<p><strong>ಹುಬ್ಬಳ್ಳಿ:</strong> ಉತ್ತರ ಕನ್ನಡ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. </p>.<p>ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಶನಿವಾರ ವ್ಯಾಪಕ ಮಳೆ ಸುರಿದಿದ್ದು, ಅಂಕೋಲಾ ತಾಲ್ಲೂಕಿನ ಹಾರವಾಡದಲ್ಲಿ ರಾಜ್ಯದಲ್ಲೇ ಗರಿಷ್ಠ 8 ಸೆಂ.ಮೀ ಮಳೆ ಸುರಿಯಿತು.</p>.<p>ಮಳೆ ಹಿನ್ನೆಲೆಯಲ್ಲಿ ಕಾರವಾರ ತಾಲ್ಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕಾರವಾರ–ಕೈಗಾ ರಾಜ್ಯ ಹೆದ್ದಾರಿ ಭಾಗಶಃ ಜಲಾವೃತಗೊಂಡಿತ್ತು.</p>.<p>ಬಿರುಸಿನ ಗಾಳಿ ಇದ್ದ ಪರಿಣಾಮ ವಾಣಿಜ್ಯ ಮತ್ತು ಮೀನುಗಾರಿಕೆ ಬಂದರಿಗೆ ಇನ್ನಷ್ಟು ಮೀನುಗಾರಿಕೆ ದೋಣಿಗಳು ತಡರಾತ್ರಿಯಿಂದಲೂ ಬಂದು ಲಂಗರು ಹಾಕಿದವು.</p>.<h2><strong>ಮೊಳಕೆಯೊಡೆದ ಮೆಕ್ಕೆಜೋಳ: </strong></h2><h2></h2><p>ವಿಜಯನಗರ ಜಿಲ್ಲೆಯಲ್ಲಿ ಮಳೆ ಹಾಗೂ ತೇವಾಂಶದಿಂದಾಗಿ ಅಪಾರ ಪ್ರಮಾಣದ ಮೆಕ್ಕೆಜೋಳ ರಾಶಿಯಲ್ಲೇ ಮೊಳಕೆಯೊಡೆದಿದೆ.</p>.<p>ಹೂವಿನಹಡಗಲಿ ಪಟ್ಟಣ ಸುತ್ತಮುತ್ತಲ ಗ್ರಾಮಗಳ ರೈತರು ಸಾವಿರಾರು ಕ್ವಿಂಟಲ್ನಷ್ಟು ಮೆಕ್ಕೆಜೋಳವನ್ನು ಎಪಿಎಂಸಿ ಪ್ರಾಂಗಣದಲ್ಲೇ ಒಣಗಿಸಿ ಮಾರಾಟ ಮಾಡಲು ತಂದಿದ್ದಾರೆ. ತಾಡಪಾಲು ಮುಚ್ಚಿದ್ದರೂ ಮಳೆಗೆ ಸಿಲುಕಿ ಮೆಕ್ಕೆಜೋಳ ಮೊಳಕೆಯೊಡೆದೆ. ನಾಲ್ಕೈದು ದಿನಗಳಿಂದ ಬಿಸಿಲಿಲ್ಲದೆ ಕೂಡ್ಲಿಗಿ ತಾಲ್ಲೂಕಿನಲ್ಲಿ ಸಹ ಇದೇ ಸಮಸ್ಯೆ ಎದುರಾಗಿದೆ.</p>.<p>ಮೆಕ್ಕೆಜೋಳ ಖರೀದಿಗೆ ವರ್ತಕರು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ಖರೀದಿ ಕೇಂದ್ರ ತೆರೆದು, ಕ್ವಿಂಟಲ್ಗೆ ₹2400ರ ಬೆಂಬಲ ಬೆಲೆಯಲ್ಲಿ ಖರೀದಿಸಲಿ ಎಂದು ಆಗ್ರಹಿಸಿದ್ದಾರೆ.</p>.<h2><strong>ತುಂಗಭದ್ರಾ ಒಳಹರಿವು ಹೆಚ್ಚಳ: </strong></h2><h2></h2><p>ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 26,815 ಕ್ಯೂಸೆಕ್ಗೆ ಏರಿದ್ದು, ಜಲಾಶಯದಿಂದ 14,950 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.</p>.<p>ಬಳ್ಳಾರಿ ಜಿಲ್ಲೆಯಲ್ಲಿ 18 ಮನೆಗಳಿಗೆ ಹಾನಿಯಾಗಿದೆ. ಕಂಪ್ಲಿ, ಸಿರುಗುಪ್ಪ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಹಾನಿಗೀಡಾಗಿದೆ. </p>.