<p><strong>ಬೆಂಗಳೂರು:</strong> ಚಿತ್ರದುರ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಬುಧವಾರ ಮುಂಜಾನೆ ಹಾಗೂ ಗುರುವಾರ ಬಿರುಸಿನ ಮಳೆಯಾಗಿದ್ದು, ಹಲವು ಕಡೆ ಭತ್ತ, ರಾಗಿ, ಜೋಳ, ಮೆಕ್ಕೆಜೋಳ, ಈರುಳ್ಳಿ ಬೆಳೆಗಳಿಗೆ ಹಾನಿಯಾಗಿದೆ.</p>.<h2><strong>ಚಿತ್ರದುರ್ಗ ವರದಿ: </strong></h2><p>ಬುಧವಾರ ಮಧ್ಯರಾತ್ರಿಯಿಂದ ಮಳೆ ಬಿರುಸಾಗಿದ್ದು ಬೆಳೆಗೆ ತೀವ್ರ ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ ರಾಗಿ, ಹೊಳಲ್ಕೆರೆ ತಾಲ್ಲೂಕಿನಲ್ಲಿ ಮೆಕ್ಕೆಜೋಳ, ಚಳ್ಳಕೆರೆ ತಾಲ್ಲೂಕಿನಲ್ಲಿ ಈರುಳ್ಳಿ ಬೆಳೆ ಹಾಳಾಗಿದೆ.</p>.<h2>ಮನೆಗಳಿಗೆ ನೀರು:</h2><p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಿನ್ನೀರು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ.</p><p>ಜಲಾಶಯ ಭರ್ತಿಯಾಗಿ ಕೋಡಿ ಬಿದ್ದಿದ್ದು, ವರ್ಷದಲ್ಲಿ ಎರಡನೇ ಬಾರಿಗೆ ಜಲಾಶಯ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿಯುತ್ತಿದೆ. ಸದ್ಯ ಜಲಾಶಯಕ್ಕೆ 6,702 ಕ್ಯೂಸೆಕ್ ಒಳಹರಿವು ಇದೆ. 6,418 ಕ್ಯೂಸೆಕ್ ಹೊರಹರಿವು ಇದೆ.</p><h2><strong>ದಾವಣಗೆರೆ ವರದಿ: </strong></h2><p>ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಟಾವಿಗೆ ಬಂದಿರುವ ಬೆಳೆ ನೀರುಪಾಲಾಗುವ ಆತಂಕ ಮೂಡಿದೆ. ಬುಧವಾರ ಮಧ್ಯರಾತ್ರಿ ಆರಂಭವಾದ ಮಳೆ ಗುರುವಾರವೂ ಸುರಿಯಿತು.</p><p>ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮದಲ್ಲಿ ಹಳ್ಳದ ನೀರು ನುಗ್ಗಿ 10 ಎಕರೆ ಭತ್ತದ ಬೆಳೆಗೆ ಹಾನಿಯಾಗಿದೆ. ಜಗಳೂರು ತಾಲ್ಲೂಕಿನಲ್ಲಿ ರಾಗಿ, ಈರುಳ್ಳಿ ನೆಲಕಚ್ಚಿದೆ. ಚನ್ನಗಿರಿ ತಾಲ್ಲೂಕಿನಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ.