<p><strong>ಹುಬ್ಬಳ್ಳಿ/ದಾವಣಗೆರೆ:</strong> ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಬಿರುಗಾಳಿ ಇದ್ದು, ಹಾವೇರಿ, ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.</p>.<p>ಹಾವೇರಿ ಜಿಲ್ಲೆ ರಾಣೆಬೆನ್ನೂರು, ಗದಗ ಜಿಲ್ಲೆಯ ಮುಂಡರಗಿ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಯಿತು. ಬಹುತೇಕ ಕಡೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು.</p>.<p>ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯಲ್ಲಿ ಆಂಜನೇಯ ಸ್ವಾಮಿ ರಥೋತ್ಸವ ಮತ್ತು ಸಿದ್ಧೇಶ್ವರನಗರದ ಸಿದ್ದೇಶ್ವರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಮಳೆಗೆ ಸಿಲುಕಿದರು. </p>.<p>ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಹಲವೆಡೆ ಬಿರುಗಾಳಿಗೆ ಪಪ್ಪಾಯ, ಬಾಳೆಬೆಳೆಗಳು ನೆಲಕ್ಕುರುಳಿವೆ.</p>.<p>ಹೊಳಲ್ಕೆರೆ, ಚಿಕ್ಕಜಾಜೂರು, ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ ಉತ್ತಮ ಮಳೆಯಾಗಿದ್ದು, ಪಪ್ಪಾಯ ಹಾಗೂ ಬಾಳೆ ಬೆಳೆ ನೆಲಕ್ಕುರುಳಿದೆ.</p>.<p>ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ, ಜಗಳೂರು ತಾಲ್ಲೂಕಿನ ಕಡರನಾಯ್ಕನಹಳ್ಳಿ, ನಂದಿಗುಡಿ ಸೇರಿ ವಿವಿಧೆಡೆ ಸುಮಾರು 45 ನಿಮಿಷ ಸುರಿದಿದೆ. ಬಿರುಗಾಳಿ ಸಹಿತ ಉತ್ತಮ ಮಳೆಯಾಗಿದೆ.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾಂದಿ, ಆಲ್ದೂರು, ಕೆಂಜಿಗೆ, ಬಣಕಲ್ ಹೊರಟ್ಟಿ, ಬಣಕಲ್, ಸುತ್ತಮುತ್ತ ಕೂಡ ಮಳೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ/ದಾವಣಗೆರೆ:</strong> ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಬಿರುಗಾಳಿ ಇದ್ದು, ಹಾವೇರಿ, ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.</p>.<p>ಹಾವೇರಿ ಜಿಲ್ಲೆ ರಾಣೆಬೆನ್ನೂರು, ಗದಗ ಜಿಲ್ಲೆಯ ಮುಂಡರಗಿ ಸೇರಿ ವಿವಿಧೆಡೆ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಯಿತು. ಬಹುತೇಕ ಕಡೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತು.</p>.<p>ರಾಣೆಬೆನ್ನೂರಿನ ಅಡವಿ ಆಂಜನೇಯ ಬಡಾವಣೆಯಲ್ಲಿ ಆಂಜನೇಯ ಸ್ವಾಮಿ ರಥೋತ್ಸವ ಮತ್ತು ಸಿದ್ಧೇಶ್ವರನಗರದ ಸಿದ್ದೇಶ್ವರ ಸ್ವಾಮಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರು ಮಳೆಗೆ ಸಿಲುಕಿದರು. </p>.<p>ಚಿತ್ರದುರ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಸಂಜೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಹಲವೆಡೆ ಬಿರುಗಾಳಿಗೆ ಪಪ್ಪಾಯ, ಬಾಳೆಬೆಳೆಗಳು ನೆಲಕ್ಕುರುಳಿವೆ.</p>.<p>ಹೊಳಲ್ಕೆರೆ, ಚಿಕ್ಕಜಾಜೂರು, ಹೊಸದುರ್ಗ ತಾಲ್ಲೂಕಿನ ಮಾಡದಕೆರೆಯಲ್ಲಿ ಉತ್ತಮ ಮಳೆಯಾಗಿದ್ದು, ಪಪ್ಪಾಯ ಹಾಗೂ ಬಾಳೆ ಬೆಳೆ ನೆಲಕ್ಕುರುಳಿದೆ.</p>.<p>ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ, ಜಗಳೂರು ತಾಲ್ಲೂಕಿನ ಕಡರನಾಯ್ಕನಹಳ್ಳಿ, ನಂದಿಗುಡಿ ಸೇರಿ ವಿವಿಧೆಡೆ ಸುಮಾರು 45 ನಿಮಿಷ ಸುರಿದಿದೆ. ಬಿರುಗಾಳಿ ಸಹಿತ ಉತ್ತಮ ಮಳೆಯಾಗಿದೆ.</p>.<p>ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾಂದಿ, ಆಲ್ದೂರು, ಕೆಂಜಿಗೆ, ಬಣಕಲ್ ಹೊರಟ್ಟಿ, ಬಣಕಲ್, ಸುತ್ತಮುತ್ತ ಕೂಡ ಮಳೆಯಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>