ಬಣ ರಾಜಕೀಯ ಚುರುಕು
ಬಿಜೆಪಿಯಲ್ಲಿ ಬಣ ರಾಜಕೀಯ ದಿನೇ ದಿನೇ ಹೆಚ್ಚುತ್ತಿದೆ. ವೀರಶೈವ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಭೆ ಸೇರಿದ್ದ ಆ ಸಮುದಾಯದ ಶಾಸಕರು ಹೆಚ್ಚಿನ ಪ್ರಾತಿನಿಧ್ಯಕ್ಕಾಗಿ ಹಕ್ಕೊತ್ತಾಯ ಮಂಡಿಸಲು ಮುಂದಾಗಿದ್ದಾರೆ. ಸಭೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಮುರುಗೇಶ ನಿರಾಣಿ, ಸಿದ್ದು ಸವದಿ ಮೊದಲಾದವರು ಪಾಲ್ಗೊಂಡಿದ್ದರು. ಸಚಿವ ಸಂಪುಟ ವಿಸ್ತರಣೆ ವೇಳೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು, ಮೋಹನ ಲಿಂಬಿಕಾಯಿ ಅವರನ್ನು ವಿಧಾನಪರಿಷತ್ತಿಗೆ ನೇಮಕ ಮಾಡಬೇಕು ಎಂದು ಬಿಜೆಪಿ ವರಿಷ್ಠರ ಮೇಲೆ ಒತ್ತಡ ಹೇರುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.