</p><h2><strong>ನೆಲಕ್ಕೊರಗಿದ ಭತ್ತ–ಕಲಬುರಗಿ ವರದಿ: </strong></h2><p>ನಗರ ಸೇರಿದಂತೆ ಕಲ್ಯಾಣ ಕರ್ನಾಟಕದ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ, ಕಾರಟಗಿ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭತ್ತದ ಫಸಲು ನೆಲಕ್ಕೊರಗಿದೆ. ಕೊಪ್ಪಳ, ಕುಷ್ಟಗಿ, ಕನಕಗಿರಿ, ಮುನಿರಾಬಾದ್, ಯಲಬುರ್ಗಾ ಭಾಗದಲ್ಲಿ ಮಳೆ ಸುರಿದಿದೆ.</p><p>ಕಲಬುರಗಿಯಲ್ಲಿ ಮಧ್ಯಾಹ್ನ ಅರ್ಧ ಗಂಟೆ ಮಳೆ ಸುರಿದಿದೆ. ಜಿಲ್ಲೆಯ ಕಾಳಗಿ, ಕಮಲಾಪುರ ಹಾಗೂ ಆಳಂದದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ.</p><h2><strong>ಮನೆಗಳಿಗೆ ಹಾನಿ–ಮೈಸೂರು ವರದಿ: </strong></h2><p>ಜಿಲ್ಲೆಯೂ ಸೇರಿದಂತೆ ಕಾವೇರಿ ಕಣಿವೆಯಲ್ಲಿ ಬುಧವಾರ ನಸುಕಿನಿಂದ ಗುರುವಾರ ಬೆಳಿಗ್ಗೆಯವರೆಗೂ ಜೋರು ಮಳೆಯಾಯಿತು. ಇದರಿಂದಾಗಿ ಅಲ್ಲಲ್ಲಿ ಮನೆಗಳು ಹಾಗೂ ಬೆಳೆಗಳಿಗೆ ಹಾನಿಯಾಗಿದೆ.</p><p><strong>ಮಡಿಕೇರಿ ವರದಿ:</strong> ಕೊಡಗು ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಯಿತು. ಹಾರಂಗಿ ಜಲಾಶಯ ಅಕ್ಟೋಬರ್ ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಎರಡನೇ ಸಲ ಭರ್ತಿಯಾಗಿದೆ.</p><p><strong>ಮಂಡ್ಯ ವರದಿ:</strong> ಜಿಲ್ಲೆಯ ಕಿಕ್ಕೇರಿ ಹೋಬಳಿಯ ಕಾರಿಗಾನಹಳ್ಳಿ ಗ್ರಾಮದ ಕಾಂತರಾಜು ಎಂಬವರ ಮನೆ ಕುಸಿದಿದ್ದು, ಮನೆಯಲ್ಲಿದ್ದ ದವಸ–ಧಾನ್ಯ, ಅಡುಗೆ ಪಾತ್ರೆಗಳು ಹಾಳಾಗಿವೆ.</p><p><strong>ಹಾಸನ ವರದಿ:</strong> ಹಾಸನ ಜಿಲ್ಲೆಯಲ್ಲಿ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಬಿದ್ದಿದೆ. ಬುಧವಾರ ರಾತ್ರಿ ಸುರಿದ ಜೋರು ಮಳೆಯಿಂದಾಗಿ ಕೆಲ ಗ್ರಾಮಗಳಲ್ಲಿ ರಸ್ತೆಗಳಿಗೆ ಹಾನಿ ಉಂಟಾಗಿದೆ.</p><p><strong>ಗುಡುಗಿನ ಅರ್ಭಟ– ಹುಬ್ಬಳ್ಳಿ ವರದಿ:</strong> ಧಾರವಾಡ, ಉತ್ತರ ಕನ್ನಡ, ಗದಗ, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಯ ವಿವಿಧೆಡೆ ಕೆಲವೆಡೆ ಮಳೆ ಸುರಿಯಿತು.</p><p>ಧಾರವಾಡ ಸೇರಿ ಜಿಲ್ಲೆಯ ಹುಬ್ಬಳ್ಳಿ, ಕಲಘಟಗಿ, ಕುಂದಗೋಳದಲ್ಲಿ ಗುಡುಗು, ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯಿತು.