<p><strong>ಬೆಂಗಳೂರು</strong>: ಮುಂದಿನ ತಿಂಗಳು ತೆರವಾಗಲಿರುವ ರಾಜ್ಯಸಭೆಯ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 24 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಪ್ರಕ್ರಿಯೆ ಆರಂಭಿಸಿದೆ.</p><p>ಜೂನ್ 18 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಜೂನ್ 8 ಕಡೆಯ ದಿನ. ನಾಮಪತ್ರ ವಾಪಸ್ ಪಡೆಯಲು ಜೂನ್ 11 ಕಡೆಯ ದಿನ. ಜೂನ್ 18 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.</p><p>ಈ 24 ರಾಜ್ಯಸಭೆ ಸದಸ್ಯರು ವಿವಿಧ ರಾಜ್ಯಗಳ ವಿಧಾನಸಭೆಗಳಿಂದ ಚುನಾಯಿತರಾಗುತ್ತಾರೆ.</p><p>ಸದ್ಯ ಕರ್ನಾಟಕವನ್ನು ಪ್ರತಿನಿಧಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ. ನಾರಾಯಣ ಅವರ ರಾಜ್ಯಸಭೆಯ ಪ್ರಸಕ್ತ ಅವಧಿ ಇದೇ ಜೂನ್ 25 ರಂದು ಕೊನೆಗೊಳ್ಳಲಿದೆ.</p><p>ದೇವೇಗೌಡ ಮತ್ತೊಂದು ಅವಧಿಗೆ ರಾಜ್ಯ ಸಭೆಗೆ ಪ್ರವೇಶ ಪಡೆಯುವರೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.</p><p>ವಿಧಾನಸಭೆಯಲ್ಲಿ ಶಾಸಕರ ಸಂಖ್ಯಾ ಬಲದ ಪ್ರಕಾರ ತೆರವಾಗುವ ನಾಲ್ಕು ಸ್ಥಾನಗಳಲ್ಲಿ 3 ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿವೆ. ಬಿಜೆಪಿಗೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ.</p><p>93ರ ಇಳಿ ವಯಸ್ಸಿನ ದೇವೇಗೌಡರು→ ಮತ್ತೊಂದು ಅವಧಿಗೆ ರಾಜ್ಯಸಭೆ ಪ್ರವೇಶಿಸಲು ಉತ್ಸುಕ<br>ರಾಗಿದ್ದಾರೆ. ಆದರೆ, ಅವರ ಪಕ್ಷಕ್ಕೆ ಸಂಖ್ಯಾ ಬಲ ಇಲ್ಲದ ಕಾರಣ, ಬಿಜೆಪಿ ಸಹಾಯಹಸ್ತ ಚಾಚಿದರೆ ರಾಜ್ಯಸಭೆ ಪ್ರವೇಶಿಸಬಹುದು ಎಂಬ ಲೆಕ್ಕಾಚಾರ ಜೆಡಿಎಸ್ ವರಿಷ್ಠರದ್ದು.</p>.ಅಪರೂಪದ ರಾಜಕಾರಣಿ ದೇವೇಗೌಡ: ಮಂಜೇಗೌಡ .ದೇವೇಗೌಡ ಜನ್ಮದಿನದ ಅಂಗವಾಗಿ ಅಪ್ಪಾಜಿ ಕ್ಯಾಂಟೀನ್ನಲ್ಲಿ ₹1ಕ್ಕೆ ಮುದ್ದೆ ಊಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಂದಿನ ತಿಂಗಳು ತೆರವಾಗಲಿರುವ ರಾಜ್ಯಸಭೆಯ ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ಒಟ್ಟು 24 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಪ್ರಕ್ರಿಯೆ ಆರಂಭಿಸಿದೆ.</p><p>ಜೂನ್ 18 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಸಲು ಜೂನ್ 8 ಕಡೆಯ ದಿನ. ನಾಮಪತ್ರ ವಾಪಸ್ ಪಡೆಯಲು ಜೂನ್ 11 ಕಡೆಯ ದಿನ. ಜೂನ್ 18 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.</p><p>ಈ 24 ರಾಜ್ಯಸಭೆ ಸದಸ್ಯರು ವಿವಿಧ ರಾಜ್ಯಗಳ ವಿಧಾನಸಭೆಗಳಿಂದ ಚುನಾಯಿತರಾಗುತ್ತಾರೆ.</p><p>ಸದ್ಯ ಕರ್ನಾಟಕವನ್ನು ಪ್ರತಿನಿಧಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ. ನಾರಾಯಣ ಅವರ ರಾಜ್ಯಸಭೆಯ ಪ್ರಸಕ್ತ ಅವಧಿ ಇದೇ ಜೂನ್ 25 ರಂದು ಕೊನೆಗೊಳ್ಳಲಿದೆ.</p><p>ದೇವೇಗೌಡ ಮತ್ತೊಂದು ಅವಧಿಗೆ ರಾಜ್ಯ ಸಭೆಗೆ ಪ್ರವೇಶ ಪಡೆಯುವರೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.</p><p>ವಿಧಾನಸಭೆಯಲ್ಲಿ ಶಾಸಕರ ಸಂಖ್ಯಾ ಬಲದ ಪ್ರಕಾರ ತೆರವಾಗುವ ನಾಲ್ಕು ಸ್ಥಾನಗಳಲ್ಲಿ 3 ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿವೆ. ಬಿಜೆಪಿಗೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ.</p><p>93ರ ಇಳಿ ವಯಸ್ಸಿನ ದೇವೇಗೌಡರು→ ಮತ್ತೊಂದು ಅವಧಿಗೆ ರಾಜ್ಯಸಭೆ ಪ್ರವೇಶಿಸಲು ಉತ್ಸುಕ<br>ರಾಗಿದ್ದಾರೆ. ಆದರೆ, ಅವರ ಪಕ್ಷಕ್ಕೆ ಸಂಖ್ಯಾ ಬಲ ಇಲ್ಲದ ಕಾರಣ, ಬಿಜೆಪಿ ಸಹಾಯಹಸ್ತ ಚಾಚಿದರೆ ರಾಜ್ಯಸಭೆ ಪ್ರವೇಶಿಸಬಹುದು ಎಂಬ ಲೆಕ್ಕಾಚಾರ ಜೆಡಿಎಸ್ ವರಿಷ್ಠರದ್ದು.</p>.ಅಪರೂಪದ ರಾಜಕಾರಣಿ ದೇವೇಗೌಡ: ಮಂಜೇಗೌಡ .ದೇವೇಗೌಡ ಜನ್ಮದಿನದ ಅಂಗವಾಗಿ ಅಪ್ಪಾಜಿ ಕ್ಯಾಂಟೀನ್ನಲ್ಲಿ ₹1ಕ್ಕೆ ಮುದ್ದೆ ಊಟ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>