<p><strong>ಬಾಗಲಕೋಟೆ</strong>: ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಅಂತಿಮ. ಹೈಕಮಾಂಡ್ ಜೊತೆ ಶಾಸಕರ ನಿರ್ಧಾರವೂ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಜಿಲ್ಲೆಯ ಬಂಡಿಗಣಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p><p>ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗುವುದಕ್ಕೆ ಆಗುವುದಿಲ್ಲ. ಬಹುಮತ ಇದ್ದರೆ ಆಗಬಹುದು. ಜೊತೆಗೆ ಹೈಕಮಾಂಡ್ ಆಶೀರ್ವಾದನೂ ಬೇಕು ಎಂದರು.</p><p>ಆರ್.ಎಸ್.ಎಸ್ ನವರ ಕಾರ್ಯಕ್ರಮಗಳಿಗೆ ಸರ್ಕಾರದ ಜಾಗ ನೀಡದಿರುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ, ಆ ರೀತಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದರು</p><p>ಡಿನ್ನರ್ ಪಾರ್ಟಿಗೆ, ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ಆಗಾಗ ಊಟಕ್ಕೆ ಕರೆಯುತ್ತೇನೆ. ಊಟಕ್ಕೆ ಕರೆದಿದ್ದರಲ್ಲಿ ಯಾವುದೇ ವಿಶೇಷವಿಲ್ಲ. ನಿಮಗೆ (ಪತ್ರಕರ್ತರಿಗೆ) ಹಾಗೂ ಬಿಜೆಪಿಯವರಿಗೆ ವಿಶೇಷವಾಗಿದೆ ಎಂದು ನಕ್ಕರು.</p>.ಸಚಿವರಿಗೆ ಮುಖ್ಯಮಂತ್ರಿ ಔತಣಕೂಟ | ಕುರ್ಚಿ ಉಳಿಸಿಕೊಳ್ಳಲು ನಾಟಕವಾಡುವ ಸಿಎಂ: BJP.ಸಮಾಜದಲ್ಲಿ ಬದಲಾವಣೆ ಬಯಸಿದ ಸಾಹಿತಿ ಹಂಪನಾ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ಅಂತಿಮ. ಹೈಕಮಾಂಡ್ ಜೊತೆ ಶಾಸಕರ ನಿರ್ಧಾರವೂ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ಜಿಲ್ಲೆಯ ಬಂಡಿಗಣಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಬದಲಾವಣೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರು.</p><p>ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗುವುದಕ್ಕೆ ಆಗುವುದಿಲ್ಲ. ಬಹುಮತ ಇದ್ದರೆ ಆಗಬಹುದು. ಜೊತೆಗೆ ಹೈಕಮಾಂಡ್ ಆಶೀರ್ವಾದನೂ ಬೇಕು ಎಂದರು.</p><p>ಆರ್.ಎಸ್.ಎಸ್ ನವರ ಕಾರ್ಯಕ್ರಮಗಳಿಗೆ ಸರ್ಕಾರದ ಜಾಗ ನೀಡದಿರುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆ, ಆ ರೀತಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದರು</p><p>ಡಿನ್ನರ್ ಪಾರ್ಟಿಗೆ, ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ಆಗಾಗ ಊಟಕ್ಕೆ ಕರೆಯುತ್ತೇನೆ. ಊಟಕ್ಕೆ ಕರೆದಿದ್ದರಲ್ಲಿ ಯಾವುದೇ ವಿಶೇಷವಿಲ್ಲ. ನಿಮಗೆ (ಪತ್ರಕರ್ತರಿಗೆ) ಹಾಗೂ ಬಿಜೆಪಿಯವರಿಗೆ ವಿಶೇಷವಾಗಿದೆ ಎಂದು ನಕ್ಕರು.</p>.ಸಚಿವರಿಗೆ ಮುಖ್ಯಮಂತ್ರಿ ಔತಣಕೂಟ | ಕುರ್ಚಿ ಉಳಿಸಿಕೊಳ್ಳಲು ನಾಟಕವಾಡುವ ಸಿಎಂ: BJP.ಸಮಾಜದಲ್ಲಿ ಬದಲಾವಣೆ ಬಯಸಿದ ಸಾಹಿತಿ ಹಂಪನಾ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>