<p><strong>ಬೆಂಗಳೂರು:</strong> ದೇಶದಲ್ಲೇ ಅತಿಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲಾದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ.</p>.<p>2024ರಲ್ಲಿ ಮಹಾರಾಷ್ಟ್ರದಲ್ಲಿ 721, ತಮಿಳುನಾಡಿನಲ್ಲಿ 364 ಭ್ರಷ್ಟಾಚಾರದ ಪ್ರಕರಣಗಳು ದಾಖಲಾಗಿದ್ದರೆ, ಕರ್ನಾಟಕದಲ್ಲಿ 334 ಪ್ರಕರಣಗಳು ದಾಖಲಾಗಿವೆ.</p>.<p>ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್ಸಿಆರ್ಬಿ) ‘ಭಾರತದಲ್ಲಿ ಅಪರಾಧ–2024’ ವರದಿಯನ್ನು ಈಚೆಗೆ ಬಿಡುಗಡೆ ಮಾಡಿದೆ. ದೇಶದಾದ್ಯಂತ ಒಟ್ಟು 4,053 ಭ್ರಷ್ಟಾಚಾರ ಸಂಬಂಧಿ ಪ್ರಕರಣಗಳು ದಾಖಲಾಗಿವೆ ಎಂದು ದತ್ತಾಂಶ ನೀಡಿದೆ. ಈ ಪೈಕಿ ರಾಜ್ಯದ ಪ್ರಕರಣಗಳ ಪಾಲು ಶೇ 8.3ರಷ್ಟಾಗುತ್ತದೆ.</p>.<p>ರಾಜ್ಯದ 334ರ ಪೈಕಿ, ಲಂಚ ಪ್ರಕರಣಗಳಲ್ಲಿ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿ–ಸಿಬ್ಬಂದಿಯನ್ನು ಬಂಧಿಸಿದ ಪ್ರಕರಣಗಳ ಸಂಖ್ಯೆ 237ರಷ್ಟಿದೆ. ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ 75, ಅಪರಾಧಿಕ ಕರ್ತವ್ಯಲೋಪದ 17 ಮತ್ತು ಇತರೆ 5 ಪ್ರಕರಣಗಳು ದಾಖಲಾಗಿವೆ. </p>.<p>‘ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಲೋಕಾಯುಕ್ತ ಪೊಲೀಸ್ ಠಾಣೆಗಳನ್ನು ಆರಂಭಿಸಲಾಗಿದೆ. ಜನರು ಮುಂದೆ ಬಂದು ದೂರು ನೀಡುತ್ತಿದ್ದಾರೆ. ಹೀಗಾಗಿಯೇ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ’ ಎಂದು ಲೋಕಾಯುಕ್ತದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಕರ್ನಾಟಕಕ್ಕಿಂತ ಹಲವು ಪಟ್ಟು ಹೆಚ್ಚು ಜನಸಂಖ್ಯೆ ಇರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಪ್ರಕರಣಗಳು ದಾಖಲಾಗುತ್ತಿಲ್ಲ. ಹೆಚ್ಚು ಪ್ರಕರಣಗಳು ದಾಖಲಾದ ಮಾತ್ರಕ್ಕೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚು ಇದೆ ಎಂದು ಅರ್ಥವಲ್ಲ. ಬದಲಿಗೆ ಭ್ರಷ್ಟಾಚಾರವನ್ನು ತಡೆಯುವ ಕಾರ್ಯದಲ್ಲಿ ಜನರ ಭಾಗವಹಿಸುವಿಕೆ ಹೆಚ್ಚುತ್ತಿದೆ ಎಂದರ್ಥ. ಹೀಗಾಗಿಯೇ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದರೆ 2024ಕ್ಕೂ ಹಿಂದಿನ ವರ್ಷಗಳಿಗೆ ಹೋಲಿಸಿದರೆ, ದಾಖಲಾದ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ’ ಎಂದು ಅಧಿಕಾರಿ ವಿವರಿಸಿದರು.</p>.