<p><strong>ಬೆಂಗಳೂರು</strong>: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಪ್ರತಿ ವರ್ಷ ಏರಿಕೆಯಾಗುತ್ತಲೇ ಇದ್ದು, 2024ರಲ್ಲಿ 2,016 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶಿಕ್ಷೆಯಾಗಿದ್ದು ಒಂದರಲ್ಲಿ ಮಾತ್ರ.</p>.<p>ಇಂತಹ ಪ್ರಕರಣಗಳಲ್ಲಿ ಶಿಕ್ಷೆಯಾಗುತ್ತಿರುವ ಪ್ರಮಾಣ ಅತ್ಯಂತ ಕಡಿಮೆ ಇರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ.</p>.<p>ಪರಿಶಿಷ್ಟ ಜಾತಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ರಾಜ್ಯದಾದ್ಯಂತ 2021ರಲ್ಲಿ ಒಟ್ಟು 1,673 ಪ್ರಕರಣಗಳು ದಾಖಲಾಗಿದ್ದವು. ನಂತರದ ಪ್ರತಿ ವರ್ಷವೂ ಈ ಸಂಖ್ಯೆ ಏರಿಕೆಯಾಗಿದೆ. 2024ರಲ್ಲಿ 2,016ಕ್ಕೆ ತಲುಪಿದೆ ಎಂಬ ದತ್ತಾಂಶ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊವಿನ (ಎನ್ಸಿಆರ್ಬಿ) ‘ಭಾರತದಲ್ಲಿ ಅಪರಾಧ–2024’ ವರದಿಯಲ್ಲಿ ಇದೆ.</p>.<p>2024ರಲ್ಲಿ ರಾಜ್ಯದ ವಿವಿಧೆಡೆ ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಬಹಿಷ್ಕಾರ, ಪ್ರವೇಶ ನಿರಾಕರಣೆಯಂತಹ ಕಾನೂನುಬಾಹಿರ ಕೃತ್ಯಗಳಿಗೆ ಒಟ್ಟು 2,718 ಜನರು ಗುರಿಯಾಗಿದ್ದಾರೆ. ಈ ಸಂಬಂಧ ಪರಿಶಿಷ್ಟ ಜಾತಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ 1,985 ಪ್ರಕರಣಗಳು ದಾಖಲಿಸಲಾಗಿದೆ. ಈ ಕಾಯ್ದೆಯ ವಿವಿಧ ಸೆಕ್ಷನ್ಗಳನ್ನು ಒಳಗೊಂಡು 245 ಅತ್ಯಾಚಾರ, 206 ಹಲ್ಲೆ, 62 ಕೊಲೆ ಮತ್ತು 148 ಕೊಲೆ ಯತ್ನ ಪ್ರಕರಣಗಳನ್ನು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾಗಿದೆ.</p>.<p>2,016 ಪ್ರಕರಣಗಳ ಪೈಕಿ 312 ಸುಳ್ಳು ಮತ್ತು ಸಾಕ್ಷ್ಯ ಇಲ್ಲದ ಪ್ರಕರಣಗಳು ಎಂದು ಪೊಲೀಸರು ವರದಿ ಸಲ್ಲಿಸಿದ್ದಾರೆ. ತನಿಖೆ ನಡೆಸಿ 1,573 ಪ್ರಕರಣಗಳಲ್ಲಿ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.</p>.<p>ಹಳೆಯವನ್ನೂ ಒಳಗೊಂಡು 2024ರ ಅವಧಿಯಲ್ಲಿ ಒಟ್ಟು 12,871 ಪ್ರಕರಣಗಳು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದವು. ಈ ಪೈಕಿ 809 ಪ್ರಕರಣಗಳನ್ನು ನ್ಯಾಯಾಲಯಗಳು ವಿಲೇವಾರಿ ಮಾಡಿವೆ. ಆದರೆ, 766 ಪ್ರಕರಣಗಳಲ್ಲಿ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ. 2024ಕ್ಕೂ ಮೊದಲು ದಾಖಲಾಗಿದ್ದ ಪ್ರಕರಣಗಳ ಪೈಕಿ 24 ಸೇರಿ ಒಟ್ಟು 25 ಪ್ರಕರಣಗಳಲ್ಲಿ ಶಿಕ್ಷೆ ಪ್ರಕಟಿಸಿದೆ. </p>.<p>ದೇಶದೆಲ್ಲೆಡೆ ಈ ಅವಧಿಯಲ್ಲಿ ನ್ಯಾಯಾಲಯಗಳು 17,156 ಪ್ರಕರಣಗಳನ್ನು ವಿಲೇವಾರಿ ಮಾಡಿ, 5,757ರಲ್ಲಿ ಶಿಕ್ಷೆ ಪ್ರಕಟಿಸಿವೆ. ಇಂತಹ ಪ್ರಕರಣಗಳಲ್ಲಿ ಶಿಕ್ಷೆಯಾದ ಪ್ರಕರಣಗಳ ರಾಷ್ಟ್ರೀಯ ಸರಾಸರಿ ಪ್ರಮಾಣ 33.9ರಷ್ಟಿದೆ. ರಾಜ್ಯದಲ್ಲಿ ನ್ಯಾಯಾಲಯಗಳು ವಿಲೇವಾರಿ ಮಾಡಿದ 809 ಪ್ರಕರಣಗಳಿಗೆ ಹೋಲಿಸಿದರೆ, ಶಿಕ್ಷೆಯಾದ ಪ್ರಕರಣಗಳ ಪ್ರಮಾಣ ಶೇ 3.2ರಷ್ಟು ಮಾತ್ರ. ಪಶ್ಚಿಮ ಬಂಗಾಳ (ಶೇ 1.8) ಮತ್ತು ಆಂಧ್ರ ಪ್ರದೇಶ (ಶೇ 2.4) ಹೊರತುಪಡಿಸಿ ಶಿಕ್ಷೆ ಪ್ರಮಾಣ ಅತ್ಯಂತ ಕಡಿಮೆ ಇರುವುದು ಕರ್ನಾಟಕದಲ್ಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಪ್ರತಿ ವರ್ಷ ಏರಿಕೆಯಾಗುತ್ತಲೇ ಇದ್ದು, 2024ರಲ್ಲಿ 2,016 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶಿಕ್ಷೆಯಾಗಿದ್ದು ಒಂದರಲ್ಲಿ ಮಾತ್ರ.</p>.<p>ಇಂತಹ ಪ್ರಕರಣಗಳಲ್ಲಿ ಶಿಕ್ಷೆಯಾಗುತ್ತಿರುವ ಪ್ರಮಾಣ ಅತ್ಯಂತ ಕಡಿಮೆ ಇರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ.</p>.<p>ಪರಿಶಿಷ್ಟ ಜಾತಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ರಾಜ್ಯದಾದ್ಯಂತ 2021ರಲ್ಲಿ ಒಟ್ಟು 1,673 ಪ್ರಕರಣಗಳು ದಾಖಲಾಗಿದ್ದವು. ನಂತರದ ಪ್ರತಿ ವರ್ಷವೂ ಈ ಸಂಖ್ಯೆ ಏರಿಕೆಯಾಗಿದೆ. 2024ರಲ್ಲಿ 2,016ಕ್ಕೆ ತಲುಪಿದೆ ಎಂಬ ದತ್ತಾಂಶ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊವಿನ (ಎನ್ಸಿಆರ್ಬಿ) ‘ಭಾರತದಲ್ಲಿ ಅಪರಾಧ–2024’ ವರದಿಯಲ್ಲಿ ಇದೆ.</p>.