<p><strong>ಬೆಂಗಳೂರು:</strong> ಕಾವೇರಿ ನಿವಾಸದಲ್ಲಿ ಉಪಾಹಾರ ಸಭೆ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಪ್ಪು ಬಣ್ಣದ ರೇಂಜ್ರೋವರ್ ಎಸ್ಯುವಿಯಲ್ಲಿ ಲೋಕಭವನಕ್ಕೆ ತೆರಳಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರೇ ಕಾರನ್ನು ಚಲಾಯಿಸಿಕೊಂಡು ಸಿದ್ದರಾಮಯ್ಯ ಅವರನ್ನು ಲೋಕಭವನಕ್ಕೆ ಕರೆದೊಯ್ದರು.</p>.<p>ಸಿದ್ದರಾಮಯ್ಯ ಅವರ ಈ ರೇಂಜ್ರೋವರ್ ಪಯಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಜತೆಯಾದರು.</p>.<p>ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ ನಂತರ ಸಿದ್ದರಾಮಯ್ಯ ಅವರನ್ನು ಬೈರತಿ ಸುರೇಶ್ ಅವರೇ ಗೃಹಕಚೇರಿ ಕೃಷ್ಣಾಗೆ ಕರೆದೊಯ್ದರು. ಸುದ್ದಿಗೋಷ್ಠಿ ಮುಗಿಸಿದ ಸಿದ್ದರಾಮಯ್ಯ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಸುರೇಶ್ ಅವರು ಅದೇ ಎಸ್ಯುವಿಯಲ್ಲಿ ಕರೆದೊಯ್ದರು. ಈ ವೇಳೆ ಸಿದ್ದರಾಮಯ್ಯ ಅವರ ಕೆಲ ಅಭಿಮಾನಿಗಳು ರಸ್ತೆಗೆ ಅಡ್ಡವಾಗಿ ಮಲಗಿ ತಮ್ಮ ಆಕ್ರೋಶ ಹೊರಹಾಕಿದರು. ಅವರನ್ನು ತೆರವು ಮಾಡಿದ ಪೊಲೀಸರು, ಸಿದ್ದರಾಮಯ್ಯ ಅವರ ಪಯಣಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾವೇರಿ ನಿವಾಸದಲ್ಲಿ ಉಪಾಹಾರ ಸಭೆ ಮುಗಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಪ್ಪು ಬಣ್ಣದ ರೇಂಜ್ರೋವರ್ ಎಸ್ಯುವಿಯಲ್ಲಿ ಲೋಕಭವನಕ್ಕೆ ತೆರಳಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರೇ ಕಾರನ್ನು ಚಲಾಯಿಸಿಕೊಂಡು ಸಿದ್ದರಾಮಯ್ಯ ಅವರನ್ನು ಲೋಕಭವನಕ್ಕೆ ಕರೆದೊಯ್ದರು.</p>.<p>ಸಿದ್ದರಾಮಯ್ಯ ಅವರ ಈ ರೇಂಜ್ರೋವರ್ ಪಯಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ ಮತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ಜತೆಯಾದರು.</p>.<p>ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ ನಂತರ ಸಿದ್ದರಾಮಯ್ಯ ಅವರನ್ನು ಬೈರತಿ ಸುರೇಶ್ ಅವರೇ ಗೃಹಕಚೇರಿ ಕೃಷ್ಣಾಗೆ ಕರೆದೊಯ್ದರು. ಸುದ್ದಿಗೋಷ್ಠಿ ಮುಗಿಸಿದ ಸಿದ್ದರಾಮಯ್ಯ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಸುರೇಶ್ ಅವರು ಅದೇ ಎಸ್ಯುವಿಯಲ್ಲಿ ಕರೆದೊಯ್ದರು. ಈ ವೇಳೆ ಸಿದ್ದರಾಮಯ್ಯ ಅವರ ಕೆಲ ಅಭಿಮಾನಿಗಳು ರಸ್ತೆಗೆ ಅಡ್ಡವಾಗಿ ಮಲಗಿ ತಮ್ಮ ಆಕ್ರೋಶ ಹೊರಹಾಕಿದರು. ಅವರನ್ನು ತೆರವು ಮಾಡಿದ ಪೊಲೀಸರು, ಸಿದ್ದರಾಮಯ್ಯ ಅವರ ಪಯಣಕ್ಕೆ ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>