಗಿರುವ ಬೆನ್ನಲ್ಲೆ, ಮಾಜಿ ಸಚಿವ, ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ಆರಂಭಿಸಿರುವ ‘ಆಪರೇಷನ್ ಹಸ್ತ’ದ ಮಧ್ಯೆಯೇ ಕಟ್ಟಾ ಅವರು ಸದಾಶಿವನಗರದ ನಿವಾಸದಲ್ಲಿ ‌ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಬಿಜೆಪಿಗೆ ಅಖಂಡ?: ಮತ್ತೊಂದೆಡೆ, ವಿಧಾನಸಭೆ ಚುನಾವಣೆಯಲ್ಲಿ ಪುಲಿಕೇಶಿನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಮತ್ತೆ ಟಿಕೆಟ್‌ ಸಿಗದ ಕಾರಣಕ್ಕೆ ಬಿಎಸ್‌ಪಿ ಸೇರಿ ಕಣಕ್ಕಿಳಿದಿದ್ದ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದ ಹಾಲಿ ಸಂಸದ ಎಸ್. ಮುನಿಸ್ವಾಮಿಗೆ ಅವರಿಗೆ ಟಿಕೆಟ್​ ತಪ್ಪಬಹುದು ಎನ್ನಲಾಗುತ್ತಿದ್ದು, ಆ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿಯುಲು ಅಖಂಡ ಕಸರತ್ತು ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT