<p><strong>ಬಾಗಲಕೋಟೆ:</strong> 'ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಕಿತ್ತಾಟ ಜೋರಾಗಿ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಕೇವಲ 15 ದಿನಗಳ ಸರದಾರ ಮಾತ್ರ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ದಿನವೇ ಸಿದ್ಧರಾಮಯ್ಯ ಅವರ ಕುರ್ಚಿ ಫಲಿತಾಂಶ ಪ್ರಕಟ ಆಗಲಿದೆ ಎಂದರು.</p>.<p>ರಾಜ್ಯ ಸರ್ಕಾರದಲ್ಲಿ ಕುರ್ಚಿ ಕಚ್ಚಾಟದಿಂದಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು ಐದು ರಾಜ್ಯಗಳ ಚುನಾವಣೆ ಫಲಿತಾಂಶ ಬರುತ್ತದೆ. ಅಂದು ದಾವಣಗೇರಿ ಮತ್ತು ಬಾಗಲಕೋಟೆ ರಿಜಲ್ಟ್ ಸಹ ಬರುತ್ತದೆ. ಅದರ ಜೊತೆಗೆ ಸಿದ್ದರಾಮಯ್ಯ ಅವರ ಕುರ್ಚಿಯ ರಿಜಲ್ಟ್ ಕೂಡ ಬರಲಿದೆ ಎಂದರು.</p>.<p>ಮಾಹಿತಿ ಪ್ರಕಾರ ಡಿ.ಕೆ.ಶಿವಕುಮಾರ ಸಿಎಂ ಆಗಲು ಶಾಲು ಹೊತ್ತುಕೊಂಡು ಕೂತಿದ್ದಾರೆ. ಸಿದ್ಧರಾಮಯ್ಯ ಬೆಂಬಲಿಗ 40 ಜನ ಶಾಸಕರು, ಡಿ.ಕೆ.ಶಿವಕುಮಾರ ಪರವಾಗಿ 50 ಶಾಸಕರು ಹೈಕಮಾಂಡ್ ಬಳಿ ಹೋಗಿ ಲಾಭಿ ನಡೆಸುತ್ತಿದ್ದಾರೆ ಎಂದು ಹೇಳಿದರು.</p>.<p>ರಾಜ್ಯದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಸಮಸ್ಯೆ ಇರುವ ಜಿಲ್ಲೆಗಳಿಗೆ ತಲಾ ₹ 50 ಕೋಟಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಕಾರಜೋಳ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> 'ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದ ಕಿತ್ತಾಟ ಜೋರಾಗಿ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನು ಕೇವಲ 15 ದಿನಗಳ ಸರದಾರ ಮಾತ್ರ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.</p>.<p>ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ದಿನವೇ ಸಿದ್ಧರಾಮಯ್ಯ ಅವರ ಕುರ್ಚಿ ಫಲಿತಾಂಶ ಪ್ರಕಟ ಆಗಲಿದೆ ಎಂದರು.</p>.<p>ರಾಜ್ಯ ಸರ್ಕಾರದಲ್ಲಿ ಕುರ್ಚಿ ಕಚ್ಚಾಟದಿಂದಾಗಿ ವಿಧಾನಸೌಧದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಮೇ 4 ರಂದು ಐದು ರಾಜ್ಯಗಳ ಚುನಾವಣೆ ಫಲಿತಾಂಶ ಬರುತ್ತದೆ. ಅಂದು ದಾವಣಗೇರಿ ಮತ್ತು ಬಾಗಲಕೋಟೆ ರಿಜಲ್ಟ್ ಸಹ ಬರುತ್ತದೆ. ಅದರ ಜೊತೆಗೆ ಸಿದ್ದರಾಮಯ್ಯ ಅವರ ಕುರ್ಚಿಯ ರಿಜಲ್ಟ್ ಕೂಡ ಬರಲಿದೆ ಎಂದರು.</p>.<p>ಮಾಹಿತಿ ಪ್ರಕಾರ ಡಿ.ಕೆ.ಶಿವಕುಮಾರ ಸಿಎಂ ಆಗಲು ಶಾಲು ಹೊತ್ತುಕೊಂಡು ಕೂತಿದ್ದಾರೆ. ಸಿದ್ಧರಾಮಯ್ಯ ಬೆಂಬಲಿಗ 40 ಜನ ಶಾಸಕರು, ಡಿ.ಕೆ.ಶಿವಕುಮಾರ ಪರವಾಗಿ 50 ಶಾಸಕರು ಹೈಕಮಾಂಡ್ ಬಳಿ ಹೋಗಿ ಲಾಭಿ ನಡೆಸುತ್ತಿದ್ದಾರೆ ಎಂದು ಹೇಳಿದರು.</p>.<p>ರಾಜ್ಯದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಸಮಸ್ಯೆ ಇರುವ ಜಿಲ್ಲೆಗಳಿಗೆ ತಲಾ ₹ 50 ಕೋಟಿ ಕೂಡಲೇ ಅನುದಾನ ಬಿಡುಗಡೆ ಮಾಡಬೇಕು ಎಂದು ಕಾರಜೋಳ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>