<p>2024ರಲ್ಲಿ ರಾಜ್ಯದ ವಿವಿಧೆಡೆ ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಬಹಿಷ್ಕಾರ, ಪ್ರವೇಶ ನಿರಾಕರಣೆಯಂತಹ ಕಾನೂನುಬಾಹಿರ ಕೃತ್ಯಗಳಿಗೆ ಒಟ್ಟು 2,718 ಜನರು ಗುರಿಯಾಗಿದ್ದಾರೆ. ಈ ಸಂಬಂಧ ಪರಿಶಿಷ್ಟ ಜಾತಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ 1,985 ಪ್ರಕರಣಗಳು ದಾಖಲಿಸಲಾಗಿದೆ. ಈ ಕಾಯ್ದೆಯ ವಿವಿಧ ಸೆಕ್ಷನ್ಗಳನ್ನು ಒಳಗೊಂಡು 245 ಅತ್ಯಾಚಾರ, 206 ಹಲ್ಲೆ, 62 ಕೊಲೆ ಮತ್ತು 148 ಕೊಲೆ ಯತ್ನ ಪ್ರಕರಣಗಳನ್ನು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾಗಿದೆ.</p>.<p>2,016 ಪ್ರಕರಣಗಳ ಪೈಕಿ 312 ಸುಳ್ಳು ಮತ್ತು ಸಾಕ್ಷ್ಯ ಇಲ್ಲದ ಪ್ರಕರಣಗಳು ಎಂದು ಪೊಲೀಸರು ವರದಿ ಸಲ್ಲಿಸಿದ್ದಾರೆ. ತನಿಖೆ ನಡೆಸಿ 1,573 ಪ್ರಕರಣಗಳಲ್ಲಿ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.</p>.<p>ಹಳೆಯವನ್ನೂ ಒಳಗೊಂಡು 2024ರ ಅವಧಿಯಲ್ಲಿ ಒಟ್ಟು 12,871 ಪ್ರಕರಣಗಳು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿದ್ದವು. ಈ ಪೈಕಿ 809 ಪ್ರಕರಣಗಳನ್ನು ನ್ಯಾಯಾಲಯಗಳು ವಿಲೇವಾರಿ ಮಾಡಿವೆ. ಆದರೆ, 766 ಪ್ರಕರಣಗಳಲ್ಲಿ ಆರೋಪಿಗಳನ್ನು ಖುಲಾಸೆ ಮಾಡಲಾಗಿದೆ. 2024ಕ್ಕೂ ಮೊದಲು ದಾಖಲಾಗಿದ್ದ ಪ್ರಕರಣಗಳ ಪೈಕಿ 24 ಸೇರಿ ಒಟ್ಟು 25 ಪ್ರಕರಣಗಳಲ್ಲಿ ಶಿಕ್ಷೆ ಪ್ರಕಟಿಸಿದೆ. </p>.<p>ದೇಶದೆಲ್ಲೆಡೆ ಈ ಅವಧಿಯಲ್ಲಿ ನ್ಯಾಯಾಲಯಗಳು 17,156 ಪ್ರಕರಣಗಳನ್ನು ವಿಲೇವಾರಿ ಮಾಡಿ, 5,757ರಲ್ಲಿ ಶಿಕ್ಷೆ ಪ್ರಕಟಿಸಿವೆ. ಇಂತಹ ಪ್ರಕರಣಗಳಲ್ಲಿ ಶಿಕ್ಷೆಯಾದ ಪ್ರಕರಣಗಳ ರಾಷ್ಟ್ರೀಯ ಸರಾಸರಿ ಪ್ರಮಾಣ 33.9ರಷ್ಟಿದೆ. ರಾಜ್ಯದಲ್ಲಿ ನ್ಯಾಯಾಲಯಗಳು ವಿಲೇವಾರಿ ಮಾಡಿದ 809 ಪ್ರಕರಣಗಳಿಗೆ ಹೋಲಿಸಿದರೆ, ಶಿಕ್ಷೆಯಾದ ಪ್ರಕರಣಗಳ ಪ್ರಮಾಣ ಶೇ 3.2ರಷ್ಟು ಮಾತ್ರ. ಪಶ್ಚಿಮ ಬಂಗಾಳ (ಶೇ 1.8) ಮತ್ತು ಆಂಧ್ರ ಪ್ರದೇಶ (ಶೇ 2.4) ಹೊರತುಪಡಿಸಿ ಶಿಕ್ಷೆ ಪ್ರಮಾಣ ಅತ್ಯಂತ ಕಡಿಮೆ ಇರುವುದು ಕರ್ನಾಟಕದಲ್ಲಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>