<p class="Briefhead"><strong>‘ತೃಪ್ತಿ ಇಲ್ಲದಿದ್ದರೆ ರಾಜೀನಾಮೆ ನೀಡಲಿ’<br />ಶಿವಮೊಗ್ಗ</strong>: ‘ಸರ್ಕಾರದ ಕಾರ್ಯವೈಖರಿ ಕುರಿತು ತೃಪ್ತಿ ಇಲ್ಲದಿದ್ದರೆ ಸಚಿವ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಲಿ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶುಕ್ರವಾರ ಆಗ್ರಹಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡುತ್ತಾ, ‘ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಎಲ್ಲ ಶಾಸಕರೂ ಒಟ್ಟಿಗಿದ್ದೇವೆ. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಅದನ್ನು ಬಗೆಹರಿಸಿಕೊಳ್ಳುತ್ತೇವೆ. ಪಕ್ಷದ ನಾಯಕರ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರುತ್ತೇವೆ’ ಎಂದರು.</p>.<p>‘ಯೋಗೇಶ್ವರ್ ಅವರು ಬಿಜೆಪಿ ನೇತೃತ್ವದ ಸರ್ಕಾರವನ್ನು ಮೂರು ಪಕ್ಷಗಳ ಸರ್ಕಾರ ಎಂದು ಟೀಕಿಸಿದ್ದಾರೆ. ಇದು ಲಕ್ಷಾಂತರ ಕಾರ್ಯಕರ್ತರಿಗೆ ನೋವು ತಂದಿದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/leadership-change-development-in-karnataka-bs-yediyurappa-bjp-politics-833988.html" itemprop="url">ಮುಖ್ಯಮಂತ್ರಿ ಬದಲಾವಣೆ ವಿಚಾರ: ಬಿಜೆಪಿಯಲ್ಲಿ ಹೊರಗೆ ತಣ್ಣಗೆ, ಒಳಗೆ ಧಗೆ </a></p>.<p><strong>ಯೋಗೇಶ್ವರ್ ಹುಚ್ಚ –ಚಂದ್ರಪ್ಪ ಕಿಡಿ</strong><br /><strong>ಚಿತ್ರದುರ್ಗ:</strong> ‘ಸಚಿವ ಸಿ.ಪಿ.ಯೋಗೇಶ್ವರ್ ಹುಚ್ಚ. ಆತನಿಗೆ ಎಲ್ಲೋ ತಲೆಕೆಟ್ಟಿರಬೇಕು. ಇದು ನಾಯಕತ್ವ ಬದಲಾವಣೆ ಮಾಡುವ ಸಮಯವೇ’ ಎಂದು ಕೆಎಸ್ಆರ್ಟಿಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಕಿಡಿಕಾರಿದರು.</p>.<p>‘ಯಾವ ಸ್ಥಾನಮಾನ ಇಲ್ಲದವನನ್ನು ಕರೆತಂದು ವಿಧಾನಪರಿಷತ್ ಸದಸ್ಯರಾಗಿ ಮಾಡಿ ಸಚಿವ ಸ್ಥಾನ ನೀಡಲಾಯಿತು. ರಾಜಕೀಯದಲ್ಲಿ ಆತ ಇನ್ನೂ ಬಚ್ಚಾ. ಅಧಿಕಾರದ ಅಮಲಿನಲ್ಲಿ ಮನಬಂದಂತೆ ವರ್ತನೆ ಸರಿಯಲ್ಲ’ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ‘ಯಡಿಯೂರಪ್ಪ ನಾಯಕತ್ವ ಬದಲಾವಣೆ ಕನಸಿನ ಮಾತು’ ಎಂದರು.</p>.