<p><strong>ನವದೆಹಲಿ</strong>: ಕರ್ನಾಟಕದ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಿಂದ (ಕ್ರಿಫ್) 2025–26ನೇ ಸಾಲಿನಲ್ಲಿ ₹1,724 ಕೋಟಿ ಮಂಜೂರು ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು. </p>.<p>ಕೇಂದ್ರ ಸಚಿವರನ್ನು ಬುಧವಾರ ಇಲ್ಲಿ ಭೇಟಿ ಮಾಡಿದ ಅವರು, ‘ರಾಜ್ಯ ಹೆದ್ದಾರಿಗಳು ಹಾಗೂ ಪ್ರಮುಖ ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ ಈ ಅನುದಾನ ಮಂಜೂರು ಮಾಡುವಂತೆ ಈ ಹಿಂದೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮೋದನೆ ಸಿಕ್ಕಿಲ್ಲ. ಕೂಡಲೇ ಅನುಮೋದನೆ ನೀಡಬೇಕು‘ ಎಂದು ಕೋರಿದರು.</p>.<p>ಈ ಯೋಜನೆಯಡಿ 2023–24ನೇ ಸಾಲಿನಲ್ಲಿ ₹1,385 ಕೋಟಿ ವೆಚ್ಚದಲ್ಲಿ 1,157 ಕಿ.ಮೀ. ಉದ್ದದ 297 ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿತ್ತು ಎಂದು ಅವರು ಸಚಿವರ ಗಮನಕ್ಕೆ ತಂದರು. </p>.<p>‘5,225 ಕಿ.ಮೀ. ಉದ್ದದ 39 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೆ ಏರಿಸುವಂತೆ ಪ್ರಸ್ತಾವ ಸಲ್ಲಿಸಿ ವರ್ಷಗಳೇ ಕಳೆದಿವೆ. ಈ ಪ್ರಸ್ತಾವಕ್ಕೆ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಅವರು 2023ರ ಆಗಸ್ಟ್ನಲ್ಲಿ ಮನವಿ ಸಲ್ಲಿಸಿದ್ದರು. ಸಂಚಾರ, ಸರಕು ಸಾಗಣೆ ಮತ್ತಿತರ ಅಂಶಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದರು. ಆ ಬಳಿಕ ಯಾವುದೇ ಕ್ರಮ ಆಗಿಲ್ಲ. ಈ ಬಗ್ಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ‘ ಎಂದು ಜಾರಕಿಹೊಳಿ ತಿಳಿಸಿದರು. </p>.<p>‘ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ಕೋರಲಾಗಿದೆ. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ‘ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ನಾಟಕದ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯಿಂದ (ಕ್ರಿಫ್) 2025–26ನೇ ಸಾಲಿನಲ್ಲಿ ₹1,724 ಕೋಟಿ ಮಂಜೂರು ಮಾಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು. </p>.<p>ಕೇಂದ್ರ ಸಚಿವರನ್ನು ಬುಧವಾರ ಇಲ್ಲಿ ಭೇಟಿ ಮಾಡಿದ ಅವರು, ‘ರಾಜ್ಯ ಹೆದ್ದಾರಿಗಳು ಹಾಗೂ ಪ್ರಮುಖ ಜಿಲ್ಲಾ ರಸ್ತೆಗಳ ಅಭಿವೃದ್ಧಿಗೆ ಈ ಅನುದಾನ ಮಂಜೂರು ಮಾಡುವಂತೆ ಈ ಹಿಂದೆ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ಈ ವರೆಗೆ ಅನುಮೋದನೆ ಸಿಕ್ಕಿಲ್ಲ. ಕೂಡಲೇ ಅನುಮೋದನೆ ನೀಡಬೇಕು‘ ಎಂದು ಕೋರಿದರು.</p>.<p>ಈ ಯೋಜನೆಯಡಿ 2023–24ನೇ ಸಾಲಿನಲ್ಲಿ ₹1,385 ಕೋಟಿ ವೆಚ್ಚದಲ್ಲಿ 1,157 ಕಿ.ಮೀ. ಉದ್ದದ 297 ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿತ್ತು ಎಂದು ಅವರು ಸಚಿವರ ಗಮನಕ್ಕೆ ತಂದರು. </p>.<p>‘5,225 ಕಿ.ಮೀ. ಉದ್ದದ 39 ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಮೇಲ್ದರ್ಜೆಗೆ ಏರಿಸುವಂತೆ ಪ್ರಸ್ತಾವ ಸಲ್ಲಿಸಿ ವರ್ಷಗಳೇ ಕಳೆದಿವೆ. ಈ ಪ್ರಸ್ತಾವಕ್ಕೆ ಅನುಮೋದನೆ ನೀಡುವಂತೆ ಮುಖ್ಯಮಂತ್ರಿ ಅವರು 2023ರ ಆಗಸ್ಟ್ನಲ್ಲಿ ಮನವಿ ಸಲ್ಲಿಸಿದ್ದರು. ಸಂಚಾರ, ಸರಕು ಸಾಗಣೆ ಮತ್ತಿತರ ಅಂಶಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದರು. ಆ ಬಳಿಕ ಯಾವುದೇ ಕ್ರಮ ಆಗಿಲ್ಲ. ಈ ಬಗ್ಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ‘ ಎಂದು ಜಾರಕಿಹೊಳಿ ತಿಳಿಸಿದರು. </p>.<p>‘ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದ ಸಂಪೂರ್ಣ ಸಹಕಾರ ಕೋರಲಾಗಿದೆ. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ‘ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>