<p>ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾನುವಾರ ಮಳೆ ಮುಂದುವರಿದಿದ್ದು, ಕೊಡಗು ಜಿಲ್ಲೆಯಲ್ಲಿ ತಗ್ಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. </p>.<p>ಉತ್ತರ ಕನ್ನಡ ಜಿಲ್ಲೆ ಕುಮಟಾ, ಹೊನ್ನಾವರ ಭಾಗದಲ್ಲಿ ನಿರಂತರ ಮಳೆ ಆಗುತ್ತಿದೆ. ಕಾರವಾರ, ಭಟ್ಕಳ, ಯಲ್ಲಾಪುರ, ಶಿರಸಿ, ದಾಂಡೇಲಿ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.</p>.<p><strong>(ಮಡಿಕೇರಿ ವರದಿ):</strong> ಕೊಡಗು ಜಿಲ್ಲೆಯಲ್ಲಿ ಭಾನುವಾರ ಮಳೆ ಸಂಪೂರ್ಣ ತಗ್ಗಿದೆ. ಮಡಿಕೇರಿಯಲ್ಲಿ ಆಗಾಗ ಮಳೆಯಾಗಿದೆ. ಬಿರುಗಾಳಿಯಿಂದಾಗಿ ವಿವಿಧೆಡೆ 12 ವಿದ್ಯುತ್ ಕಂಬಗಳು ಹಾಗೂ 5 ಮರಗಳು ಧರೆಗುರುಳಿವೆ. ಮಳೆ ಕಡಿಮೆಯಾದ್ದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ.</p>.<p><strong>(ಮಂಗಳೂರು ವರದಿ):</strong>ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿ ಶನಿವಾರ ರಾತ್ರಿ ಮಳೆ ಬರುತ್ತಿದ್ದ ವೇಳೆ, ಕಾಲು ಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಪರಿಯಾಲ್ತಡ್ಕದ ಕೇಶವ ನಾಯ್ಕ (51) ಮೃತಪಟ್ಟಿದ್ದಾರೆ. ಭಾನುವಾರ ಅವರ ಮೃತದೇಹ ಪತ್ತೆಯಾಗಿದೆ.</p>.<p>ಸುಳ್ಯ ತಾಲ್ಲೂಕಿನ ಆಲೆಟ್ಟಿ ಗ್ರಾಮದ ಹೊನ್ನೇಡಿಯಲ್ಲಿ ಕಾಲುಸಂಕ ದಾಟುವಾಗ ಹಳ್ಳಕ್ಕೆ ಬಿದ್ದು ಗುರುವಾರ ಸಂಜೆ ನೀರಿನಲ್ಲಿ ಕೊಚ್ಚಿಹೋಗಿದ್ದ ನಾರಾಯಣ ಗೌಡ ಅವರ ಮೃತದೇಹ ಭಾನುವಾರ ಪತ್ತೆಯಾಗಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಭಾನುವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ ಸುಳ್ಯ ತಾಲ್ಲೂಕಿನ ಅಜ್ಜಾವರದಲ್ಲಿ ರಾಜ್ಯದಲ್ಲೇ ಗರಿಷ್ಠ (12.55 ಸೆಂ.ಮೀ.) ಮಳೆಯಾಗಿದೆ.</p>.<p>ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಕಣಂಜಾರು, ಬೈಂದೂರು ತಾಲ್ಲೂಕಿನ ಕಂಬದಕೋಣೆ, ಯಳಜಿತ್, ಪಡುವರಿ, ಕಾಪು ತಾಲ್ಲೂಕಿನ ತೆಂಕ, ಎಲ್ಲೂರು, ನಡ್ಸಾಲು, ಕುಂದಾಪುರ ತಾಲ್ಲೂಕಿನ ಹೊಸಾಡು, ಕೊಡ್ತಡಿ, ಉಡುಪಿ ತಾಲ್ಲೂಕಿನ ಅಲೆವೂರಿನಲ್ಲಿ ಕೆಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾನುವಾರ ಮಳೆ ಮುಂದುವರಿದಿದ್ದು, ಕೊಡಗು ಜಿಲ್ಲೆಯಲ್ಲಿ ತಗ್ಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. </p>.