<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ನದಿಗಳು ಉಕ್ಕಿಹರಿಯುತ್ತಿವೆ. ಮಳೆಯಿಂದ ಇಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಕೆಲವೆಡೆ ರಸ್ತೆಗಳು ಕೊಚ್ಚಿ ಹೋಗಿದ್ದು, ಸೇತುವೆಗಳು ಹಾಗೂ ಗದ್ದೆಗಳು ಪ್ರವಾಹದಲ್ಲಿ ಮುಳುಗಿವೆ.</p>.<p>ಮೈಸೂರು ಜಿಲ್ಲೆಯಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರಿನಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮರದಡಿ ನಿಂತಿದ್ದ ಮಹದೇವೇಗೌಡ (50)ಎಂಬುವರ ಮೇಲೆ ಮರ ಉರುಳಿ ಅವರು ಸಾವಿಗೀಡಾಗಿದ್ದಾರೆ. ಹನುಮಂತ ಶೆಟ್ಟಿ ಹಾಗೂ ನಂಜುಂಡಸ್ವಾಮಿ ಎಂಬುವರು ಗಾಯಗೊಂಡಿದ್ದಾರೆ.</p>.<p>ಉಡುಪಿ ಜಿಲ್ಲೆಯ ನಿಟ್ಟೂರು ಹನುಮಂತನಗರ ರಸ್ತೆಯಲ್ಲಿ ಹೋಗುತ್ತಿದ್ದ ಗುಲಾಬಿ (60) ಎಂಬುವರು ಮಳೆ ನೀರು ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆ ಹಾರ ಸಮೀಪ ದೇವನಗೂಲ್ನಲ್ಲಿ ಮನೆ ಮೇಲೆ ಮರ ಬಿದ್ದಿದ್ದು, ಪುಷ್ಪಾ ಎಂಬುವರಿಗೆ ಗಾಯಗಳಾಗಿವೆ.</p>.<p>ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ಗಂಗಾವಳಿ ನದಿಯು ಉಕ್ಕಿ ಹರಿಯುತ್ತಿದೆ. ಗುಳ್ಳಾಪುರ ಸೇತುವೆಯ ಬಳಿ ನೀರಿನಲ್ಲಿ ಬೈಕ್ ತಳ್ಳಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.</p>.<p class="Subhead"><strong>ಭೂಕುಸಿತ:</strong> ಮಡಿಕೇರಿ ತಾಲ್ಲೂಕಿನ ಕತ್ತಲೆಕಾಡು ಬಳಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಕರಡಿಗೋಡು ಗ್ರಾಮದಲ್ಲಿ ಸ್ಥಳೀಯರನ್ನು ಸ್ಥಳಾಂತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.</p>.<p class="Subhead">50 ಸಾವಿರ ಕ್ಯುಸೆಕ್ ನೀರು ಹೊರಕ್ಕೆ: ಕಬಿನಿ ಜಲಾಶಯದಿಂದ 50 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.</p>.<p class="Subhead"><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದಲ್ಲಿ ಬುಧವಾರ ಭಾರಿ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಜಲಾವೃತವಾಗಿವೆ. ಹುಬ್ಬಳ್ಳಿಯಲ್ಲಿ 7 ಮನೆಗಳು ಕುಸಿದಿದ್ದು, ಹಾವೇರಿ ಜಿಲ್ಲೆಯಲ್ಲಿ 35 ಮನೆಗಳಿಗೆ ಹಾನಿಯಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ವರದಾ ನದಿ ತುಂಬಿ ಹರಿಯುತ್ತಿದೆ. ಹುಬ್ಬಳ್ಳಿಯಲ್ಲಿ ಉಣಕಲ್ ಕೆರೆ ಕೋಡಿ ಹರಿದಿದೆ.</p>.<p class="Subhead">ಚಾರ್ಮಾಡಿ ಘಾಟ್ ಬಂದ್: ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿದು, ರಸ್ತೆ ಸಂಚಾರ ಸ್ಥಗಿತವಾಗಿದೆ.</p>.<p class="Subhead"><strong>‘ರೆಡ್ ಅಲರ್ಟ್’: </strong>ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯದಿಂದ 59 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಜಿಲ್ಲಾಡಳಿತ ನದಿ ಪಾತ್ರದಲ್ಲಿ ‘ರೆಡ್ ಅಲರ್ಟ್’ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ನದಿಗಳು ಉಕ್ಕಿಹರಿಯುತ್ತಿವೆ. ಮಳೆಯಿಂದ ಇಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಕೆಲವೆಡೆ ರಸ್ತೆಗಳು ಕೊಚ್ಚಿ ಹೋಗಿದ್ದು, ಸೇತುವೆಗಳು ಹಾಗೂ ಗದ್ದೆಗಳು ಪ್ರವಾಹದಲ್ಲಿ ಮುಳುಗಿವೆ.