<p><strong>ಬೆಂಗಳೂರು:</strong> ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಜನಜೀವನನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ರಾಜ್ಯದ ಉಳಿದ ಭಾಗದಲ್ಲಿ ಉತ್ತಮ ಮಳೆಯಾಗಿದೆ.</p>.<p>ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 26.8 ಸೆಂ.ಮೀ. ಮಳೆ ಸುರಿದಿದೆ.ಶರಾವತಿ ಕೊಳ್ಳದ ಜೋಗದ ಕೆಪಿಸಿ ವಸಾಹತು ಪ್ರದೇಶದಲ್ಲಿರುವ ಪುರಾತನ ವಸತಿಗೃಹಗಳ ಮುಂಭಾಗದಲ್ಲಿ ಗುಡ್ಡ ಕುಸಿದಿದೆ.</p>.<p>ಭದ್ರಾ ಮತ್ತು ತುಂಗಾ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೋಣನತಂಬಿಗಿ-ನಿಟ್ಟೂರು ಕ್ರಾಸ್ ಸಮೀಪದ ತುಂಗಭದ್ರಾ ನದಿ ನೀರಿನಲ್ಲಿ ಇಬ್ಬರು ಯುವಕರು ಎರಡು ಎತ್ತುಗಳೊಂದಿಗೆ ನೀರು ಪಾಲಾಗಿದ್ದಾರೆ. ಹೊಸಪೇಟೆ ಬಳಿಯ ಹಂಪಿ ಸ್ಮಾರಕಗಳು ಜಲಾವೃತಗೊಂಡಿವೆ.</p>.<p>ಕೊಡಗು ಜಿಲ್ಲೆಯಲ್ಲಿ ಮತ್ತೆ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಜನಜೀವನನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ರಾಜ್ಯದ ಉಳಿದ ಭಾಗದಲ್ಲಿ ಉತ್ತಮ ಮಳೆಯಾಗಿದೆ.</p>.<p>ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 26.8 ಸೆಂ.ಮೀ. ಮಳೆ ಸುರಿದಿದೆ.ಶರಾವತಿ ಕೊಳ್ಳದ ಜೋಗದ ಕೆಪಿಸಿ ವಸಾಹತು ಪ್ರದೇಶದಲ್ಲಿರುವ ಪುರಾತನ ವಸತಿಗೃಹಗಳ ಮುಂಭಾಗದಲ್ಲಿ ಗುಡ್ಡ ಕುಸಿದಿದೆ.</p>.<p>ಭದ್ರಾ ಮತ್ತು ತುಂಗಾ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೋಣನತಂಬಿಗಿ-ನಿಟ್ಟೂರು ಕ್ರಾಸ್ ಸಮೀಪದ ತುಂಗಭದ್ರಾ ನದಿ ನೀರಿನಲ್ಲಿ ಇಬ್ಬರು ಯುವಕರು ಎರಡು ಎತ್ತುಗಳೊಂದಿಗೆ ನೀರು ಪಾಲಾಗಿದ್ದಾರೆ. ಹೊಸಪೇಟೆ ಬಳಿಯ ಹಂಪಿ ಸ್ಮಾರಕಗಳು ಜಲಾವೃತಗೊಂಡಿವೆ.</p>.<p>ಕೊಡಗು ಜಿಲ್ಲೆಯಲ್ಲಿ ಮತ್ತೆ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>