<p><strong>ಬೆಂಗಳೂರು</strong>: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ವಿತರಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ₹20 ಕೋಟಿ ಬಿಡುಗಡೆ ಮಾಡಿದೆ.</p>.<p>ನೀಟ್, ಸಿಇಟಿ ಬರೆದು ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲು ಈ ಹಣ ಬಳಸಿಕೊಳ್ಳಲಾಗುತ್ತದೆ. ಆಯಾ ಕಾಲೇಜುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿಗದಿಪಡಿಸಿದ ಶುಲ್ಕದ ಆಧಾರದಲ್ಲಿ ಪ್ರತಿ ವಿದ್ಯಾರ್ಥಿಗೆ ₹50 ಸಾವಿರದಿಂದ ₹5 ಲಕ್ಷದವರೆಗೆ ಸಾಲಸೌಲಭ್ಯ ನೀಡಲಾಗುತ್ತದೆ. ಈ ಕುರಿತ ಒಪ್ಪಂದ ಪತ್ರವನ್ನು ಕೆಇಎಗೆ ಹಸ್ತಾಂತರಿಸಲಾಗಿದೆ ಎಂದು ಸಚಿವ ಜಮೀರ್ ಆಹಮದ್ ಖಾನ್ ಮಾಹಿತಿ ನೀಡಿದರು.</p>.<p>2025–26ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ 5,890 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ನೀಟ್, ಸಿಇಟಿ ಮೂಲಕ ಆಯ್ಕೆಯಾದವರಿಗಷ್ಟೇ ಶೈಕ್ಷಣಿಕ ಸಾಲದ ನೆರವು ಸಿಗಲಿದೆ. 2024-25ನೇ ಸಾಲಿನಲ್ಲಿ ಅರಿವು ಶಿಕ್ಷಣ ಸಾಲ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣದಿಂದ ಶಿಕ್ಷಣ ಸಂಸ್ಥೆಗಳಿಗೆ ಹಣ ಸಂದಾಯ ಆಗಿರಲಿಲ್ಲ. 1,018 ವಿದ್ಯಾರ್ಥಿಗಳ ಬಾಕಿ ಮೊತ್ತ ₹12.50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ವಿತರಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ₹20 ಕೋಟಿ ಬಿಡುಗಡೆ ಮಾಡಿದೆ.</p>.<p>ನೀಟ್, ಸಿಇಟಿ ಬರೆದು ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲು ಈ ಹಣ ಬಳಸಿಕೊಳ್ಳಲಾಗುತ್ತದೆ. ಆಯಾ ಕಾಲೇಜುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿಗದಿಪಡಿಸಿದ ಶುಲ್ಕದ ಆಧಾರದಲ್ಲಿ ಪ್ರತಿ ವಿದ್ಯಾರ್ಥಿಗೆ ₹50 ಸಾವಿರದಿಂದ ₹5 ಲಕ್ಷದವರೆಗೆ ಸಾಲಸೌಲಭ್ಯ ನೀಡಲಾಗುತ್ತದೆ. ಈ ಕುರಿತ ಒಪ್ಪಂದ ಪತ್ರವನ್ನು ಕೆಇಎಗೆ ಹಸ್ತಾಂತರಿಸಲಾಗಿದೆ ಎಂದು ಸಚಿವ ಜಮೀರ್ ಆಹಮದ್ ಖಾನ್ ಮಾಹಿತಿ ನೀಡಿದರು.</p>.<p>2025–26ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಸಮುದಾಯದ 5,890 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ನೀಟ್, ಸಿಇಟಿ ಮೂಲಕ ಆಯ್ಕೆಯಾದವರಿಗಷ್ಟೇ ಶೈಕ್ಷಣಿಕ ಸಾಲದ ನೆರವು ಸಿಗಲಿದೆ. 2024-25ನೇ ಸಾಲಿನಲ್ಲಿ ಅರಿವು ಶಿಕ್ಷಣ ಸಾಲ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣದಿಂದ ಶಿಕ್ಷಣ ಸಂಸ್ಥೆಗಳಿಗೆ ಹಣ ಸಂದಾಯ ಆಗಿರಲಿಲ್ಲ. 1,018 ವಿದ್ಯಾರ್ಥಿಗಳ ಬಾಕಿ ಮೊತ್ತ ₹12.50 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>