<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ದಂಡದ ಮೊತ್ತವನ್ನು ಹೆಚ್ಚಿಸಿ, ಜೈಲು ಶಿಕ್ಷೆಯನ್ನು ಕೈಬಿಡುವ ಉದ್ದೇಶದ ಕರ್ನಾಟಕ ಬಾಡಿಗೆ (ತಿದ್ದುಪಡಿ) ಮಸೂದೆಗೆ ವಿಧಾನಸಭೆ ಅಂಗೀಕಾರ ನೀಡಿತು. </p>.<p>ಮಸೂದೆಯ ಉದ್ದೇಶ ವಿವರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ‘ಕೇಂದ್ರ ಸರ್ಕಾರದ ರೂಪಿಸಿದ ಮಾದರಿ ಮಸೂದೆಗೆ ಕೆಲವು ಸರಳ ತಿದ್ದುಪಡಿ ಮಾಡಲಾಗಿದೆ. ಮೂಲ ಮಸೂದೆಯಲ್ಲಿ ಕಾನೂನು ಉಲ್ಲಂಘಿಸಿದರೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿತ್ತು. ಅದನ್ನು ಕೈಬಿಡಲಾಗಿದೆ’ ಎಂದು ಹೇಳಿದರು.</p>.<p>ಮಸೂದೆಯ ಕುರಿತು ಮಾತನಾಡಿದ ಬಿಜೆಪಿಯ ಸುರೇಶ್ ಕುಮಾರ್, ಸಣ್ಣಪುಟ್ಟ ಬಾಡಿಗೆದಾರರು ಶೋಷಣೆ ಒಳಗಾಗಿದ್ದಾರೆ. ಅದನ್ನು ತಡೆಯಲು ಮಸೂದೆಯಲ್ಲಿ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ‘ಇವತ್ತಿಗೂ ಸಣ್ಣ ಪುಟ್ಟ ಬಾಡಿಗೆದಾರರಿಗೆ ಶೋಷಣೆ ಆಗುತ್ತಿದೆ ಎಂಬುದು ನಿಜ. ಅಂತಹವರನ್ನು ರಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ, ನಾವು ಈ ಕಾನೂನನ್ನು ಅನುಸರಣೆ ಮಾಡುವುದನ್ನೇ ಮರೆತಿದ್ದೇವೆ. ನಾವೆಲ್ಲರೂ ಒಟ್ಟಾಗಿ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ಅವರು ಹೇಳಿದರು.</p>.ವಿಧಾನಸಭೆ: ರಸ್ತೆ ಸುರಕ್ಷತಾ ಮಸೂದೆ ಸೇರಿ ನಾಲ್ಕು ತಿದ್ದುಪಡಿ ಮಸೂದೆ ಮಂಡನೆ.ಅಧಿವೇಶನ | ವಿಧಾನ ಪರಿಷತ್, ವಿಧಾನಸಭೆ ಪ್ರಶ್ನೋತ್ತರಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ದಂಡದ ಮೊತ್ತವನ್ನು ಹೆಚ್ಚಿಸಿ, ಜೈಲು ಶಿಕ್ಷೆಯನ್ನು ಕೈಬಿಡುವ ಉದ್ದೇಶದ ಕರ್ನಾಟಕ ಬಾಡಿಗೆ (ತಿದ್ದುಪಡಿ) ಮಸೂದೆಗೆ ವಿಧಾನಸಭೆ ಅಂಗೀಕಾರ ನೀಡಿತು. </p>.<p>ಮಸೂದೆಯ ಉದ್ದೇಶ ವಿವರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ‘ಕೇಂದ್ರ ಸರ್ಕಾರದ ರೂಪಿಸಿದ ಮಾದರಿ ಮಸೂದೆಗೆ ಕೆಲವು ಸರಳ ತಿದ್ದುಪಡಿ ಮಾಡಲಾಗಿದೆ. ಮೂಲ ಮಸೂದೆಯಲ್ಲಿ ಕಾನೂನು ಉಲ್ಲಂಘಿಸಿದರೆ ಜೈಲು ಶಿಕ್ಷೆ ವಿಧಿಸುವ ಅವಕಾಶವಿತ್ತು. ಅದನ್ನು ಕೈಬಿಡಲಾಗಿದೆ’ ಎಂದು ಹೇಳಿದರು.</p>.<p>ಮಸೂದೆಯ ಕುರಿತು ಮಾತನಾಡಿದ ಬಿಜೆಪಿಯ ಸುರೇಶ್ ಕುಮಾರ್, ಸಣ್ಣಪುಟ್ಟ ಬಾಡಿಗೆದಾರರು ಶೋಷಣೆ ಒಳಗಾಗಿದ್ದಾರೆ. ಅದನ್ನು ತಡೆಯಲು ಮಸೂದೆಯಲ್ಲಿ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕೃಷ್ಣ ಬೈರೇಗೌಡ, ‘ಇವತ್ತಿಗೂ ಸಣ್ಣ ಪುಟ್ಟ ಬಾಡಿಗೆದಾರರಿಗೆ ಶೋಷಣೆ ಆಗುತ್ತಿದೆ ಎಂಬುದು ನಿಜ. ಅಂತಹವರನ್ನು ರಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ, ನಾವು ಈ ಕಾನೂನನ್ನು ಅನುಸರಣೆ ಮಾಡುವುದನ್ನೇ ಮರೆತಿದ್ದೇವೆ. ನಾವೆಲ್ಲರೂ ಒಟ್ಟಾಗಿ ಜನರಲ್ಲಿ ಅರಿವು ಮೂಡಿಸಬೇಕು’ ಎಂದು ಅವರು ಹೇಳಿದರು.</p>.ವಿಧಾನಸಭೆ: ರಸ್ತೆ ಸುರಕ್ಷತಾ ಮಸೂದೆ ಸೇರಿ ನಾಲ್ಕು ತಿದ್ದುಪಡಿ ಮಸೂದೆ ಮಂಡನೆ.ಅಧಿವೇಶನ | ವಿಧಾನ ಪರಿಷತ್, ವಿಧಾನಸಭೆ ಪ್ರಶ್ನೋತ್ತರಗಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>