‘ಶಕ್ತಿ’ ಯೋಜನೆ ಜಾರಿಯಾಗಿ ಐದು ತಿಂಗಳು ಕಳೆದರೂ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿಲ್ಲ. ಅದರಲ್ಲಿಯೂ, ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಲೇ ಇದೆ. ತುಮಕೂರು ಸೇರಿದಂತೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಸ್ಗಳ ಕೊರತೆ ಇದ್ದು, ಮಹಿಳೆಯರನ್ನು ಹೊರತುಪಡಿಸಿ ಉಳಿದ ಪ್ರಯಾಣಿಕರಿಗೆ ಬಸ್ಗಳಲ್ಲಿ ಸೀಟು ಸಿಗುತ್ತಿಲ್ಲ. ಪರಿಣಾಮ, ಉದ್ಯೋಗಸ್ಥ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಬಸ್ಗಳ ಸಂಖ್ಯೆ ಹೆಚ್ಚಿಸುವಂತೆ ಪ್ರಯಾಣಿಕರು ಒತ್ತಾಯಿಸುತ್ತಿದ್ದಾರೆ.