</p><p><strong>ಉತ್ತರ ಕನ್ನಡ</strong> ಜಿಲ್ಲೆಯ ಕರಾವಳಿ ಭಾಗದ ಹೊನ್ನಾವರ, ಕುಮಟಾದಲ್ಲಿ ಹೆಚ್ಚು ಮಳೆ ಸುರಿಯಿತು. ಮುಂಡಗೋಡ ಭಾಗದಲ್ಲೂ ಮಳೆಯಾಯಿತು.</p><p>ಗದಗವೂ ಸೇರಿ ಜಿಲ್ಲೆಯ ಲಕ್ಷ್ಮೇಶ್ವರ, ಮುಂಡರಗಿ, ಶಿರಹಟ್ಟಿ, ಗಜೇಂದ್ರಗಡ ಭಾಗದಲ್ಲಿ ಮಳೆ ಸುರಿಯಿತು.</p><p>ಬೆಳಗಾವಿ ನಗರ, ಸವದತ್ತಿ, ರಾಮದುರ್ಗ ತಾಲ್ಲೂಕುಗಳಲ್ಲೂ ಸಾಧಾರಣ ಮಳೆ ಸುರಿಯಿತು.</p><h2><strong>12 ಮನೆ ಹಾನಿ: </strong></h2><p>ಬಳ್ಳಾರಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ 12 ಮನೆಗಳಿಗೆ ಹಾನಿಯಾಗಿದೆ.</p><p>ಸಿರುಗುಪ್ಪ, ಕಂಪ್ಲಿ ಭಾಗದಲ್ಲಿ ಭತ್ತದ ಬೆಳೆ ನೆಲಕ್ಕೊರಗಿದ್ದು, ತೆನೆ ಮೊಳಕೆಯೊಡೆಯುವ ಆತಂಕ ಎದುರಾಗಿದೆ. ಹತ್ತಿ ಬೆಳೆಗೆ ತೇವಾಂಶ ಹೆಚ್ಚಾಗಿದ್ದು, ಕಪ್ಪಾಗುತ್ತಿದೆ. ಇಳುವರಿ ಕುಸಿಯುವ ಆತಂಕ ಎದುರಾಗಿದೆ.</p><p>ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಬೆಳೆ ಹಾನಿ ಕುರಿತು ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದ್ದು, ಶುಕ್ರವಾರ ಸಂಜೆ ಹೊತ್ತಿಗೆ ನಿಖರ ಅಂಕಿ ಸಂಖ್ಯೆ ಸಿಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<h2>ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಶವವಾಗಿ ಪತ್ತೆ</h2><p>ಚಿಕ್ಕಮಗಳೂರು: ಜಿಲ್ಲೆಯ ಬಯಲು ಸೀಮೆಯ ಪ್ರದೇಶದಲ್ಲಿ ಮಳೆ ಜೋರಾಗಿದ್ದು, ತೆಂಗಿನ ತೋಟಗಳು ಜಲಾವೃತಗೊಂಡಿವೆ. ತಾಲ್ಲೂಕಿನ ದೇವಗೊಂಡನಹಳ್ಳಿಯಲ್ಲಿ ನೀರಿನಲ್ಲಿ ಕೊಚ್ಚಿಹೋದ ರೈತರೊಬ್ಬರು ಮೃತಪಟ್ಟಿದ್ದಾರೆ.</p><p>ಎಮ್ಮೆ ಮೇಯಿಸಲು ಹೋಗಿದ್ದ ಲಕ್ಷ್ಮಣಗೌಡ ಮನೆಗೆ ವಾಪಸ್ ಬಂದಿರಲಿಲ್ಲ. ಬುಧವಾರ ಹಳ್ಳದ ನೀರಿನಲ್ಲಿ ಅವರ ಮೃತದೇಹ ದೊರೆತಿದೆ. ಹಳ್ಳ ದಾಟುವಾಗ ಕಾಲುಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.