<p><strong>ಬೆಂಗಳೂರು:</strong> ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವ ಕಾಲಕ್ಕೆ ಯಾವ ರೀತಿಯ ‘ಔಷಧ’ ಕೊಡಬೇಕೆಂದು ಹೈಕಮಾಂಡ್ಗೆ ಗೊತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ ಇಲ್ಲ. ಸದ್ಯ ಸರ್ಕಾರದ ಆದ್ಯತೆ ಬೇರೆಯಾಗಿದೆ. ನೆರೆ ಪರಿಹಾರ, ಅಭಿವೃದ್ದಿ ವಿಚಾರವಾಗಿ ಸರ್ಕಾರ ಗಮನಹರಿಸುತ್ತಿದೆ’ ಎಂದರು.</p>.<p>‘ನಾಯಕತ್ವ ಬದಲಾವಣೆ ಕುರಿತ ಗೊಂದಲವನ್ನು ಬಗೆಹರಿಸಬೇಕೆಂದು ಸಚಿವ ಸತೀಶ ಜಾರಕಿಹೊಳಿ ಹೇಳಿರುವುದು ಸರಿ ಇದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ’ ಎಂದರು.</p>.<p>ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, ‘ಲಿಂಗಾಯತ ಹಾಗೂ ವೀರಶೈವ ಧರ್ಮ ಒಂದೆಯಾ, ಬೇರೆ ಬೇರೆಯಾ ಎಂಬುವುದನ್ನು ಆ ಸಮುದಾಯದವರು ಮೊದಲು ಸರಿಪಡಿಸಲಿ. ಅದನ್ನು ಸರಿಪಡಿಸಿದರೆ ಎಲ್ಲವೂ ಸರಿಯಾಗಲಿದೆ’ ಎಂದು ಹೇಳಿದರು.</p>.<p>‘ಲಿಂಗಾಯತ ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹೋಗಿರುವುದು ತಪ್ಪಲ್ಲ. ಅವರು ಅಲ್ಲಿ ಧಾರ್ಮಿಕ, ಧರ್ಮ ಪ್ರತ್ಯೇಕತೆಯ ಬಗ್ಗೆ ಮಾತನಾಡಿಲ್ಲ. ‘ನಮ್ಮ ಮೆಟ್ರೊ’ಗೆ ಬಸವಣ್ಣ ಅವರ ಹೆಸರು ಇಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಾಯಕತ್ವ ಬದಲಾವಣೆ ವಿಚಾರದಲ್ಲಿ ಯಾವ ಕಾಲಕ್ಕೆ ಯಾವ ರೀತಿಯ ‘ಔಷಧ’ ಕೊಡಬೇಕೆಂದು ಹೈಕಮಾಂಡ್ಗೆ ಗೊತ್ತಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಯಕತ್ವ ಬದಲಾವಣೆ ಇಲ್ಲ. ಸದ್ಯ ಸರ್ಕಾರದ ಆದ್ಯತೆ ಬೇರೆಯಾಗಿದೆ. ನೆರೆ ಪರಿಹಾರ, ಅಭಿವೃದ್ದಿ ವಿಚಾರವಾಗಿ ಸರ್ಕಾರ ಗಮನಹರಿಸುತ್ತಿದೆ’ ಎಂದರು.</p>.<p>‘ನಾಯಕತ್ವ ಬದಲಾವಣೆ ಕುರಿತ ಗೊಂದಲವನ್ನು ಬಗೆಹರಿಸಬೇಕೆಂದು ಸಚಿವ ಸತೀಶ ಜಾರಕಿಹೊಳಿ ಹೇಳಿರುವುದು ಸರಿ ಇದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ’ ಎಂದರು.</p>.<p>ಪ್ರತ್ಯೇಕ ಲಿಂಗಾಯತ ಧರ್ಮದ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, ‘ಲಿಂಗಾಯತ ಹಾಗೂ ವೀರಶೈವ ಧರ್ಮ ಒಂದೆಯಾ, ಬೇರೆ ಬೇರೆಯಾ ಎಂಬುವುದನ್ನು ಆ ಸಮುದಾಯದವರು ಮೊದಲು ಸರಿಪಡಿಸಲಿ. ಅದನ್ನು ಸರಿಪಡಿಸಿದರೆ ಎಲ್ಲವೂ ಸರಿಯಾಗಲಿದೆ’ ಎಂದು ಹೇಳಿದರು.</p>.<p>‘ಲಿಂಗಾಯತ ಸ್ವಾಮೀಜಿಗಳ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಹೋಗಿರುವುದು ತಪ್ಪಲ್ಲ. ಅವರು ಅಲ್ಲಿ ಧಾರ್ಮಿಕ, ಧರ್ಮ ಪ್ರತ್ಯೇಕತೆಯ ಬಗ್ಗೆ ಮಾತನಾಡಿಲ್ಲ. ‘ನಮ್ಮ ಮೆಟ್ರೊ’ಗೆ ಬಸವಣ್ಣ ಅವರ ಹೆಸರು ಇಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>