<p><strong>ಬೆಂಗಳೂರು:</strong> ‘ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿಜುಲೈ 11ರಿಂದ 13ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>‘ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೂರೂ ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ’.</p>.<p>‘ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಹೆಚ್ಚು ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಎಚ್ಚರಿಸಿದೆ.</p>.<p>‘ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದಜು.10ರಿಂದ 13ರವರೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ’.</p>.<p>‘ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಚದುರಿದಂತೆ ಮಳೆಯಾಗಬಹುದು’ ಎಂದೂ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಂಗಾರು ಬಿರುಸುಗೊಂಡಿರುವುದರಿಂದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿಜುಲೈ 11ರಿಂದ 13ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>‘ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೂರೂ ದಿನ ‘ರೆಡ್ ಅಲರ್ಟ್’ ಘೋಷಿಸಲಾಗಿದೆ’.</p>.<p>‘ಕರಾವಳಿ ಜಿಲ್ಲೆಗಳಲ್ಲಿ ಶನಿವಾರವೂ ಹೆಚ್ಚು ಮಳೆಯಾಗಲಿದೆ. ಈ ಭಾಗದಲ್ಲಿ ಗಂಟೆಗೆ ಗರಿಷ್ಠ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಎಚ್ಚರಿಸಿದೆ.</p>.<p>‘ಯಾದಗಿರಿ, ವಿಜಯಪುರ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದಜು.10ರಿಂದ 13ರವರೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ’.</p>.<p>‘ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಹೆಚ್ಚು ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಚದುರಿದಂತೆ ಮಳೆಯಾಗಬಹುದು’ ಎಂದೂ ಮಾಹಿತಿ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>