</p>.<p>ಮೈಸೂರು ಜಿಲ್ಲೆಯಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರಿನಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ಮರದಡಿ ನಿಂತಿದ್ದ ಮಹದೇವೇಗೌಡ (50)ಎಂಬುವರ ಮೇಲೆ ಮರ ಉರುಳಿ ಅವರು ಸಾವಿಗೀಡಾಗಿದ್ದಾರೆ. ಹನುಮಂತ ಶೆಟ್ಟಿ ಹಾಗೂ ನಂಜುಂಡಸ್ವಾಮಿ ಎಂಬುವರು ಗಾಯಗೊಂಡಿದ್ದಾರೆ.</p>.<p>ಉಡುಪಿ ಜಿಲ್ಲೆಯ ನಿಟ್ಟೂರು ಹನುಮಂತನಗರ ರಸ್ತೆಯಲ್ಲಿ ಹೋಗುತ್ತಿದ್ದ ಗುಲಾಬಿ (60) ಎಂಬುವರು ಮಳೆ ನೀರು ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆ ಹಾರ ಸಮೀಪ ದೇವನಗೂಲ್ನಲ್ಲಿ ಮನೆ ಮೇಲೆ ಮರ ಬಿದ್ದಿದ್ದು, ಪುಷ್ಪಾ ಎಂಬುವರಿಗೆ ಗಾಯಗಳಾಗಿವೆ.</p>.<p>ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ಗಂಗಾವಳಿ ನದಿಯು ಉಕ್ಕಿ ಹರಿಯುತ್ತಿದೆ. ಗುಳ್ಳಾಪುರ ಸೇತುವೆಯ ಬಳಿ ನೀರಿನಲ್ಲಿ ಬೈಕ್ ತಳ್ಳಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದಾರೆ.</p>.<p class="Subhead"><strong>ಭೂಕುಸಿತ:</strong> ಮಡಿಕೇರಿ ತಾಲ್ಲೂಕಿನ ಕತ್ತಲೆಕಾಡು ಬಳಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಕರಡಿಗೋಡು ಗ್ರಾಮದಲ್ಲಿ ಸ್ಥಳೀಯರನ್ನು ಸ್ಥಳಾಂತರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ.</p>.<p class="Subhead">50 ಸಾವಿರ ಕ್ಯುಸೆಕ್ ನೀರು ಹೊರಕ್ಕೆ: ಕಬಿನಿ ಜಲಾಶಯದಿಂದ 50 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.</p>.<p class="Subhead"><strong>ಹುಬ್ಬಳ್ಳಿ:</strong> ಉತ್ತರ ಕರ್ನಾಟಕದಲ್ಲಿ ಬುಧವಾರ ಭಾರಿ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ 7 ಬ್ರಿಡ್ಜ್ ಕಮ್ ಬ್ಯಾರೇಜ್ಗಳು ಜಲಾವೃತವಾಗಿವೆ. ಹುಬ್ಬಳ್ಳಿಯಲ್ಲಿ 7 ಮನೆಗಳು ಕುಸಿದಿದ್ದು, ಹಾವೇರಿ ಜಿಲ್ಲೆಯಲ್ಲಿ 35 ಮನೆಗಳಿಗೆ ಹಾನಿಯಾಗಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನಲ್ಲಿ ವರದಾ ನದಿ ತುಂಬಿ ಹರಿಯುತ್ತಿದೆ. ಹುಬ್ಬಳ್ಳಿಯಲ್ಲಿ ಉಣಕಲ್ ಕೆರೆ ಕೋಡಿ ಹರಿದಿದೆ.</p>.<p class="Subhead">ಚಾರ್ಮಾಡಿ ಘಾಟ್ ಬಂದ್: ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿದು, ರಸ್ತೆ ಸಂಚಾರ ಸ್ಥಗಿತವಾಗಿದೆ.</p>.<p class="Subhead"><strong>‘ರೆಡ್ ಅಲರ್ಟ್’: </strong>ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯದಿಂದ 59 ಸಾವಿರ ಕ್ಯುಸೆಕ್ ನೀರು ಹೊರಬಿಡಲಾಗುತ್ತಿದೆ. ಜಿಲ್ಲಾಡಳಿತ ನದಿ ಪಾತ್ರದಲ್ಲಿ ‘ರೆಡ್ ಅಲರ್ಟ್’ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>