ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್ಐ ನೇಮಕ ಹಗರಣದ ಆರೋಪಿ ದಿವ್ಯಾ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಬಂದಿದ್ದರು ಎಂಬುದಕ್ಕೆ ಫೋಟೋ ಸಾಕ್ಷಿ ಇದೆ. ಆರೋಪಿಯು ಪರಿಚಿತರು ಎಂದು ಡಿಕೆಶಿ ಒಪ್ಪಿಕೊಂಡಿದ್ದಾರೆ. ಇತರ ಆರೋಪಿಗಳಾದ ರುದ್ರಗೌಡ ಪಾಟೀಲ್, ಶಿವಾನಂದ ಪಾಟೀಲ್ ಕಾಂಗ್ರೆಸ್ ಪದಾಧಿಕಾರಿಗಳಾಗಿದ್ದಾರೆ. ಹಾಗಾದರೆ ಈ ಹಗರಣದಲ್ಲಿ ಡಿಕೆಶಿ ಪಾಲೆಷ್ಟು? ಎಂದಿದೆ.