<p><strong>ಬೆಂಗಳೂರು</strong>: ನಿವೃತ್ತಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದ ವಿವಿಧ ಜಿಲ್ಲೆಗಳ ನಿವೃತ್ತ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>2022ರ ಜುಲೈ 1ರಿಂದ 2024ರ ಜುಲೈ 31ರ ಮಧ್ಯೆ ನಡುವೆ ನಿವೃತ್ತಿಯಾಗಿರುವ ನೌಕರರಿಗೆ 7ನೇ ವೇತನ ಆಯೋಗದ ಪರಿಷ್ಕೃತ ವೇತನದ ಅನ್ವಯ ನಿವೃತ್ತಿ ಸೌಲಭ್ಯಗಳನ್ನು ನೀಡಬೇಕು ಎಂದು ಕೋರಿದರು.</p>.<p>ಈ 25 ತಿಂಗಳ ಅವಧಿಯಲ್ಲಿ 17,963 ಮಂದಿ ನಿವೃತ್ತರಾಗಿದ್ದಾರೆ. ಆ ಪೈಕಿ ಶೇ 40 ಶಿಕ್ಷಕರು, ಶೇ 12ರಷ್ಟು ಆರೋಗ್ಯ ಇಲಾಖೆ ನೌಕರರು, ಶೇ 10 ಪೊಲೀಸ್ ಇಲಾಖೆ ಸಿಬ್ಬಂದಿ, ಉಳಿದಂತೆ ಶೇ 38ರಷ್ಟು ನೌಕರರು ವಿವಿಧ ಇಲಾಖೆಗಳಿಗೆ ಸೇರಿದ್ದಾರೆ. ಈ ಎಲ್ಲ ನೌಕರರು 7ನೇ ವೇತನ ಆಯೋಗದ ಪರಿಷ್ಕೃತ ವೇತನದ ಮೇಲೆ ಆರ್ಥಿಕ ಸೌಲಭ್ಯ ಪಡೆಯಲು ಅರ್ಹರಿದ್ದಾರೆ. ಆಯೋಗದ ಆದೇಶವನ್ನು ಪರಿಶೀಲಿಸಿ ಪರಿಷ್ಕೃತ ಆದೇಶ ಹೊರಡಿಸಿ ಆರ್ಥಿಕ ಸೌಲಭ್ಯ ಕಲ್ಪಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.</p>.<p>ವೇದಿಕೆ ರಾಜ್ಯ ಸಂಚಾಲಕ ಅಶೋಕ ಎಂ. ಸಜ್ಜನ, ರಾಜ್ಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ ಷಣ್ಮುಖಯ್ಯ, ಅಶೋಕ ಎಂ. ಸಜ್ಜನ, ಗುರು ತಿಗಡಿ, ಶಂಕರಪ್ಪ ಲಮಾಣಿ, ಎಸ್.ಜಿ.ಬೆಸೆರೊಟ್ಟಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಿವೃತ್ತಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.</p>.<p>ರಾಜ್ಯದ ವಿವಿಧ ಜಿಲ್ಲೆಗಳ ನಿವೃತ್ತ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<p>2022ರ ಜುಲೈ 1ರಿಂದ 2024ರ ಜುಲೈ 31ರ ಮಧ್ಯೆ ನಡುವೆ ನಿವೃತ್ತಿಯಾಗಿರುವ ನೌಕರರಿಗೆ 7ನೇ ವೇತನ ಆಯೋಗದ ಪರಿಷ್ಕೃತ ವೇತನದ ಅನ್ವಯ ನಿವೃತ್ತಿ ಸೌಲಭ್ಯಗಳನ್ನು ನೀಡಬೇಕು ಎಂದು ಕೋರಿದರು.</p>.<p>ಈ 25 ತಿಂಗಳ ಅವಧಿಯಲ್ಲಿ 17,963 ಮಂದಿ ನಿವೃತ್ತರಾಗಿದ್ದಾರೆ. ಆ ಪೈಕಿ ಶೇ 40 ಶಿಕ್ಷಕರು, ಶೇ 12ರಷ್ಟು ಆರೋಗ್ಯ ಇಲಾಖೆ ನೌಕರರು, ಶೇ 10 ಪೊಲೀಸ್ ಇಲಾಖೆ ಸಿಬ್ಬಂದಿ, ಉಳಿದಂತೆ ಶೇ 38ರಷ್ಟು ನೌಕರರು ವಿವಿಧ ಇಲಾಖೆಗಳಿಗೆ ಸೇರಿದ್ದಾರೆ. ಈ ಎಲ್ಲ ನೌಕರರು 7ನೇ ವೇತನ ಆಯೋಗದ ಪರಿಷ್ಕೃತ ವೇತನದ ಮೇಲೆ ಆರ್ಥಿಕ ಸೌಲಭ್ಯ ಪಡೆಯಲು ಅರ್ಹರಿದ್ದಾರೆ. ಆಯೋಗದ ಆದೇಶವನ್ನು ಪರಿಶೀಲಿಸಿ ಪರಿಷ್ಕೃತ ಆದೇಶ ಹೊರಡಿಸಿ ಆರ್ಥಿಕ ಸೌಲಭ್ಯ ಕಲ್ಪಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.</p>.<p>ವೇದಿಕೆ ರಾಜ್ಯ ಸಂಚಾಲಕ ಅಶೋಕ ಎಂ. ಸಜ್ಜನ, ರಾಜ್ಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ ಷಣ್ಮುಖಯ್ಯ, ಅಶೋಕ ಎಂ. ಸಜ್ಜನ, ಗುರು ತಿಗಡಿ, ಶಂಕರಪ್ಪ ಲಮಾಣಿ, ಎಸ್.ಜಿ.ಬೆಸೆರೊಟ್ಟಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>