<p>ಉತ್ತರ ಕನ್ನಡ ಜಿಲ್ಲೆ ಕುಮಟಾ, ಹೊನ್ನಾವರ ಭಾಗದಲ್ಲಿ ನಿರಂತರ ಮಳೆ ಆಗುತ್ತಿದೆ. ಕಾರವಾರ, ಭಟ್ಕಳ, ಯಲ್ಲಾಪುರ, ಶಿರಸಿ, ದಾಂಡೇಲಿ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ.</p>.<p><strong>(ಮಡಿಕೇರಿ ವರದಿ):</strong> ಕೊಡಗು ಜಿಲ್ಲೆಯಲ್ಲಿ ಭಾನುವಾರ ಮಳೆ ಸಂಪೂರ್ಣ ತಗ್ಗಿದೆ. ಮಡಿಕೇರಿಯಲ್ಲಿ ಆಗಾಗ ಮಳೆಯಾಗಿದೆ. ಬಿರುಗಾಳಿಯಿಂದಾಗಿ ವಿವಿಧೆಡೆ 12 ವಿದ್ಯುತ್ ಕಂಬಗಳು ಹಾಗೂ 5 ಮರಗಳು ಧರೆಗುರುಳಿವೆ. ಮಳೆ ಕಡಿಮೆಯಾದ್ದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ.</p>.<p><strong>(ಮಂಗಳೂರು ವರದಿ):</strong>ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿ ಶನಿವಾರ ರಾತ್ರಿ ಮಳೆ ಬರುತ್ತಿದ್ದ ವೇಳೆ, ಕಾಲು ಸಂಕ ದಾಟುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಪರಿಯಾಲ್ತಡ್ಕದ ಕೇಶವ ನಾಯ್ಕ (51) ಮೃತಪಟ್ಟಿದ್ದಾರೆ. ಭಾನುವಾರ ಅವರ ಮೃತದೇಹ ಪತ್ತೆಯಾಗಿದೆ.</p>.<p>ಸುಳ್ಯ ತಾಲ್ಲೂಕಿನ ಆಲೆಟ್ಟಿ ಗ್ರಾಮದ ಹೊನ್ನೇಡಿಯಲ್ಲಿ ಕಾಲುಸಂಕ ದಾಟುವಾಗ ಹಳ್ಳಕ್ಕೆ ಬಿದ್ದು ಗುರುವಾರ ಸಂಜೆ ನೀರಿನಲ್ಲಿ ಕೊಚ್ಚಿಹೋಗಿದ್ದ ನಾರಾಯಣ ಗೌಡ ಅವರ ಮೃತದೇಹ ಭಾನುವಾರ ಪತ್ತೆಯಾಗಿದೆ.</p>.<p>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಭಾನುವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ ಸುಳ್ಯ ತಾಲ್ಲೂಕಿನ ಅಜ್ಜಾವರದಲ್ಲಿ ರಾಜ್ಯದಲ್ಲೇ ಗರಿಷ್ಠ (12.55 ಸೆಂ.ಮೀ.) ಮಳೆಯಾಗಿದೆ.</p>.<p>ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಕಣಂಜಾರು, ಬೈಂದೂರು ತಾಲ್ಲೂಕಿನ ಕಂಬದಕೋಣೆ, ಯಳಜಿತ್, ಪಡುವರಿ, ಕಾಪು ತಾಲ್ಲೂಕಿನ ತೆಂಕ, ಎಲ್ಲೂರು, ನಡ್ಸಾಲು, ಕುಂದಾಪುರ ತಾಲ್ಲೂಕಿನ ಹೊಸಾಡು, ಕೊಡ್ತಡಿ, ಉಡುಪಿ ತಾಲ್ಲೂಕಿನ ಅಲೆವೂರಿನಲ್ಲಿ ಕೆಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>