<h2>1,437 ಪ್ರಕರಣಗಳ ತನಿಖೆ ಬಾಕಿ</h2><p>ರಾಜ್ಯದಲ್ಲಿ 2024ಕ್ಕೂ ಹಿಂದಿನ ವರ್ಷಗಳ 1,448 ಭ್ರಷ್ಟಾಚಾರ ಪ್ರಕರಣಗಳ ತನಿಖೆ ಬಾಕಿ ಇತ್ತು. 2024ರಲ್ಲಿ ಹೊಸದಾಗಿ ದಾಖಲಾದ 334 ಸೇರಿ ಒಟ್ಟು1,782 ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇದ್ದವು. ವರ್ಷದ ಅವಧಿಯಲ್ಲಿ 291ರಲ್ಲಿ ಮಾತ್ರ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಅಂತಿಮ ವರದಿ ಸಲ್ಲಿಸಲು ಸಾಧ್ಯವಾಗಿದ್ದು 54ರಲ್ಲಿ. ಹೀಗಾಗಿ 2024ರ ಅಂತ್ಯಕ್ಕೆ 1,437 ಪ್ರಕರಣಗಳ ತನಿಖೆ ಬಾಕಿಯಾಗಿಯೇ ಇತ್ತು.</p><p>ನ್ಯಾಯಾಲಯಗಳಲ್ಲಿ ವಿಲೇವಾರಿಯಾದ ಪ್ರಕರಣಗಳ ಸಂಖ್ಯೆಯೂ ಕಡಿಮೆ ಇದೆ. 2024ರ ಆರಂಭದಲ್ಲಿ, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 1,529 ಭ್ರಷ್ಟಾಚಾರ ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದವು. 2024ರ ವರ್ಷಪೂರ್ತಿ ನ್ಯಾಯಾಲಯಕ್ಕೆ ಹೊಸದಾಗಿ 291 ಪ್ರಕರಣಗಳು ವಿಚಾರಣೆಗೆ ಬಂದಿದ್ದವು.ನ್ಯಾಯಾಲಯದ ಎದುರು ವಿಚಾರಣೆಗೆ ಇದ್ದ ಒಟ್ಟು 1,820 ಪ್ರಕರಣಗಳಲ್ಲಿ 205 ಮಾತ್ರವೇ ವಿಲೇವಾರಿಯಾಗಿವೆ. ಈ ಪೈಕಿ ಶಿಕ್ಷೆಯಾಗಿದ್ದು 49ರಲ್ಲಿ ಮಾತ್ರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದೇಶದಲ್ಲೇ ಅತಿಹೆಚ್ಚು ಭ್ರಷ್ಟಾಚಾರ ಪ್ರಕರಣಗಳು ದಾಖಲಾದ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ.</p>.<p>2024ರಲ್ಲಿ ಮಹಾರಾಷ್ಟ್ರದಲ್ಲಿ 721, ತಮಿಳುನಾಡಿನಲ್ಲಿ 364 ಭ್ರಷ್ಟಾಚಾರದ ಪ್ರಕರಣಗಳು ದಾಖಲಾಗಿದ್ದರೆ, ಕರ್ನಾಟಕದಲ್ಲಿ 334 ಪ್ರಕರಣಗಳು ದಾಖಲಾಗಿವೆ.</p>.<p>ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್ಸಿಆರ್ಬಿ) ‘ಭಾರತದಲ್ಲಿ ಅಪರಾಧ–2024’ ವರದಿಯನ್ನು ಈಚೆಗೆ ಬಿಡುಗಡೆ ಮಾಡಿದೆ. ದೇಶದಾದ್ಯಂತ ಒಟ್ಟು 4,053 ಭ್ರಷ್ಟಾಚಾರ ಸಂಬಂಧಿ ಪ್ರಕರಣಗಳು ದಾಖಲಾಗಿವೆ ಎಂದು ದತ್ತಾಂಶ ನೀಡಿದೆ. ಈ ಪೈಕಿ ರಾಜ್ಯದ ಪ್ರಕರಣಗಳ ಪಾಲು ಶೇ 8.3ರಷ್ಟಾಗುತ್ತದೆ.</p>.<p>ರಾಜ್ಯದ 334ರ ಪೈಕಿ, ಲಂಚ ಪ್ರಕರಣಗಳಲ್ಲಿ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿ–ಸಿಬ್ಬಂದಿಯನ್ನು ಬಂಧಿಸಿದ ಪ್ರಕರಣಗಳ ಸಂಖ್ಯೆ 237ರಷ್ಟಿದೆ. ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ 75, ಅಪರಾಧಿಕ ಕರ್ತವ್ಯಲೋಪದ 17 ಮತ್ತು ಇತರೆ 5 ಪ್ರಕರಣಗಳು ದಾಖಲಾಗಿವೆ. </p>.