<p>ಸಿರುಗುಪ್ಪ ತಾಲ್ಲೂಕಿನಲ್ಲಿ ಮಳೆಯಿಂದಾಗಿ ಭತ್ತ ಕಟಾವು, ಒಕ್ಕಣೆಗೆ ಅಡಚಣೆಯಾಗಿದೆ. ಹಲವು ಕಡೆ ಒಕ್ಕಣೆ ಮಾಡಿದ್ದ ಮೆಕ್ಕೆಜೋಳ ಹಾಳಾಗಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಈರುಳ್ಳಿ ಬೆಳೆಗಾರರು ಮಳೆಯಿಂದಾಗಿ ಮತ್ತಷ್ಟು ಸಮಸ್ಯೆಗೆ ಗುರಿಯಾಗಿದ್ದಾರೆ. </p>.<p>ಬೆಳೆ ಹಾನಿ ಕುರಿತು ಜಿಲ್ಲಾಡಳಿತ ಜಂಟಿ ಸಮೀಕ್ಷೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><div class="bigfact-title"><strong>ಬೀದರ್ನಲ್ಲಿ ಮಳೆ:</strong></div><div class="bigfact-description"><strong>ಜಿಲ್ಲೆಯ ಹಲವೆಡೆ ಶನಿವಾರವೂ ಮಳೆಯಾಗಿದೆ. ಔರಾದ್ ತಾಲ್ಲೂಕಿನಲ್ಲಿ ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾಗಿದೆ. ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿಯಲ್ಲೂ ವರ್ಷಧಾರೆಯಾಗಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.</strong></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಉತ್ತರ ಕನ್ನಡ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. </p>.<p>ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಶನಿವಾರ ವ್ಯಾಪಕ ಮಳೆ ಸುರಿದಿದ್ದು, ಅಂಕೋಲಾ ತಾಲ್ಲೂಕಿನ ಹಾರವಾಡದಲ್ಲಿ ರಾಜ್ಯದಲ್ಲೇ ಗರಿಷ್ಠ 8 ಸೆಂ.ಮೀ ಮಳೆ ಸುರಿಯಿತು.</p>.<p>ಮಳೆ ಹಿನ್ನೆಲೆಯಲ್ಲಿ ಕಾರವಾರ ತಾಲ್ಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಕಾರವಾರ–ಕೈಗಾ ರಾಜ್ಯ ಹೆದ್ದಾರಿ ಭಾಗಶಃ ಜಲಾವೃತಗೊಂಡಿತ್ತು.</p>.<p>ಬಿರುಸಿನ ಗಾಳಿ ಇದ್ದ ಪರಿಣಾಮ ವಾಣಿಜ್ಯ ಮತ್ತು ಮೀನುಗಾರಿಕೆ ಬಂದರಿಗೆ ಇನ್ನಷ್ಟು ಮೀನುಗಾರಿಕೆ ದೋಣಿಗಳು ತಡರಾತ್ರಿಯಿಂದಲೂ ಬಂದು ಲಂಗರು ಹಾಕಿದವು.</p>.<h2><strong>ಮೊಳಕೆಯೊಡೆದ ಮೆಕ್ಕೆಜೋಳ: </strong></h2><h2></h2><p>ವಿಜಯನಗರ ಜಿಲ್ಲೆಯಲ್ಲಿ ಮಳೆ ಹಾಗೂ ತೇವಾಂಶದಿಂದಾಗಿ ಅಪಾರ ಪ್ರಮಾಣದ ಮೆಕ್ಕೆಜೋಳ ರಾಶಿಯಲ್ಲೇ ಮೊಳಕೆಯೊಡೆದಿದೆ.</p>.