</p><p>ಕಡೂರು ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿದಿದೆ ಕಡೂರು- ಚಿಕ್ಕಮಗಳೂರು ರೈಲು ಸಂಚಾರಕ್ಕೂ ಗುರುವಾರ ಕೆಲಕಾಲ ತೊಂದರೆಯಾಗಿತ್ತು. ಭಾರಿ ಮಳೆಗೆ ಕಣಿವೆ ಗ್ರಾಮದ ಬಳಿ ರೈಲು ಮಾರ್ಗದ ಜಲ್ಲಿ ಜರಿದಿದ್ದವು. ಚಿಕ್ಕಮಗಳೂರಿನಿಂದ ಶಿವಮೊಗ್ಗ ಹೊರಟಿದ್ದ ರೈಲನ್ನು ಅರ್ಧ ಗಂಟೆ ನಿಲ್ಲಿಸಿ ಜಲ್ಲಿ ಸರಿಪಡಿಸಲಾಯಿತು. ಬಳಿಕ ರೈಲು ಸಂಚಾರ ಸುಗಮಗೊಂಡಿದೆ.</p><h2><strong>ಕಿತ್ತೂರು ಉತ್ಸವಕ್ಕೆ ಅಡ್ಡಿ– ಬೆಳಗಾವಿ (ವರದಿ): </strong></h2><p>ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಗುರುವಾರ ಆರಂಭವಾದ ಕಿತ್ತೂರು ಉತ್ಸವದ ಮೊದಲ ದಿನವೇ ಪಟ್ಟಣದಲ್ಲಿ ಧಾರಾಕಾರ ಮಳೆ ಸುರಿಯಿತು. ಉತ್ಸವಕ್ಕೆ ಸೇರಿದ್ದ ಅಪಾರ ಜನ ಚದುರಿಹೋದರು. ಮಳೆಯಲ್ಲೇ ಕಲಾವಿದರು ಮೆರವಣಿಗೆ ಮುಂದುವರಿಸಿದರು.</p><p>ಮಧ್ಯಾಹ್ನ 3ರ ಬಳಿಕ ಬಿರುಸು ಪಡೆದ ಮಳೆ ಎರಡು ತಾಸು ಎಡೆಬಿಡದೇ ಸುರಿಯಿತು. ಉತ್ಸವದ ವೇದಿಕೆ ಹಾಕಿರುವ ಕೋಟೆ ಮೈದಾನದಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿತ್ರದುರ್ಗ, ಚಿಕ್ಕಮಗಳೂರು, ಮೈಸೂರು ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಬುಧವಾರ ಮುಂಜಾನೆ ಹಾಗೂ ಗುರುವಾರ ಬಿರುಸಿನ ಮಳೆಯಾಗಿದ್ದು, ಹಲವು ಕಡೆ ಭತ್ತ, ರಾಗಿ, ಜೋಳ, ಮೆಕ್ಕೆಜೋಳ, ಈರುಳ್ಳಿ ಬೆಳೆಗಳಿಗೆ ಹಾನಿಯಾಗಿದೆ.</p>.<h2><strong>ಚಿತ್ರದುರ್ಗ ವರದಿ: </strong></h2><p>ಬುಧವಾರ ಮಧ್ಯರಾತ್ರಿಯಿಂದ ಮಳೆ ಬಿರುಸಾಗಿದ್ದು ಬೆಳೆಗೆ ತೀವ್ರ ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ ರಾಗಿ, ಹೊಳಲ್ಕೆರೆ ತಾಲ್ಲೂಕಿನಲ್ಲಿ ಮೆಕ್ಕೆಜೋಳ, ಚಳ್ಳಕೆರೆ ತಾಲ್ಲೂಕಿನಲ್ಲಿ ಈರುಳ್ಳಿ ಬೆಳೆ ಹಾಳಾಗಿದೆ.</p>.<h2>ಮನೆಗಳಿಗೆ ನೀರು:</h2><p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದೆ. ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಿನ್ನೀರು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ.</p><p>ಜಲಾಶಯ ಭರ್ತಿಯಾಗಿ ಕೋಡಿ ಬಿದ್ದಿದ್ದು, ವರ್ಷದಲ್ಲಿ ಎರಡನೇ ಬಾರಿಗೆ ಜಲಾಶಯ ಭರ್ತಿಯಾಗಿ ಕೋಡಿಯಲ್ಲಿ ನೀರು ಹರಿಯುತ್ತಿದೆ. ಸದ್ಯ ಜಲಾಶಯಕ್ಕೆ 6,702 ಕ್ಯೂಸೆಕ್ ಒಳಹರಿವು ಇದೆ. 6,418 ಕ್ಯೂಸೆಕ್ ಹೊರಹರಿವು ಇದೆ.</p><h2><strong>ದಾವಣಗೆರೆ ವರದಿ: </strong></h2><p>ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಟಾವಿಗೆ ಬಂದಿರುವ ಬೆಳೆ ನೀರುಪಾಲಾಗುವ ಆತಂಕ ಮೂಡಿದೆ. ಬುಧವಾರ ಮಧ್ಯರಾತ್ರಿ ಆರಂಭವಾದ ಮಳೆ ಗುರುವಾರವೂ ಸುರಿಯಿತು.</p><p>ಹರಿಹರ ತಾಲ್ಲೂಕಿನ ಜಿಗಳಿ ಗ್ರಾಮದಲ್ಲಿ ಹಳ್ಳದ ನೀರು ನುಗ್ಗಿ 10 ಎಕರೆ ಭತ್ತದ ಬೆಳೆಗೆ ಹಾನಿಯಾಗಿದೆ. ಜಗಳೂರು ತಾಲ್ಲೂಕಿನಲ್ಲಿ ರಾಗಿ, ಈರುಳ್ಳಿ ನೆಲಕಚ್ಚಿದೆ. ಚನ್ನಗಿರಿ ತಾಲ್ಲೂಕಿನಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ.</p><h2><strong>ನೆಲಕ್ಕೊರಗಿದ ಭತ್ತ–ಕಲಬುರಗಿ ವರದಿ: </strong></h2><p>ನಗರ ಸೇರಿದಂತೆ ಕಲ್ಯಾಣ ಕರ್ನಾಟಕದ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ, ಕಾರಟಗಿ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭತ್ತದ ಫಸಲು ನೆಲಕ್ಕೊರಗಿದೆ. ಕೊಪ್ಪಳ, ಕುಷ್ಟಗಿ, ಕನಕಗಿರಿ, ಮುನಿರಾಬಾದ್, ಯಲಬುರ್ಗಾ ಭಾಗದಲ್ಲಿ ಮಳೆ ಸುರಿದಿದೆ.</p><p>ಕಲಬುರಗಿಯಲ್ಲಿ ಮಧ್ಯಾಹ್ನ ಅರ್ಧ ಗಂಟೆ ಮಳೆ ಸುರಿದಿದೆ. ಜಿಲ್ಲೆಯ ಕಾಳಗಿ, ಕಮಲಾಪುರ ಹಾಗೂ ಆಳಂದದಲ್ಲೂ ಮಳೆಯಾದ ಬಗ್ಗೆ ವರದಿಯಾಗಿದೆ.</p><h2><strong>ಮನೆಗಳಿಗೆ ಹಾನಿ–ಮೈಸೂರು ವರದಿ: </strong></h2><p>ಜಿಲ್ಲೆಯೂ ಸೇರಿದಂತೆ ಕಾವೇರಿ ಕಣಿವೆಯಲ್ಲಿ ಬುಧವಾರ ನಸುಕಿನಿಂದ ಗುರುವಾರ ಬೆಳಿಗ್ಗೆಯವರೆಗೂ ಜೋರು ಮಳೆಯಾಯಿತು. ಇದರಿಂದಾಗಿ ಅಲ್ಲಲ್ಲಿ ಮನೆಗಳು ಹಾಗೂ ಬೆಳೆಗಳಿಗೆ ಹಾನಿಯಾಗಿದೆ.</p><p><strong>ಮಡಿಕೇರಿ ವರದಿ:</strong> ಕೊಡಗು ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಯಿತು. ಹಾರಂಗಿ ಜಲಾಶಯ ಅಕ್ಟೋಬರ್ ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಎರಡನೇ ಸಲ ಭರ್ತಿಯಾಗಿದೆ.