<p><strong>ಮಂಗಳೂರು</strong>: ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಮಂದುವರಿದಿದ್ದು, ಗುರುವಾರವೂ ದಿನವಿಡೀ ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗಿದೆ.</p><p>ಉಡುಪಿ ಜಿಲ್ಲೆ ಮತ್ತು ದಕ್ಷಿಣಕನ್ನಡದ ಮಂಗಳೂರು, ಉಳ್ಳಾಲ, ಬಂಟ್ವಾಳ, ಕಡಬ, ಮೂಲ್ಕಿ, ಮೂಡುಬಿದಿರೆ ವ್ಯಾಪ್ತಿಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ 25ರಂದೂ ರಜೆ ಘೋಷಿಸಲಾಗಿದೆ. </p><p>ಉಳ್ಳಾಲ ತಾಲ್ಲೂಕು ಪಜೀರು ಗ್ರಾಮದ ಅರ್ಕಾಣದಲ್ಲಿ ರಸ್ತೆಗೆ ಗುಡ್ಡ ಕುಸಿದುಬಿದ್ದಿದೆ. ಅರ್ಧ ಭಾಗದಷ್ಟು ರಸ್ತೆ ಮಣ್ಣಿನಿಂದ ಆವೃತವಾಗಿದ್ದು, ಸಂಚಾರ ವ್ಯಸ್ತವಾಗಿದೆ.</p><p>ಕಾರ್ಕಳ ತಾಲ್ಲೂಕಿನ ಮಾಳ - ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವೆಡೆ ಗುಡ್ಡ ಜರಿದಿದೆ. ಬ್ರಹ್ಮಾವರ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. </p><p>‘26ರವರೆಗೆ ಅರಬ್ಬಿಸಮುದ್ರ ಪ್ರಕ್ಷುಬ್ದ ವಾಗಿರಲಿದೆ. ಮೀನುಗಾರರು ಸಮುದ್ರಕ್ಕೆ ತೆರಳಬಾರದು’ ಎಂದು ಹವಾಮಾನ ಇಲಾಖೆ, ಮೀನುಗಾರಿಕೆ ಇಲಾಖೆಯು ಸಲಹೆ ಮಾಡಿದೆ.</p><p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದಾಗಿ ನದಿಗಳ ಹರಿವು ಹೆಚ್ಚಾಗಿದೆ. ಶೃಂಗೇರಿ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಕೊಪ್ಪ, ಎನ್.ಆರ್.ಪುರ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಯಿತು. ಚಿಕ್ಕಮಗಳೂರಿನಲ್ಲಿ ಜಿಟಿಜಿಟಿ ಮಳೆ ಸುರಿಯಿತು.</p><p><strong>ಶಿವಮೊಗ್ಗ ವರದಿ:</strong> ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಮತ್ತು ಸಾಗರ ತಾಲ್ಲೂಕಿನ ಹಲವೆಡೆ ಗುರುವಾರ ಬೆಳಿಗ್ಗೆಯಿಂದಲೂ ಮಳೆ ಅಬ್ಬರಿಸುತ್ತಿದೆ. ಜಿಲ್ಲೆಯ ಹೊಸನಗರ, ಭದ್ರಾವತಿ, ತಾಲ್ಲೂಕಿನಲ್ಲೂ ನಿರಂತರ ಮಳೆಯಾಗುತ್ತಿದೆ.</p><p>ತೀರ್ಥಹಳ್ಳಿ ತಾಲ್ಲೂಕಿನ ಅರೇಹಳ್ಳಿ, ಮೇಗರವಳ್ಳಿ, ಹೊಸಹಳ್ಳಿ, ಹೊನ್ನೇತಾಳು, ತೀರ್ಥಮತ್ತೂರು, ಸಾಲ್ಗಡಿ, ನೆರಟೂರು, ಆರಗ, ತೂದೂರು, ಬೆಜ್ಜವಳ್ಳಿ, ಬಾಂಡ್ಯ ಕುಕ್ಕೆ, ತ್ರಯಂಬಕಪುರ, ಹಾದಿಗಲ್ಲು ಸುತ್ತಮುತ್ತಲೂ ಉತ್ತಮ ರೀತಿಯಲ್ಲಿ ಸುರಿದಿದೆ.</p><p><strong>ಕಾರವಾರ ವರದಿ</strong>: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಹತ್ತಾರು ಮನೆಗಳಿಗೆ ಹಾನಿಯಾಗಿದೆ. </p><p>ಮಲೆನಾಡು ಭಾಗದ ಶಿರಸಿ, ಸಿದ್ದಾಪುರದಲ್ಲೂ ಆಗಾಗ ರಭಸದ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಕುಮಟಾ, ಭಟ್ಕಳದಲ್ಲಿ 10ಕ್ಕೂ ಹೆಚ್ಚು ಮನೆಗಳ ಗೋಡೆ ಕುಸಿದಿದೆ.</p><p><strong>ಮಡಿಕೇರಿ ವರದಿ:</strong> ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ನಿರಂತರ ಮಳೆ ಆಗುತ್ತಿದೆ. ಭಾಗಮಂಡಲದಲ್ಲಿ ಜೋರು, ಸೋಮವಾರಪೇಟೆಯಲ್ಲಿ ಸಾಧಾರಣ ಮಳೆಯಾಗಿದೆ. </p><p>ಮೈಸೂರು ನಗರದಲ್ಲೂ ಆಗಾಗ ತುಂತುರು ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆ ಮಂದುವರಿದಿದ್ದು, ಗುರುವಾರವೂ ದಿನವಿಡೀ ಬಿಟ್ಟು ಬಿಟ್ಟು ಧಾರಾಕಾರ ಮಳೆಯಾಗಿದೆ.