<p><strong>ಯಡಿಯೂರಪ್ಪ ಸ್ಥಾನ ಅಬಾಧಿತ: ಶಾಮನೂರು ವಿಶ್ವಾಸ</strong><br /><strong>ದಾವಣಗೆರೆ</strong>: ‘ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಅವರೇ ನೂರಕ್ಕೆ ನೂರು ಆ ಸ್ಥಾನದಲ್ಲಿ ಮುಂದುವರಿಯುತ್ತಾರೆ’ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಮುಖ್ಯಮಂತ್ರಿ ಬದಲಾವಣೆಗೆ ಪ್ರಯತ್ನಿಸಲು ಹೋದವರು ಮೂರು ನಾಮ ಹಾಕಿಕೊಂಡು ಬಂದಿದ್ದಾರೆ. ಬಿಜೆಪಿಯವರು ಹೈಕಮಾಂಡ್ ಹೇಳಿದಂತೆ ಕೇಳುತ್ತಾರೆ’ ಎಂದು ಪರೋಕ್ಷವಾಗಿ ಸಚಿವ ಸಿ.ಪಿ. ಯೋಗೇಶ್ವರ್ಗೆ ಟಾಂಗ್ ಕೊಟ್ಟರು.</p>.<p><strong>ವಿಜಯೇಂದ್ರ ಅವರಿಂದ ಹಸ್ತಕ್ಷೇಪ ಇಲ್ಲ:ಎಸ್.ಟಿ.ಸೋಮಶೇಖರ್</strong><br />‘ಮೂರು ಪಕ್ಷ ಬದಲಾವಣೆ ಮಾಡಿ ಬಂದವರು ಮಾತ್ರ, ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ ಎಂದು ಹೇಳಲು ಸಾಧ್ಯ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆ ಕುರಿತಂತೆ, ‘ನಮ್ಮ ಸರ್ಕಾರ ಯಾವುದೇ ಪಕ್ಷದ ಜತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ’ ಎಂದರು.</p>.<p>‘ವಿಜಯೇಂದ್ರ ಅವರು ಆಡಳಿತದಲ್ಲಿ ಎಳ್ಳಷ್ಟೂ ಹಸ್ತಕ್ಷೇಪ ಮಾಡಿರುವ ನಿದರ್ಶನವಿಲ್ಲ. ನನ್ನ ಇಲಾಖೆಯನ್ನು ಮುಕ್ತವಾಗಿ ನಿರ್ವಹಿಸುತ್ತಿದ್ದೇನೆ. ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ’ ಎಂದು ಸೋಮಶೇಖರ್ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/nalin-kumar-kateel-said-there-is-question-of-changing-leadership-in-karnataka-bjp-834073.html" itemprop="url">ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್ </a></p>.<p>***</p>.<p>‘ನಮ್ಮ ಮುಂದೆ ಈಗ ಇರುವುದು ಕೋವಿಡ್ ನಿಯಂತ್ರಣದ ವಿಚಾರವೊಂದೇ. ನಾಯಕತ್ವ ಬದಲಾವಣೆ ಸೇರಿದಂತೆ ಬೇರೆ ಯಾವುದೇ ವಿಚಾರಗಳಿಲ್ಲ. ‘ಕೋವಿಡ್ ಬಿಟ್ಟು ಬೇರೆ ವಿಚಾರ ಕುರಿತು ಮಾತು ಬೇಡ.<br /><em><strong>-ಎಸ್.ಸುರೇಶ್ ಕುಮಾರ್,ಸಚಿವ</strong></em></p>.<p><em><strong>***</strong></em></p>.<p>ಯಾರೋ ದೆಹಲಿಗೆ ಹೋದ ಕೂಡಲೇ ನಾಯಕತ್ವ ಬದಲಾದರೆ ದಿನಕ್ಕೊಬ್ಬರು ಸಿ.ಎಂ ಆಗಬೇಕಾಗುತ್ತದೆ. ಮೂರು ಗುಂಪುಗಳ ಸರ್ಕಾರ ಇಲ್ಲ. ನಾವು ಒಂದೇ ಪಕ್ಷದ ಅಡಿಯಲ್ಲಿದ್ದೇವೆ. ವಿಜಯೇಂದ್ರ ಅವರ ಹಸ್ತಕ್ಷೇಪ ಇಲ್ಲ.<br /><em><strong>-ಆರ್.