<p><strong>ನವದೆಹಲಿ:</strong> ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಆಗಸ್ಟ್ 16ರಿಂದ ಅಸಹಕಾರ ಚಳವಳಿ ನಡೆಸಲಾಗುವುದು. ಮಂತ್ರಿಗಳ ಓಡಾಟಕ್ಕೆ ಬಿಡುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಎಚ್ಚರಿಸಿದರು. </p>.<p>ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ತೀರ್ಪಿನ ಜಾರಿಗಾಗಿ ಆ. 1ರಂದು ಸಾಂಕೇತಿಕವಾಗಿ 30 ಜಿಲ್ಲೆಗಳಲ್ಲಿ ಹೋರಾಟ ಮಾಡಲಿದ್ದೇವೆ. 11ರಂದು ವಿಧಾನಸಭೆ ಅಧಿವೇಶನ ಪ್ರಾರಂಭ ಆಗಲಿದ್ದು, ಅಷ್ಟರಲ್ಲಿ ಜಾರಿ ಮಾಡದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದರು. </p>.<p>‘ಕಾಂಗ್ರೆಸ್ಸಿನವರಿಗೆ ರಾಜ್ಯದಲ್ಲಿ ಸರ್ಕಾರ ನಡೆಸಲು ಬರುತ್ತಿಲ್ಲ. ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಎಷ್ಟು ಹೆಕ್ಟೇರ್ ಬಿತ್ತನೆ ಮಾಡುತ್ತೇವೆ, ಯಾವ್ಯಾವ ಬೆಳೆ ಬಿತ್ತನೆ ಆಗಲಿದೆ, ಡಿಎಪಿ, ಯೂರಿಯಾ ಸೇರಿ ಎಷ್ಟು ಗೊಬ್ಬರ ಬೇಕಾಗಲಿದೆ- ಇವೆಲ್ಲ ಮಾಹಿತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಳೆಗಾಲ ಆರಂಭಕ್ಕೆ ಮುನ್ನವೇ ಪಡೆಯಬೇಕಿತ್ತು. ಯಾವುದೇ ಸಿದ್ಧತೆ ಮಾಡದ ಕಾರಣ ಗಂಭೀರ ಸಮಸ್ಯೆ ಎದುರಾಗಿದೆ’ ಎಂದರು. </p>.<p>‘ಈ ಸರ್ಕಾರಕ್ಕೆ ದೀನದಲಿತರ ಬಗ್ಗೆ ಕಳಕಳಿ- ಕಾಳಜಿ ಇಲ್ಲ. ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಅನುದಾನ ಕೊಟ್ಟಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಮತ ಬ್ಯಾಂಕ್ ರಾಜಕಾರಣಕ್ಕಾಗಿ ಪರಿಶಿಷ್ಟ ಉಪಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಈ ಹಣದ ದುರ್ಬಳಕೆ ಸರಿಯಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಆಗಸ್ಟ್ 16ರಿಂದ ಅಸಹಕಾರ ಚಳವಳಿ ನಡೆಸಲಾಗುವುದು. ಮಂತ್ರಿಗಳ ಓಡಾಟಕ್ಕೆ ಬಿಡುವುದಿಲ್ಲ ಎಂದು ಸಂಸದ ಗೋವಿಂದ ಕಾರಜೋಳ ಎಚ್ಚರಿಸಿದರು. </p>.<p>ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ತೀರ್ಪಿನ ಜಾರಿಗಾಗಿ ಆ. 1ರಂದು ಸಾಂಕೇತಿಕವಾಗಿ 30 ಜಿಲ್ಲೆಗಳಲ್ಲಿ ಹೋರಾಟ ಮಾಡಲಿದ್ದೇವೆ. 11ರಂದು ವಿಧಾನಸಭೆ ಅಧಿವೇಶನ ಪ್ರಾರಂಭ ಆಗಲಿದ್ದು, ಅಷ್ಟರಲ್ಲಿ ಜಾರಿ ಮಾಡದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದರು. </p>.<p>‘ಕಾಂಗ್ರೆಸ್ಸಿನವರಿಗೆ ರಾಜ್ಯದಲ್ಲಿ ಸರ್ಕಾರ ನಡೆಸಲು ಬರುತ್ತಿಲ್ಲ. ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಎಷ್ಟು ಹೆಕ್ಟೇರ್ ಬಿತ್ತನೆ ಮಾಡುತ್ತೇವೆ, ಯಾವ್ಯಾವ ಬೆಳೆ ಬಿತ್ತನೆ ಆಗಲಿದೆ, ಡಿಎಪಿ, ಯೂರಿಯಾ ಸೇರಿ ಎಷ್ಟು ಗೊಬ್ಬರ ಬೇಕಾಗಲಿದೆ- ಇವೆಲ್ಲ ಮಾಹಿತಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಳೆಗಾಲ ಆರಂಭಕ್ಕೆ ಮುನ್ನವೇ ಪಡೆಯಬೇಕಿತ್ತು. ಯಾವುದೇ ಸಿದ್ಧತೆ ಮಾಡದ ಕಾರಣ ಗಂಭೀರ ಸಮಸ್ಯೆ ಎದುರಾಗಿದೆ’ ಎಂದರು. </p>.<p>‘ಈ ಸರ್ಕಾರಕ್ಕೆ ದೀನದಲಿತರ ಬಗ್ಗೆ ಕಳಕಳಿ- ಕಾಳಜಿ ಇಲ್ಲ. ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಅನುದಾನ ಕೊಟ್ಟಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ಮತ ಬ್ಯಾಂಕ್ ರಾಜಕಾರಣಕ್ಕಾಗಿ ಪರಿಶಿಷ್ಟ ಉಪಯೋಜನೆಯ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಈ ಹಣದ ದುರ್ಬಳಕೆ ಸರಿಯಲ್ಲ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>