<p><strong>ಕಲಬುರಗಿ/ಹುಬ್ಬಳ್ಳಿ:</strong> ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ವಿವಿಧೆಡೆ ಬುಧವಾರ ಉತ್ತಮ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿದ್ದು, ಅಲ್ಲಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.</p><p>ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನಾಪುರ, ಗಡಿಲಿಂಗದಹಳ್ಳಿ, ಚಂದನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಸಂಜೆ 1 ಗಂಟೆ ಕಾಲ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. </p><p>ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನಲ್ಲೂ ಆಲಿಕಲ್ಲು ಮಳೆಯಾಗಿದೆ. ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಭಾಗದಲ್ಲಿಯೂ ಮಳೆ ಸುರಿದಿದೆ. </p><p>ಬೀದರ್ ಜಿಲ್ಲೆಯ ಹುಲಸೂರಿನಲ್ಲಿ ಬುಧವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. </p><p><strong>ಕಿತ್ತೂರು ಕರ್ನಾಟಕ; ಬಿರುಸಿನ ಮಳೆ </strong></p><p><strong>ಹುಬ್ಬಳ್ಳಿ ವರದಿ:</strong> ಹುಬ್ಬಳ್ಳಿ–ಧಾರವಾಡ, ಹಾವೇರಿ, ಬೆಳಗಾವಿ ಸೇರಿ ಕಿತ್ತೂರು ಕರ್ನಾಟಕದ ವಿವಿಧೆಡೆ ಬುಧವಾರವೂ ಬಿರುಸುನಿಂದ ಮಳೆ ಸುರಿಯಿತು. </p><p>ಹುಬ್ಬಳ್ಳಿಯಲ್ಲಿ ಮೇಲ್ಸೇತುವೆ ಕಾಮಗಾರಿಗಾಗಿ ರಸ್ತೆ ಅಗೆದಿರುವ ಕಡೆ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆ.ಸಿ ಪಾರ್ಕ್ ಬಳಿ ಅರಣ್ಯ ಇಲಾಖೆ ಕಚೇರಿ ಪಕ್ಕ ಮರವೊಂದು ಉರುಳಿತು.</p><p>ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಮಂಗಳವಾರ ಮಳೆ ಸುರಿದ ವೇಳೆ ವೃದ್ಧ ಫಕೀರಪ್ಪ ಅವರು ಶಂಕಾಸ್ಪದವಾಗಿ ಮೃತಪಟ್ಟಿದ್ದು, ಸಿಡಿಲು ಬಡಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.</p><p>ವಿಜಯಪುರ ನಗರ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಪಟ್ಟಣದ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಹಾಗೂ ತಿಕೋಟಾ ತಾಲ್ಲೂಕಿನ ಬಾಬಾ ನಗರ ಸೇರಿ ವಿವಿಧೆಡೆ ಬುಧವಾರ ಸಂಜೆ ಧಾರಾಕಾರ ಮಳೆಯಾಗಿದೆ.</p><p>ತಿಕೋಟಾ ತಾಲ್ಲೂಕಿನ ಕೊಟ್ಯಾಳ ರಸ್ತೆಯಲ್ಲಿನ ಸೋಮನಿಂಗ ಬಸಪ್ಪ ಬಾಗಲಕೋಟ ಅವರಿಗೆ ಸೇರಿದ ಕಟಾವಿಗೆ ಬಂದಿದ್ದ ನಾಲ್ಕು ಎಕರೆ ಹಣ್ಣಾದ ದ್ರಾಕ್ಷಿ ಪಡ ನೆಲಕಚ್ಚಿದೆ. ಬಾಬಾನಗರ ಗ್ರಾಮದ ರೈತ ಶಿವಾನಂದ ಚಂದ್ರಪ್ಪ ನಾವಿ ಅವರ ಮೂರು ಟನ್ಗೂ ಅಧಿಕ ಒಣದ್ರಾಕ್ಷಿ ತೊಯ್ದು ಹೋಗಿದೆ.</p><p>ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಆಲಿಕಲ್ಲು ಮಳೆಗೆ ಗೋವಿನಜೋಳ ಬೆಳೆ ಹಾನಿಯಾಗಿದೆ. ಬೆಳಗಾವಿ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಕೆಲ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಉತ್ತಮ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ/ಹುಬ್ಬಳ್ಳಿ:</strong> ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ವಿವಿಧೆಡೆ ಬುಧವಾರ ಉತ್ತಮ ಮಳೆಯಾಗಿದೆ. ಕೆಲವೆಡೆ ಆಲಿಕಲ್ಲು ಮಳೆಯಾಗಿದ್ದು, ಅಲ್ಲಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ.</p><p>ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನಾಪುರ, ಗಡಿಲಿಂಗದಹಳ್ಳಿ, ಚಂದನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಸಂಜೆ 1 ಗಂಟೆ ಕಾಲ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. </p><p>ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನಲ್ಲೂ ಆಲಿಕಲ್ಲು ಮಳೆಯಾಗಿದೆ. ಕುಷ್ಟಗಿ ತಾಲ್ಲೂಕಿನ ಹನುಮಸಾಗರ ಭಾಗದಲ್ಲಿಯೂ ಮಳೆ ಸುರಿದಿದೆ. </p><p>ಬೀದರ್ ಜಿಲ್ಲೆಯ ಹುಲಸೂರಿನಲ್ಲಿ ಬುಧವಾರ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿದೆ. </p><p><strong>ಕಿತ್ತೂರು ಕರ್ನಾಟಕ; ಬಿರುಸಿನ ಮಳೆ </strong></p><p><strong>ಹುಬ್ಬಳ್ಳಿ ವರದಿ:</strong> ಹುಬ್ಬಳ್ಳಿ–ಧಾರವಾಡ, ಹಾವೇರಿ, ಬೆಳಗಾವಿ ಸೇರಿ ಕಿತ್ತೂರು ಕರ್ನಾಟಕದ ವಿವಿಧೆಡೆ ಬುಧವಾರವೂ ಬಿರುಸುನಿಂದ ಮಳೆ ಸುರಿಯಿತು. </p><p>ಹುಬ್ಬಳ್ಳಿಯಲ್ಲಿ ಮೇಲ್ಸೇತುವೆ ಕಾಮಗಾರಿಗಾಗಿ ರಸ್ತೆ ಅಗೆದಿರುವ ಕಡೆ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆ.ಸಿ ಪಾರ್ಕ್ ಬಳಿ ಅರಣ್ಯ ಇಲಾಖೆ ಕಚೇರಿ ಪಕ್ಕ ಮರವೊಂದು ಉರುಳಿತು.</p><p>ಹಾವೇರಿ ತಾಲ್ಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಮಂಗಳವಾರ ಮಳೆ ಸುರಿದ ವೇಳೆ ವೃದ್ಧ ಫಕೀರಪ್ಪ ಅವರು ಶಂಕಾಸ್ಪದವಾಗಿ ಮೃತಪಟ್ಟಿದ್ದು, ಸಿಡಿಲು ಬಡಿದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.</p><p>ವಿಜಯಪುರ ನಗರ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಪಟ್ಟಣದ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಹಾಗೂ ತಿಕೋಟಾ ತಾಲ್ಲೂಕಿನ ಬಾಬಾ ನಗರ ಸೇರಿ ವಿವಿಧೆಡೆ ಬುಧವಾರ ಸಂಜೆ ಧಾರಾಕಾರ ಮಳೆಯಾಗಿದೆ.</p><p>ತಿಕೋಟಾ ತಾಲ್ಲೂಕಿನ ಕೊಟ್ಯಾಳ ರಸ್ತೆಯಲ್ಲಿನ ಸೋಮನಿಂಗ ಬಸಪ್ಪ ಬಾಗಲಕೋಟ ಅವರಿಗೆ ಸೇರಿದ ಕಟಾವಿಗೆ ಬಂದಿದ್ದ ನಾಲ್ಕು ಎಕರೆ ಹಣ್ಣಾದ ದ್ರಾಕ್ಷಿ ಪಡ ನೆಲಕಚ್ಚಿದೆ. ಬಾಬಾನಗರ ಗ್ರಾಮದ ರೈತ ಶಿವಾನಂದ ಚಂದ್ರಪ್ಪ ನಾವಿ ಅವರ ಮೂರು ಟನ್ಗೂ ಅಧಿಕ ಒಣದ್ರಾಕ್ಷಿ ತೊಯ್ದು ಹೋಗಿದೆ.</p><p>ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲ್ಲೂಕಿನಲ್ಲಿ ಕಳೆದೆರಡು ದಿನಗಳಿಂದ ಸುರಿದ ಆಲಿಕಲ್ಲು ಮಳೆಗೆ ಗೋವಿನಜೋಳ ಬೆಳೆ ಹಾನಿಯಾಗಿದೆ. ಬೆಳಗಾವಿ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ಲು ಹೋಬಳಿಯ ಕೆಲ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಉತ್ತಮ ಮಳೆ ಸುರಿಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>