ಶಂಕರ್,ಸಚಿವ</strong> </em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead"><strong>‘ತೃಪ್ತಿ ಇಲ್ಲದಿದ್ದರೆ ರಾಜೀನಾಮೆ ನೀಡಲಿ’<br />ಶಿವಮೊಗ್ಗ</strong>: ‘ಸರ್ಕಾರದ ಕಾರ್ಯವೈಖರಿ ಕುರಿತು ತೃಪ್ತಿ ಇಲ್ಲದಿದ್ದರೆ ಸಚಿವ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಲಿ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶುಕ್ರವಾರ ಆಗ್ರಹಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡುತ್ತಾ, ‘ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲ. ಎಲ್ಲ ಶಾಸಕರೂ ಒಟ್ಟಿಗಿದ್ದೇವೆ. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಅದನ್ನು ಬಗೆಹರಿಸಿಕೊಳ್ಳುತ್ತೇವೆ. ಪಕ್ಷದ ನಾಯಕರ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರುತ್ತೇವೆ’ ಎಂದರು.</p>.<p>‘ಯೋಗೇಶ್ವರ್ ಅವರು ಬಿಜೆಪಿ ನೇತೃತ್ವದ ಸರ್ಕಾರವನ್ನು ಮೂರು ಪಕ್ಷಗಳ ಸರ್ಕಾರ ಎಂದು ಟೀಕಿಸಿದ್ದಾರೆ. ಇದು ಲಕ್ಷಾಂತರ ಕಾರ್ಯಕರ್ತರಿಗೆ ನೋವು ತಂದಿದೆ’ ಎಂದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/leadership-change-development-in-karnataka-bs-yediyurappa-bjp-politics-833988.html" itemprop="url">ಮುಖ್ಯಮಂತ್ರಿ ಬದಲಾವಣೆ ವಿಚಾರ: ಬಿಜೆಪಿಯಲ್ಲಿ ಹೊರಗೆ ತಣ್ಣಗೆ, ಒಳಗೆ ಧಗೆ </a></p>.<p><strong>ಯೋಗೇಶ್ವರ್ ಹುಚ್ಚ –ಚಂದ್ರಪ್ಪ ಕಿಡಿ</strong><br /><strong>ಚಿತ್ರದುರ್ಗ:</strong> ‘ಸಚಿವ ಸಿ.ಪಿ.ಯೋಗೇಶ್ವರ್ ಹುಚ್ಚ. ಆತನಿಗೆ ಎಲ್ಲೋ ತಲೆಕೆಟ್ಟಿರಬೇಕು. ಇದು ನಾಯಕತ್ವ ಬದಲಾವಣೆ ಮಾಡುವ ಸಮಯವೇ’ ಎಂದು ಕೆಎಸ್ಆರ್ಟಿಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಕಿಡಿಕಾರಿದರು.</p>.<p>‘ಯಾವ ಸ್ಥಾನಮಾನ ಇಲ್ಲದವನನ್ನು ಕರೆತಂದು ವಿಧಾನಪರಿಷತ್ ಸದಸ್ಯರಾಗಿ ಮಾಡಿ ಸಚಿವ ಸ್ಥಾನ ನೀಡಲಾಯಿತು. ರಾಜಕೀಯದಲ್ಲಿ ಆತ ಇನ್ನೂ ಬಚ್ಚಾ. ಅಧಿಕಾರದ ಅಮಲಿನಲ್ಲಿ ಮನಬಂದಂತೆ ವರ್ತನೆ ಸರಿಯಲ್ಲ’ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ‘ಯಡಿಯೂರಪ್ಪ ನಾಯಕತ್ವ ಬದಲಾವಣೆ ಕನಸಿನ ಮಾತು’ ಎಂದರು.</p>.