<p><strong>ಬೆಂಗಳೂರು: </strong>2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ರೈಲ್ವೆ ಬಜೆಟ್ 9 ಪಟ್ಟು ಏರಿಕೆಯಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. </p><p>ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ನಮ್ಮ ಮೆಟ್ರೊ ‘ಹಳದಿ ಮಾರ್ಗ’ಕ್ಕೆ ಚಾಲನೆ ನೀಡಿದರು. ಅದರ ನಂತರ ಅಶ್ವಿನಿ ವೈಷ್ಣವ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. </p><p>2014ರಲ್ಲಿ ಕರ್ನಾಟಕದ ರೈಲ್ವೆ ಬಜೆಟ್ ₹ 835 ಕೋಟಿಯಾಗಿತ್ತು. ಇದೀಗ ₹ 7,500 ಕೋಟಿ ಬಜೆಟ್ ಅನ್ನು ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ನೀಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದಿದ್ದಾರೆ. </p><p>ಕರ್ನಾಟಕದಂತಹ ಪ್ರಮುಖ ರಾಜ್ಯದಲ್ಲಿನ ರೈಲ್ವೆ ಅಭಿವೃದ್ದಿಗೆ ಹಿಂದಿನ ಸರ್ಕಾರಗಳು ಸರಿಯಾದ ಯೋಜನೆಗಳನ್ನು ರೂಪಿಸಿರಲಿಲ್ಲ. ಆದರೆ, ಇದೀಗ ₹ 54 ಸಾವಿರ ಕೋಟಿ ಮೊತ್ತದ ಯೋಜನೆಗಳು ಸಿದ್ದವಾಗಿವೆ. ಅಮೃತ್ ಭಾರತ ಯೋಜನೆಯಡಿಯಲ್ಲಿ 61 ರೈಲ್ವೆ ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. </p><p>2047ಕ್ಕೆ ಭಾರತವನ್ನು ಅಭಿವೃದ್ದಿ ಹೊಂದಿದ ದೇಶವನ್ನಾಗಿ ಮಾಡುವ ಗುರಿ ಹೊಂದಿರುವ ‘ವಿಕಸಿತ ಭಾರತ –2047’ ಸರ್ಕಾರದ ದೂರದೃಷ್ಠಿ ಯೋಜನೆಯಾಗಿದೆ. ಪ್ರಧಾನಿ ಮೋದಿಯವರು ಇದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಇದು ಕರ್ನಾಟಕ ಸೇರಿದಂತೆ ಭಾರತದ ಅಭಿವೃದ್ದಿಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದ ರೈಲ್ವೆ ಬಜೆಟ್ 9 ಪಟ್ಟು ಏರಿಕೆಯಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. </p><p>ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಅವರು ನಮ್ಮ ಮೆಟ್ರೊ ‘ಹಳದಿ ಮಾರ್ಗ’ಕ್ಕೆ ಚಾಲನೆ ನೀಡಿದರು. ಅದರ ನಂತರ ಅಶ್ವಿನಿ ವೈಷ್ಣವ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. </p><p>2014ರಲ್ಲಿ ಕರ್ನಾಟಕದ ರೈಲ್ವೆ ಬಜೆಟ್ ₹ 835 ಕೋಟಿಯಾಗಿತ್ತು. ಇದೀಗ ₹ 7,500 ಕೋಟಿ ಬಜೆಟ್ ಅನ್ನು ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ನೀಡಿದ್ದಾರೆ. ಅವರಿಗೆ ಧನ್ಯವಾದಗಳು ಎಂದಿದ್ದಾರೆ. </p><p>ಕರ್ನಾಟಕದಂತಹ ಪ್ರಮುಖ ರಾಜ್ಯದಲ್ಲಿನ ರೈಲ್ವೆ ಅಭಿವೃದ್ದಿಗೆ ಹಿಂದಿನ ಸರ್ಕಾರಗಳು ಸರಿಯಾದ ಯೋಜನೆಗಳನ್ನು ರೂಪಿಸಿರಲಿಲ್ಲ. ಆದರೆ, ಇದೀಗ ₹ 54 ಸಾವಿರ ಕೋಟಿ ಮೊತ್ತದ ಯೋಜನೆಗಳು ಸಿದ್ದವಾಗಿವೆ. ಅಮೃತ್ ಭಾರತ ಯೋಜನೆಯಡಿಯಲ್ಲಿ 61 ರೈಲ್ವೆ ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. </p><p>2047ಕ್ಕೆ ಭಾರತವನ್ನು ಅಭಿವೃದ್ದಿ ಹೊಂದಿದ ದೇಶವನ್ನಾಗಿ ಮಾಡುವ ಗುರಿ ಹೊಂದಿರುವ ‘ವಿಕಸಿತ ಭಾರತ –2047’ ಸರ್ಕಾರದ ದೂರದೃಷ್ಠಿ ಯೋಜನೆಯಾಗಿದೆ. ಪ್ರಧಾನಿ ಮೋದಿಯವರು ಇದಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಇದು ಕರ್ನಾಟಕ ಸೇರಿದಂತೆ ಭಾರತದ ಅಭಿವೃದ್ದಿಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>