ಲಂಬಾಣಿ ಸಮುದಾಯದ ಗುರು ಸೇವಾಲಾಲ್ ಜಯಂತಿ ಆರಂಭಿಸಿ, ಅವರ ಜನ್ಮಸ್ಥಳ ಅಭಿವೃದ್ಧಿಪಡಿಸಿದ್ದು ನಾವು. ಅಭಿವೃದ್ಧಿ ನಿಗಮ ಮಾಡಿ ಅಗತ್ಯ ಅನುದಾನ ಕೊಟ್ಟಿದ್ದು ನಾವು. ಪರಿಶಿಷ್ಟರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕೆ ಎಸ್ ಸಿಪಿ, ಟಿಎಸ್ ಪಿ ಕಾಯ್ದೆ ಜಾರಿಗೆ ತಂದಿದ್ದು ಸಹ ನಮ್ಮ ಸರ್ಕಾರ. ಬಿಜೆಪಿಯವರು ಚುನಾವಣೆ ಬಂದಾಗ, ಎಲ್ಲವನ್ನೂ ನಾವೇ ಮಾಡಿದ್ದು ನಾವೇ ಎಂದು ಹೇಳುತ್ತಿದ್ದಾರೆ. ನಾವು ಈ ಎಲ್ಲಾ ಕೆಲಸಗಳನ್ನು ಮಾಡಿದ ಬಳಿಕ, ಇವರು ಮೋದಿ ಅವರನ್ನು ಕರೆಸಿ ಹಕ್ಕುಪತ್ರ ವಿತರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.