ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇ ನಾವು ಎಂದು ಬೊಗಳೆ ಬಿಡುವ ಕಾಂಗ್ರೆಸ್, ಈಗ ದೇಶ ಒಡೆಯುವ ದೇಶ ದ್ರೋಹದ ಮಾತನಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಬಂದ ಸ್ವಾತಂತ್ರ, ಸಾರ್ವಭೌಮತೆ, ಅಖಂಡತೆಯನ್ನು ಛಿದ್ರಮಾಡುವ ಮನೋಸ್ಥಿತಿ ಇರುವವರು ದೇಶದಲ್ಲಿ ಇರಲು ಯೋಗ್ಯರಲ್ಲ’ ಎಂದರು.