<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ರ ‘ವಾರ್ಷಿಕ ಗೌರವ ಪ್ರಶಸ್ತಿ’ಗೆ ಸಾಹಿತಿಗಳಾದ ಸಿ. ವೀರಣ್ಣ (ಬೆಂಗಳೂರು), ಶ್ರೀರಾಮ ಇಟ್ಟಣ್ಣವರ (ಬಾಗಲಕೋಟೆ), ಜಾಣಗೆರೆ ವೆಂಕಟರಾಮಯ್ಯ (ತುಮಕೂರು), ಎ.ಎಂ. ಮದರಿ (ಕೊಪ್ಪಳ) ಹಾಗೂ ಸಬಿಹಾ ಭೂಮಿಗೌಡ (ಮಂಗಳೂರು) ಆಯ್ಕೆಯಾಗಿದ್ದಾರೆ.</p><p>ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ‘ಈ ಪ್ರಶಸ್ತಿಯು ತಲಾ ₹ 50 ಸಾವಿರ ನಗದು ಬಹುಮಾನ ಒಳಗೊಂಡಿದೆ’ ಎಂದು ತಿಳಿಸಿದರು. </p><p>‘2023ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಎಂ.ಎಸ್. ಶೇಖರ್ (ಮೈಸೂರು), ಜಿ.ಎನ್. ಮೋಹನ್ (ಬೆಂಗಳೂರು), ಟಿ.ಎಸ್. ವಿವೇಕಾನಂದ (ತುಮಕೂರು), ಜಯಶ್ರೀ ಕಂಬಾರ (ಬೆಳಗಾವಿ), ಪ್ರೊ. ನಿಜಲಿಂಗಪ್ಪ ಯಮನಪ್ಪ ಮಟ್ಟಿಹಾಳ<br>(ಧಾರವಾಡ),ಬಾಲಗುರುಮೂರ್ತಿ (ಕೋಲಾರ), ಪ್ರೊ. ಶಿವಗಂಗಾ ರುಮ್ಮಾ (ಕಲಬುರಗಿ), ರೀಟಾ ರೀನಿ (ಬೆಂಗ<br>ಳೂರು), ಕಲೀಮ್ ಉಲ್ಲಾ (ಶಿವಮೊಗ್ಗ) ಹಾಗೂ ವೆಂಕಟಗಿರಿ ದಳವಾಯಿ (ಬಳ್ಳಾರಿ) ಅವರನ್ನು ಆಯ್ಕೆ ಮಾಡ ಲಾಗಿದೆ. ಈ ಪ್ರಶಸ್ತಿಯು ತಲಾ ₹ 25 ಸಾವಿರ ಒಳಗೊಂಡಿದೆ’ ಎಂದರು.</p><p>‘2022ರ ಪುಸ್ತಕ ಬಹುಮಾನಕ್ಕೆ ವಿಮರ್ಶಕರ ಅಭಿಪ್ರಾಯ ಆಧರಿಸಿ 18 ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ₹ 25 ಸಾವಿರ ನಗದು ಬಹುಮಾನ ಒಳಗೊಂಡಿದೆ. 2022ರ ವಿವಿಧ ದತ್ತಿ ಬಹುಮಾನಗಳಿಗೆ ಒಂಬತ್ತು ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ರ ‘ವಾರ್ಷಿಕ ಗೌರವ ಪ್ರಶಸ್ತಿ’ಗೆ ಸಾಹಿತಿಗಳಾದ ಸಿ. ವೀರಣ್ಣ (ಬೆಂಗಳೂರು), ಶ್ರೀರಾಮ ಇಟ್ಟಣ್ಣವರ (ಬಾಗಲಕೋಟೆ), ಜಾಣಗೆರೆ ವೆಂಕಟರಾಮಯ್ಯ (ತುಮಕೂರು), ಎ.ಎಂ. ಮದರಿ (ಕೊಪ್ಪಳ) ಹಾಗೂ ಸಬಿಹಾ ಭೂಮಿಗೌಡ (ಮಂಗಳೂರು) ಆಯ್ಕೆಯಾಗಿದ್ದಾರೆ.</p><p>ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್, ‘ಈ ಪ್ರಶಸ್ತಿಯು ತಲಾ ₹ 50 ಸಾವಿರ ನಗದು ಬಹುಮಾನ ಒಳಗೊಂಡಿದೆ’ ಎಂದು ತಿಳಿಸಿದರು. </p><p>‘2023ರ ‘ಸಾಹಿತ್ಯ ಶ್ರೀ’ ಪ್ರಶಸ್ತಿಗೆ ಎಂ.ಎಸ್. ಶೇಖರ್ (ಮೈಸೂರು), ಜಿ.ಎನ್. ಮೋಹನ್ (ಬೆಂಗಳೂರು), ಟಿ.ಎಸ್. ವಿವೇಕಾನಂದ (ತುಮಕೂರು), ಜಯಶ್ರೀ ಕಂಬಾರ (ಬೆಳಗಾವಿ), ಪ್ರೊ. ನಿಜಲಿಂಗಪ್ಪ ಯಮನಪ್ಪ ಮಟ್ಟಿಹಾಳ<br>(ಧಾರವಾಡ),ಬಾಲಗುರುಮೂರ್ತಿ (ಕೋಲಾರ), ಪ್ರೊ. ಶಿವಗಂಗಾ ರುಮ್ಮಾ (ಕಲಬುರಗಿ), ರೀಟಾ ರೀನಿ (ಬೆಂಗ<br>ಳೂರು), ಕಲೀಮ್ ಉಲ್ಲಾ (ಶಿವಮೊಗ್ಗ) ಹಾಗೂ ವೆಂಕಟಗಿರಿ ದಳವಾಯಿ (ಬಳ್ಳಾರಿ) ಅವರನ್ನು ಆಯ್ಕೆ ಮಾಡ ಲಾಗಿದೆ. ಈ ಪ್ರಶಸ್ತಿಯು ತಲಾ ₹ 25 ಸಾವಿರ ಒಳಗೊಂಡಿದೆ’ ಎಂದರು.</p><p>‘2022ರ ಪುಸ್ತಕ ಬಹುಮಾನಕ್ಕೆ ವಿಮರ್ಶಕರ ಅಭಿಪ್ರಾಯ ಆಧರಿಸಿ 18 ಕೃತಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಹುಮಾನವು ತಲಾ ₹ 25 ಸಾವಿರ ನಗದು ಬಹುಮಾನ ಒಳಗೊಂಡಿದೆ. 2022ರ ವಿವಿಧ ದತ್ತಿ ಬಹುಮಾನಗಳಿಗೆ ಒಂಬತ್ತು ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿ ಪ್ರದಾನ ಸಮಾರಂಭವು ಇದೇ 24ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>