ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ (ಮೇ 28ರಂದು) ರಾಜೀನಾಮೆ ನೀಡುವುದರೊಂದಿಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದವು. ಅದರ ಬೆನ್ನಲ್ಲೇ ಗರಿಗೆದರಿದ್ದ ಸಾಕಷ್ಟು ಕುತೂಹಲಗಳಿಗೆ ಇಂದು ತೆರೆ ಬಿದ್ದಿದೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್, ಜೂನ್ 3ರಂದು ರಾಜಭವನದ ಗಾಜಿನಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆ ಮೂಲಕ ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಿ ಆಡಳಿತದ ಚುಕ್ಕಾಣಿ ಹಿಡಿಯಲಿದ್ದಾರೆ.