</p><p>ಉಡುಪಿ ಜಿಲ್ಲೆ ಮತ್ತು ದಕ್ಷಿಣಕನ್ನಡದ ಮಂಗಳೂರು, ಉಳ್ಳಾಲ, ಬಂಟ್ವಾಳ, ಕಡಬ, ಮೂಲ್ಕಿ, ಮೂಡುಬಿದಿರೆ ವ್ಯಾಪ್ತಿಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ 25ರಂದೂ ರಜೆ ಘೋಷಿಸಲಾಗಿದೆ. </p><p>ಉಳ್ಳಾಲ ತಾಲ್ಲೂಕು ಪಜೀರು ಗ್ರಾಮದ ಅರ್ಕಾಣದಲ್ಲಿ ರಸ್ತೆಗೆ ಗುಡ್ಡ ಕುಸಿದುಬಿದ್ದಿದೆ. ಅರ್ಧ ಭಾಗದಷ್ಟು ರಸ್ತೆ ಮಣ್ಣಿನಿಂದ ಆವೃತವಾಗಿದ್ದು, ಸಂಚಾರ ವ್ಯಸ್ತವಾಗಿದೆ.</p><p>ಕಾರ್ಕಳ ತಾಲ್ಲೂಕಿನ ಮಾಳ - ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವೆಡೆ ಗುಡ್ಡ ಜರಿದಿದೆ. ಬ್ರಹ್ಮಾವರ ವ್ಯಾಪ್ತಿಯಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. </p><p>‘26ರವರೆಗೆ ಅರಬ್ಬಿಸಮುದ್ರ ಪ್ರಕ್ಷುಬ್ದ ವಾಗಿರಲಿದೆ. ಮೀನುಗಾರರು ಸಮುದ್ರಕ್ಕೆ ತೆರಳಬಾರದು’ ಎಂದು ಹವಾಮಾನ ಇಲಾಖೆ, ಮೀನುಗಾರಿಕೆ ಇಲಾಖೆಯು ಸಲಹೆ ಮಾಡಿದೆ.</p><p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದಾಗಿ ನದಿಗಳ ಹರಿವು ಹೆಚ್ಚಾಗಿದೆ. ಶೃಂಗೇರಿ, ಕಳಸ, ಮೂಡಿಗೆರೆ, ಕೊಟ್ಟಿಗೆಹಾರ, ಬಾಳೆಹೊನ್ನೂರು, ಕೊಪ್ಪ, ಎನ್.ಆರ್.ಪುರ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಯಿತು. ಚಿಕ್ಕಮಗಳೂರಿನಲ್ಲಿ ಜಿಟಿಜಿಟಿ ಮಳೆ ಸುರಿಯಿತು.</p><p><strong>ಶಿವಮೊಗ್ಗ ವರದಿ:</strong> ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಮತ್ತು ಸಾಗರ ತಾಲ್ಲೂಕಿನ ಹಲವೆಡೆ ಗುರುವಾರ ಬೆಳಿಗ್ಗೆಯಿಂದಲೂ ಮಳೆ ಅಬ್ಬರಿಸುತ್ತಿದೆ. ಜಿಲ್ಲೆಯ ಹೊಸನಗರ, ಭದ್ರಾವತಿ, ತಾಲ್ಲೂಕಿನಲ್ಲೂ ನಿರಂತರ ಮಳೆಯಾಗುತ್ತಿದೆ.</p><p>ತೀರ್ಥಹಳ್ಳಿ ತಾಲ್ಲೂಕಿನ ಅರೇಹಳ್ಳಿ, ಮೇಗರವಳ್ಳಿ, ಹೊಸಹಳ್ಳಿ, ಹೊನ್ನೇತಾಳು, ತೀರ್ಥಮತ್ತೂರು, ಸಾಲ್ಗಡಿ, ನೆರಟೂರು, ಆರಗ, ತೂದೂರು, ಬೆಜ್ಜವಳ್ಳಿ, ಬಾಂಡ್ಯ ಕುಕ್ಕೆ, ತ್ರಯಂಬಕಪುರ, ಹಾದಿಗಲ್ಲು ಸುತ್ತಮುತ್ತಲೂ ಉತ್ತಮ ರೀತಿಯಲ್ಲಿ ಸುರಿದಿದೆ.</p><p><strong>ಕಾರವಾರ ವರದಿ</strong>: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ಹತ್ತಾರು ಮನೆಗಳಿಗೆ ಹಾನಿಯಾಗಿದೆ. </p><p>ಮಲೆನಾಡು ಭಾಗದ ಶಿರಸಿ, ಸಿದ್ದಾಪುರದಲ್ಲೂ ಆಗಾಗ ರಭಸದ ಮಳೆಯಾಗುತ್ತಿದೆ. ನಿರಂತರ ಮಳೆಯಿಂದ ಕುಮಟಾ, ಭಟ್ಕಳದಲ್ಲಿ 10ಕ್ಕೂ ಹೆಚ್ಚು ಮನೆಗಳ ಗೋಡೆ ಕುಸಿದಿದೆ.</p><p><strong>ಮಡಿಕೇರಿ ವರದಿ:</strong> ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ನಿರಂತರ ಮಳೆ ಆಗುತ್ತಿದೆ. ಭಾಗಮಂಡಲದಲ್ಲಿ ಜೋರು, ಸೋಮವಾರಪೇಟೆಯಲ್ಲಿ ಸಾಧಾರಣ ಮಳೆಯಾಗಿದೆ. </p><p>ಮೈಸೂರು ನಗರದಲ್ಲೂ ಆಗಾಗ ತುಂತುರು ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>