<p><strong>ಯಡಿಯೂರಪ್ಪ ಸ್ಥಾನ ಅಬಾಧಿತ: ಶಾಮನೂರು ವಿಶ್ವಾಸ</strong><br /><strong>ದಾವಣಗೆರೆ</strong>: ‘ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಯಡಿಯೂರಪ್ಪ ಅವರೇ ನೂರಕ್ಕೆ ನೂರು ಆ ಸ್ಥಾನದಲ್ಲಿ ಮುಂದುವರಿಯುತ್ತಾರೆ’ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಮುಖ್ಯಮಂತ್ರಿ ಬದಲಾವಣೆಗೆ ಪ್ರಯತ್ನಿಸಲು ಹೋದವರು ಮೂರು ನಾಮ ಹಾಕಿಕೊಂಡು ಬಂದಿದ್ದಾರೆ. ಬಿಜೆಪಿಯವರು ಹೈಕಮಾಂಡ್ ಹೇಳಿದಂತೆ ಕೇಳುತ್ತಾರೆ’ ಎಂದು ಪರೋಕ್ಷವಾಗಿ ಸಚಿವ ಸಿ.ಪಿ. ಯೋಗೇಶ್ವರ್ಗೆ ಟಾಂಗ್ ಕೊಟ್ಟರು.</p>.<p><strong>ವಿಜಯೇಂದ್ರ ಅವರಿಂದ ಹಸ್ತಕ್ಷೇಪ ಇಲ್ಲ:ಎಸ್.ಟಿ.ಸೋಮಶೇಖರ್</strong><br />‘ಮೂರು ಪಕ್ಷ ಬದಲಾವಣೆ ಮಾಡಿ ಬಂದವರು ಮಾತ್ರ, ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ ಎಂದು ಹೇಳಲು ಸಾಧ್ಯ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸಿ.ಪಿ.ಯೋಗೇಶ್ವರ್ ಅವರ ಹೇಳಿಕೆ ಕುರಿತಂತೆ, ‘ನಮ್ಮ ಸರ್ಕಾರ ಯಾವುದೇ ಪಕ್ಷದ ಜತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ’ ಎಂದರು.</p>.<p>‘ವಿಜಯೇಂದ್ರ ಅವರು ಆಡಳಿತದಲ್ಲಿ ಎಳ್ಳಷ್ಟೂ ಹಸ್ತಕ್ಷೇಪ ಮಾಡಿರುವ ನಿದರ್ಶನವಿಲ್ಲ. ನನ್ನ ಇಲಾಖೆಯನ್ನು ಮುಕ್ತವಾಗಿ ನಿರ್ವಹಿಸುತ್ತಿದ್ದೇನೆ. ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ’ ಎಂದು ಸೋಮಶೇಖರ್ ತಿಳಿಸಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/karnataka-news/nalin-kumar-kateel-said-there-is-question-of-changing-leadership-in-karnataka-bjp-834073.html" itemprop="url">ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ನಳಿನ್ ಕುಮಾರ್ ಕಟೀಲ್ </a></p>.<p>***</p>.<p>‘ನಮ್ಮ ಮುಂದೆ ಈಗ ಇರುವುದು ಕೋವಿಡ್ ನಿಯಂತ್ರಣದ ವಿಚಾರವೊಂದೇ. ನಾಯಕತ್ವ ಬದಲಾವಣೆ ಸೇರಿದಂತೆ ಬೇರೆ ಯಾವುದೇ ವಿಚಾರಗಳಿಲ್ಲ. ‘ಕೋವಿಡ್ ಬಿಟ್ಟು ಬೇರೆ ವಿಚಾರ ಕುರಿತು ಮಾತು ಬೇಡ.<br /><em><strong>-ಎಸ್.ಸುರೇಶ್ ಕುಮಾರ್,ಸಚಿವ</strong></em></p>.<p><em><strong>***</strong></em></p>.<p>ಯಾರೋ ದೆಹಲಿಗೆ ಹೋದ ಕೂಡಲೇ ನಾಯಕತ್ವ ಬದಲಾದರೆ ದಿನಕ್ಕೊಬ್ಬರು ಸಿ.ಎಂ ಆಗಬೇಕಾಗುತ್ತದೆ. ಮೂರು ಗುಂಪುಗಳ ಸರ್ಕಾರ ಇಲ್ಲ. ನಾವು ಒಂದೇ ಪಕ್ಷದ ಅಡಿಯಲ್ಲಿದ್ದೇವೆ. ವಿಜಯೇಂದ್ರ ಅವರ ಹಸ್ತಕ್ಷೇಪ ಇಲ್ಲ.<br /><em><strong>-ಆರ್.ಶಂಕರ್,ಸಚಿವ</strong> </em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>