<p>ಹೂವಿನಹಡಗಲಿ ಪಟ್ಟಣ ಸುತ್ತಮುತ್ತಲ ಗ್ರಾಮಗಳ ರೈತರು ಸಾವಿರಾರು ಕ್ವಿಂಟಲ್ನಷ್ಟು ಮೆಕ್ಕೆಜೋಳವನ್ನು ಎಪಿಎಂಸಿ ಪ್ರಾಂಗಣದಲ್ಲೇ ಒಣಗಿಸಿ ಮಾರಾಟ ಮಾಡಲು ತಂದಿದ್ದಾರೆ. ತಾಡಪಾಲು ಮುಚ್ಚಿದ್ದರೂ ಮಳೆಗೆ ಸಿಲುಕಿ ಮೆಕ್ಕೆಜೋಳ ಮೊಳಕೆಯೊಡೆದೆ. ನಾಲ್ಕೈದು ದಿನಗಳಿಂದ ಬಿಸಿಲಿಲ್ಲದೆ ಕೂಡ್ಲಿಗಿ ತಾಲ್ಲೂಕಿನಲ್ಲಿ ಸಹ ಇದೇ ಸಮಸ್ಯೆ ಎದುರಾಗಿದೆ.</p>.<p>ಮೆಕ್ಕೆಜೋಳ ಖರೀದಿಗೆ ವರ್ತಕರು ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ಖರೀದಿ ಕೇಂದ್ರ ತೆರೆದು, ಕ್ವಿಂಟಲ್ಗೆ ₹2400ರ ಬೆಂಬಲ ಬೆಲೆಯಲ್ಲಿ ಖರೀದಿಸಲಿ ಎಂದು ಆಗ್ರಹಿಸಿದ್ದಾರೆ.</p>.<h2><strong>ತುಂಗಭದ್ರಾ ಒಳಹರಿವು ಹೆಚ್ಚಳ: </strong></h2><h2></h2><p>ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ 26,815 ಕ್ಯೂಸೆಕ್ಗೆ ಏರಿದ್ದು, ಜಲಾಶಯದಿಂದ 14,950 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.</p>.<p>ಬಳ್ಳಾರಿ ಜಿಲ್ಲೆಯಲ್ಲಿ 18 ಮನೆಗಳಿಗೆ ಹಾನಿಯಾಗಿದೆ. ಕಂಪ್ಲಿ, ಸಿರುಗುಪ್ಪ ತಾಲ್ಲೂಕುಗಳಲ್ಲಿ ಭತ್ತದ ಬೆಳೆ ಹಾನಿಗೀಡಾಗಿದೆ. </p>.<p>ಸಿರುಗುಪ್ಪ ತಾಲ್ಲೂಕಿನಲ್ಲಿ ಮಳೆಯಿಂದಾಗಿ ಭತ್ತ ಕಟಾವು, ಒಕ್ಕಣೆಗೆ ಅಡಚಣೆಯಾಗಿದೆ. ಹಲವು ಕಡೆ ಒಕ್ಕಣೆ ಮಾಡಿದ್ದ ಮೆಕ್ಕೆಜೋಳ ಹಾಳಾಗಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಈರುಳ್ಳಿ ಬೆಳೆಗಾರರು ಮಳೆಯಿಂದಾಗಿ ಮತ್ತಷ್ಟು ಸಮಸ್ಯೆಗೆ ಗುರಿಯಾಗಿದ್ದಾರೆ. </p>.<p>ಬೆಳೆ ಹಾನಿ ಕುರಿತು ಜಿಲ್ಲಾಡಳಿತ ಜಂಟಿ ಸಮೀಕ್ಷೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p>.<div><div class="bigfact-title"><strong>ಬೀದರ್ನಲ್ಲಿ ಮಳೆ:</strong></div><div class="bigfact-description"><strong>ಜಿಲ್ಲೆಯ ಹಲವೆಡೆ ಶನಿವಾರವೂ ಮಳೆಯಾಗಿದೆ. ಔರಾದ್ ತಾಲ್ಲೂಕಿನಲ್ಲಿ ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾಗಿದೆ. ಜಿಲ್ಲೆಯ ಬಸವಕಲ್ಯಾಣ, ಭಾಲ್ಕಿಯಲ್ಲೂ ವರ್ಷಧಾರೆಯಾಗಿದೆ. ಸತತ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.</strong></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>