</p><p><strong>ಮಂಡ್ಯ ವರದಿ:</strong> ಜಿಲ್ಲೆಯ ಕಿಕ್ಕೇರಿ ಹೋಬಳಿಯ ಕಾರಿಗಾನಹಳ್ಳಿ ಗ್ರಾಮದ ಕಾಂತರಾಜು ಎಂಬವರ ಮನೆ ಕುಸಿದಿದ್ದು, ಮನೆಯಲ್ಲಿದ್ದ ದವಸ–ಧಾನ್ಯ, ಅಡುಗೆ ಪಾತ್ರೆಗಳು ಹಾಳಾಗಿವೆ.</p><p><strong>ಹಾಸನ ವರದಿ:</strong> ಹಾಸನ ಜಿಲ್ಲೆಯಲ್ಲಿ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಬಿದ್ದಿದೆ. ಬುಧವಾರ ರಾತ್ರಿ ಸುರಿದ ಜೋರು ಮಳೆಯಿಂದಾಗಿ ಕೆಲ ಗ್ರಾಮಗಳಲ್ಲಿ ರಸ್ತೆಗಳಿಗೆ ಹಾನಿ ಉಂಟಾಗಿದೆ.</p><p><strong>ಗುಡುಗಿನ ಅರ್ಭಟ– ಹುಬ್ಬಳ್ಳಿ ವರದಿ:</strong> ಧಾರವಾಡ, ಉತ್ತರ ಕನ್ನಡ, ಗದಗ, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಯ ವಿವಿಧೆಡೆ ಕೆಲವೆಡೆ ಮಳೆ ಸುರಿಯಿತು.</p><p>ಧಾರವಾಡ ಸೇರಿ ಜಿಲ್ಲೆಯ ಹುಬ್ಬಳ್ಳಿ, ಕಲಘಟಗಿ, ಕುಂದಗೋಳದಲ್ಲಿ ಗುಡುಗು, ಮಿಂಚಿನೊಂದಿಗೆ ಧಾರಾಕಾರ ಮಳೆ ಸುರಿಯಿತು.</p><p><strong>ಉತ್ತರ ಕನ್ನಡ</strong> ಜಿಲ್ಲೆಯ ಕರಾವಳಿ ಭಾಗದ ಹೊನ್ನಾವರ, ಕುಮಟಾದಲ್ಲಿ ಹೆಚ್ಚು ಮಳೆ ಸುರಿಯಿತು. ಮುಂಡಗೋಡ ಭಾಗದಲ್ಲೂ ಮಳೆಯಾಯಿತು.</p><p>ಗದಗವೂ ಸೇರಿ ಜಿಲ್ಲೆಯ ಲಕ್ಷ್ಮೇಶ್ವರ, ಮುಂಡರಗಿ, ಶಿರಹಟ್ಟಿ, ಗಜೇಂದ್ರಗಡ ಭಾಗದಲ್ಲಿ ಮಳೆ ಸುರಿಯಿತು.</p><p>ಬೆಳಗಾವಿ ನಗರ, ಸವದತ್ತಿ, ರಾಮದುರ್ಗ ತಾಲ್ಲೂಕುಗಳಲ್ಲೂ ಸಾಧಾರಣ ಮಳೆ ಸುರಿಯಿತು.</p><h2><strong>12 ಮನೆ ಹಾನಿ: </strong></h2><p>ಬಳ್ಳಾರಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ 12 ಮನೆಗಳಿಗೆ ಹಾನಿಯಾಗಿದೆ.</p><p>ಸಿರುಗುಪ್ಪ, ಕಂಪ್ಲಿ ಭಾಗದಲ್ಲಿ ಭತ್ತದ ಬೆಳೆ ನೆಲಕ್ಕೊರಗಿದ್ದು, ತೆನೆ ಮೊಳಕೆಯೊಡೆಯುವ ಆತಂಕ ಎದುರಾಗಿದೆ. ಹತ್ತಿ ಬೆಳೆಗೆ ತೇವಾಂಶ ಹೆಚ್ಚಾಗಿದ್ದು, ಕಪ್ಪಾಗುತ್ತಿದೆ. ಇಳುವರಿ ಕುಸಿಯುವ ಆತಂಕ ಎದುರಾಗಿದೆ.