<p>‘ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಲೋಕಾಯುಕ್ತ ಪೊಲೀಸ್ ಠಾಣೆಗಳನ್ನು ಆರಂಭಿಸಲಾಗಿದೆ. ಜನರು ಮುಂದೆ ಬಂದು ದೂರು ನೀಡುತ್ತಿದ್ದಾರೆ. ಹೀಗಾಗಿಯೇ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ’ ಎಂದು ಲೋಕಾಯುಕ್ತದ ಅಧಿಕಾರಿಯೊಬ್ಬರು ಹೇಳಿದರು.</p>.<p>‘ಕರ್ನಾಟಕಕ್ಕಿಂತ ಹಲವು ಪಟ್ಟು ಹೆಚ್ಚು ಜನಸಂಖ್ಯೆ ಇರುವ ರಾಜ್ಯಗಳಲ್ಲಿ ಭ್ರಷ್ಟಾಚಾರ ಪ್ರಕರಣಗಳು ದಾಖಲಾಗುತ್ತಿಲ್ಲ. ಹೆಚ್ಚು ಪ್ರಕರಣಗಳು ದಾಖಲಾದ ಮಾತ್ರಕ್ಕೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚು ಇದೆ ಎಂದು ಅರ್ಥವಲ್ಲ. ಬದಲಿಗೆ ಭ್ರಷ್ಟಾಚಾರವನ್ನು ತಡೆಯುವ ಕಾರ್ಯದಲ್ಲಿ ಜನರ ಭಾಗವಹಿಸುವಿಕೆ ಹೆಚ್ಚುತ್ತಿದೆ ಎಂದರ್ಥ. ಹೀಗಾಗಿಯೇ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದರೆ 2024ಕ್ಕೂ ಹಿಂದಿನ ವರ್ಷಗಳಿಗೆ ಹೋಲಿಸಿದರೆ, ದಾಖಲಾದ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ’ ಎಂದು ಅಧಿಕಾರಿ ವಿವರಿಸಿದರು.</p>.<h2>1,437 ಪ್ರಕರಣಗಳ ತನಿಖೆ ಬಾಕಿ</h2><p>ರಾಜ್ಯದಲ್ಲಿ 2024ಕ್ಕೂ ಹಿಂದಿನ ವರ್ಷಗಳ 1,448 ಭ್ರಷ್ಟಾಚಾರ ಪ್ರಕರಣಗಳ ತನಿಖೆ ಬಾಕಿ ಇತ್ತು. 2024ರಲ್ಲಿ ಹೊಸದಾಗಿ ದಾಖಲಾದ 334 ಸೇರಿ ಒಟ್ಟು1,782 ಪ್ರಕರಣಗಳು ತನಿಖಾಧಿಕಾರಿಗಳ ಮುಂದೆ ಇದ್ದವು. ವರ್ಷದ ಅವಧಿಯಲ್ಲಿ 291ರಲ್ಲಿ ಮಾತ್ರ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಅಂತಿಮ ವರದಿ ಸಲ್ಲಿಸಲು ಸಾಧ್ಯವಾಗಿದ್ದು 54ರಲ್ಲಿ. ಹೀಗಾಗಿ 2024ರ ಅಂತ್ಯಕ್ಕೆ 1,437 ಪ್ರಕರಣಗಳ ತನಿಖೆ ಬಾಕಿಯಾಗಿಯೇ ಇತ್ತು.</p><p>ನ್ಯಾಯಾಲಯಗಳಲ್ಲಿ ವಿಲೇವಾರಿಯಾದ ಪ್ರಕರಣಗಳ ಸಂಖ್ಯೆಯೂ ಕಡಿಮೆ ಇದೆ. 2024ರ ಆರಂಭದಲ್ಲಿ, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ 1,529 ಭ್ರಷ್ಟಾಚಾರ ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದವು. 2024ರ ವರ್ಷಪೂರ್ತಿ ನ್ಯಾಯಾಲಯಕ್ಕೆ ಹೊಸದಾಗಿ 291 ಪ್ರಕರಣಗಳು ವಿಚಾರಣೆಗೆ ಬಂದಿದ್ದವು.ನ್ಯಾಯಾಲಯದ ಎದುರು ವಿಚಾರಣೆಗೆ ಇದ್ದ ಒಟ್ಟು 1,820 ಪ್ರಕರಣಗಳಲ್ಲಿ 205 ಮಾತ್ರವೇ ವಿಲೇವಾರಿಯಾಗಿವೆ. ಈ ಪೈಕಿ ಶಿಕ್ಷೆಯಾಗಿದ್ದು 49ರಲ್ಲಿ ಮಾತ್ರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>