<p><strong>ನವದೆಹಲಿ:</strong> 2028ರಲ್ಲಿ ಮುಖ್ಯಮಂತ್ರಿಯಾಗಬೇಕು ಎಂದು ಕನಸು ಹೊತ್ತಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮತ್ತೆ ಪ್ರಯತ್ನ ನಡೆಸಿದ್ದಾರೆ. </p>.<p>ನವದೆಹಲಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿ, ಸುಮಾರು ಅರ್ಧ ಗಂಟೆ ಚರ್ಚಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. </p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲೇ ಡಿ.ಕೆ. ಶಿವಕುಮಾರ್ ಅವರು ಲೋಕಸಭಾ ಚುನಾವಣೆಯವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೈಕಮಾಂಡ್ ತಿಳಿಸಿತ್ತು. ಎರಡೂವರೆ ವರ್ಷ ಕಳೆದರೂ ಬದಲಾವಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಐದೂವರೆ ವರ್ಷಗಳಿಂದ ಶಿವಕುಮಾರ್ ಅವರೇ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕೆಂದು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ. </p>.<p>ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಶಿವಕುಮಾರ್ ಅವರನ್ನು ಎತ್ತಂಗಡಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ವರ್ಷದಿಂದ ಪ್ರಯತ್ನ ನಡೆಸುತ್ತಿದೆ. ಈ ಬಗ್ಗೆ ಈ ಹಿಂದೆಯೂ ಹೈಕಮಾಂಡ್ಗೆ ಮನವಿ ಸಲ್ಲಿಸಿತ್ತು. ಸತೀಶ ಜಾರಕಿಹೊಳಿ ಅಥವಾ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಈ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ಗೆ ಶಿಫಾರಸು ಮಾಡಿದ್ದರು. </p>.<p>ಅಧ್ಯಕ್ಷ ಸ್ಥಾನದಿಂದ ಶಿವಕುಮಾರ್ ಅವರನ್ನು ಕೆಳಗಿಳಿಸಿ ದುರ್ಬಲಗೊಳಿಸಬೇಕು ಎನ್ನುವುದು ಎದುರು ಬಣದ ಯೋಚನೆ. ಸಚಿವ ಸಂಪುಟ ಪುನರ್ರಚನೆಗೆ ಮುನ್ನವೇ ಅಧ್ಯಕ್ಷರ ಬದಲಾಯಿಸಬೇಕು ಎಂದು ಗಂಭೀರ ಪ್ರಯತ್ನ ನಡೆಸಿದೆ. ಇದರ ಭಾಗವಾಗಿಯೇ ಜಾರಕಿಹೊಳಿ ದೆಹಲಿ ಯಾತ್ರೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ನವೆಂಬರ್ ಕ್ರಾಂತಿ ಹಾಗೂ ಅಧಿಕಾರ ಹಸ್ತಾಂತರದ ಬಗ್ಗೆ ಪಕ್ಷದ ವಲಯದಲ್ಲಿ ನಿತ್ಯ ಚರ್ಚೆ ಆಗುತ್ತಿದೆ. ಈ ಗೊಂದಲ ನಿವಾರಿಸಬೇಕು. ನಾಯಕತ್ವ ಬದಲಾವಣೆ ಮಾಡಬಾರದು ಎಂದೂ ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2028ರಲ್ಲಿ ಮುಖ್ಯಮಂತ್ರಿಯಾಗಬೇಕು ಎಂದು ಕನಸು ಹೊತ್ತಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಗಾದಿಗೆ ಮತ್ತೆ ಪ್ರಯತ್ನ ನಡೆಸಿದ್ದಾರೆ. </p>.<p>ನವದೆಹಲಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಮಂಗಳವಾರ ರಾತ್ರಿ ಭೇಟಿ ಮಾಡಿ, ಸುಮಾರು ಅರ್ಧ ಗಂಟೆ ಚರ್ಚಿಸಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. </p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ಸಂದರ್ಭದಲ್ಲೇ ಡಿ.ಕೆ. ಶಿವಕುಮಾರ್ ಅವರು ಲೋಕಸಭಾ ಚುನಾವಣೆಯವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೈಕಮಾಂಡ್ ತಿಳಿಸಿತ್ತು. ಎರಡೂವರೆ ವರ್ಷ ಕಳೆದರೂ ಬದಲಾವಣೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಐದೂವರೆ ವರ್ಷಗಳಿಂದ ಶಿವಕುಮಾರ್ ಅವರೇ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನಕ್ಕೆ ನನ್ನನ್ನು ಪರಿಗಣಿಸಬೇಕೆಂದು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ. </p>.<p>ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಶಿವಕುಮಾರ್ ಅವರನ್ನು ಎತ್ತಂಗಡಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ವರ್ಷದಿಂದ ಪ್ರಯತ್ನ ನಡೆಸುತ್ತಿದೆ. ಈ ಬಗ್ಗೆ ಈ ಹಿಂದೆಯೂ ಹೈಕಮಾಂಡ್ಗೆ ಮನವಿ ಸಲ್ಲಿಸಿತ್ತು. ಸತೀಶ ಜಾರಕಿಹೊಳಿ ಅಥವಾ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಈ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ಗೆ ಶಿಫಾರಸು ಮಾಡಿದ್ದರು. </p>.<p>ಅಧ್ಯಕ್ಷ ಸ್ಥಾನದಿಂದ ಶಿವಕುಮಾರ್ ಅವರನ್ನು ಕೆಳಗಿಳಿಸಿ ದುರ್ಬಲಗೊಳಿಸಬೇಕು ಎನ್ನುವುದು ಎದುರು ಬಣದ ಯೋಚನೆ. ಸಚಿವ ಸಂಪುಟ ಪುನರ್ರಚನೆಗೆ ಮುನ್ನವೇ ಅಧ್ಯಕ್ಷರ ಬದಲಾಯಿಸಬೇಕು ಎಂದು ಗಂಭೀರ ಪ್ರಯತ್ನ ನಡೆಸಿದೆ. ಇದರ ಭಾಗವಾಗಿಯೇ ಜಾರಕಿಹೊಳಿ ದೆಹಲಿ ಯಾತ್ರೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. </p>.<p>ನವೆಂಬರ್ ಕ್ರಾಂತಿ ಹಾಗೂ ಅಧಿಕಾರ ಹಸ್ತಾಂತರದ ಬಗ್ಗೆ ಪಕ್ಷದ ವಲಯದಲ್ಲಿ ನಿತ್ಯ ಚರ್ಚೆ ಆಗುತ್ತಿದೆ. ಈ ಗೊಂದಲ ನಿವಾರಿಸಬೇಕು. ನಾಯಕತ್ವ ಬದಲಾವಣೆ ಮಾಡಬಾರದು ಎಂದೂ ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>