</p><p>ಜಿಲ್ಲೆಯಲ್ಲಿ ಮಳೆಯಿಂದಾಗಿರುವ ಬೆಳೆ ಹಾನಿ ಕುರಿತು ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದ್ದು, ಶುಕ್ರವಾರ ಸಂಜೆ ಹೊತ್ತಿಗೆ ನಿಖರ ಅಂಕಿ ಸಂಖ್ಯೆ ಸಿಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<h2>ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಶವವಾಗಿ ಪತ್ತೆ</h2><p>ಚಿಕ್ಕಮಗಳೂರು: ಜಿಲ್ಲೆಯ ಬಯಲು ಸೀಮೆಯ ಪ್ರದೇಶದಲ್ಲಿ ಮಳೆ ಜೋರಾಗಿದ್ದು, ತೆಂಗಿನ ತೋಟಗಳು ಜಲಾವೃತಗೊಂಡಿವೆ. ತಾಲ್ಲೂಕಿನ ದೇವಗೊಂಡನಹಳ್ಳಿಯಲ್ಲಿ ನೀರಿನಲ್ಲಿ ಕೊಚ್ಚಿಹೋದ ರೈತರೊಬ್ಬರು ಮೃತಪಟ್ಟಿದ್ದಾರೆ.</p><p>ಎಮ್ಮೆ ಮೇಯಿಸಲು ಹೋಗಿದ್ದ ಲಕ್ಷ್ಮಣಗೌಡ ಮನೆಗೆ ವಾಪಸ್ ಬಂದಿರಲಿಲ್ಲ. ಬುಧವಾರ ಹಳ್ಳದ ನೀರಿನಲ್ಲಿ ಅವರ ಮೃತದೇಹ ದೊರೆತಿದೆ. ಹಳ್ಳ ದಾಟುವಾಗ ಕಾಲುಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.</p><p>ಕಡೂರು ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿದಿದೆ ಕಡೂರು- ಚಿಕ್ಕಮಗಳೂರು ರೈಲು ಸಂಚಾರಕ್ಕೂ ಗುರುವಾರ ಕೆಲಕಾಲ ತೊಂದರೆಯಾಗಿತ್ತು. ಭಾರಿ ಮಳೆಗೆ ಕಣಿವೆ ಗ್ರಾಮದ ಬಳಿ ರೈಲು ಮಾರ್ಗದ ಜಲ್ಲಿ ಜರಿದಿದ್ದವು. ಚಿಕ್ಕಮಗಳೂರಿನಿಂದ ಶಿವಮೊಗ್ಗ ಹೊರಟಿದ್ದ ರೈಲನ್ನು ಅರ್ಧ ಗಂಟೆ ನಿಲ್ಲಿಸಿ ಜಲ್ಲಿ ಸರಿಪಡಿಸಲಾಯಿತು. ಬಳಿಕ ರೈಲು ಸಂಚಾರ ಸುಗಮಗೊಂಡಿದೆ.</p><h2><strong>ಕಿತ್ತೂರು ಉತ್ಸವಕ್ಕೆ ಅಡ್ಡಿ– ಬೆಳಗಾವಿ (ವರದಿ): </strong></h2><p>ಜಿಲ್ಲೆಯ ಚನ್ನಮ್ಮನ ಕಿತ್ತೂರಿನಲ್ಲಿ ಗುರುವಾರ ಆರಂಭವಾದ ಕಿತ್ತೂರು ಉತ್ಸವದ ಮೊದಲ ದಿನವೇ ಪಟ್ಟಣದಲ್ಲಿ ಧಾರಾಕಾರ ಮಳೆ ಸುರಿಯಿತು. ಉತ್ಸವಕ್ಕೆ ಸೇರಿದ್ದ ಅಪಾರ ಜನ ಚದುರಿಹೋದರು. ಮಳೆಯಲ್ಲೇ ಕಲಾವಿದರು ಮೆರವಣಿಗೆ ಮುಂದುವರಿಸಿದರು.</p><p>ಮಧ್ಯಾಹ್ನ 3ರ ಬಳಿಕ ಬಿರುಸು ಪಡೆದ ಮಳೆ ಎರಡು ತಾಸು ಎಡೆಬಿಡದೇ ಸುರಿಯಿತು. ಉತ್ಸವದ ವೇದಿಕೆ ಹಾಕಿರುವ ಕೋಟೆ ಮೈದಾನದಲ್ಲಿ ಅಪಾರ ಪ್ರಮಾಣದ ನೀರು ನುಗ್ಗಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>