<p><strong>ಬೆಂಗಳೂರು</strong>: ರಾಷ್ಟ್ರೀಯ ಪಂಚಾಯಿತಿ ಪ್ರಶಸ್ತಿ–2025 ಪ್ರಕಟಗೊಂಡಿದ್ದು, ರಾಜ್ಯದ ಆರು ಗ್ರಾಮ ಪಂಚಾಯಿತಿಗಳು ಕೇಂದ್ರದ ನಗದು ಪುರಸ್ಕಾರಕ್ಕೆ ಪಾತ್ರವಾಗಿವೆ.</p>.<p>ಕರ್ನಾಟಕವೂ ಸೇರಿ ದೇಶದ 42 ಗ್ರಾಮ ಪಂಚಾಯಿತಿಗಳು ಪ್ರಶಸ್ತಿಗೆ ಭಾಜನವಾಗಿವೆ. ಕರ್ನಾಟಕ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ವಿಭಾಗದ ಪ್ರಥಮ ಪ್ರಶಸ್ತಿಯು ಹೆಬ್ರಿಯ ಮುದ್ರಾಡಿ ಗ್ರಾಮ ಪಂಚಾಯಿತಿಗೆ ಸಂದಿದೆ. ಪ್ರಶಸ್ತಿಯ ಮೊತ್ತ ₹1 ಕೋಟಿ.</p>.<p>ಆರೋಗ್ಯಕರ ಪಂಚಾಯಿತಿ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ವಂಡ್ಸೆ, ಮಕ್ಕಳಸ್ನೇಹಿ ಪಂಚಾಯಿತಿ ವಿಭಾಗದಲ್ಲಿ ಬೆಂಗಳೂರು ನಗರ ಜಿಲ್ಲೆಯ ಹಾಲನಾಯಕನಹಳ್ಳಿ, ನೀರು ಸಮೃದ್ಧ ಪಂಚಾಯಿತಿ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಮಡಮಕ್ಕಿ ಪಂಚಾಯಿತಿಗಳಿಗೆ ದ್ವಿತೀಯ ಪ್ರಶಸ್ತಿಗಳು ದೊರೆತಿದ್ದು, ತಲಾ ₹75 ಲಕ್ಷ ನಗದು ಪುರಸ್ಕಾರಕ್ಕೆ ಪಾತ್ರವಾಗಿವೆ.</p>.<p>ಮೂಲಸೌಕರ್ಯದಲ್ಲಿ ಸ್ವಾವಲಂಬಿ ಪಂಚಾಯಿತಿ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಸಾನೂರು ಗ್ರಾಮ ಪಂಚಾಯಿತಿ, ಸಾಮಾಜಿಕವಾಗಿ ನ್ಯಾಯಯುತ ಮತ್ತು ಸುರಕ್ಷಿತ ವಿಭಾಗದಲ್ಲಿ ಕುಂದಾಪುರದ ಹಕ್ಲಾಡಿ ಗ್ರಾಮ ಪಂಚಾಯಿತಿಗಳಿಗೆ ತೃತೀಯ ಪ್ರಶಸ್ತಿ ಲಭಿಸಿದ್ದು, ತಲಾ ₹25 ಲಕ್ಷ ನಗದು ಬಹುಮಾನ ಪಡೆದಿವೆ. ಆರು ಪ್ರಶಸ್ತಿಗಳಲ್ಲಿ ಉಡುಪಿ ಜಿಲ್ಲೆ ಐದು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-1075358330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಪಂಚಾಯಿತಿ ಪ್ರಶಸ್ತಿ–2025 ಪ್ರಕಟಗೊಂಡಿದ್ದು, ರಾಜ್ಯದ ಆರು ಗ್ರಾಮ ಪಂಚಾಯಿತಿಗಳು ಕೇಂದ್ರದ ನಗದು ಪುರಸ್ಕಾರಕ್ಕೆ ಪಾತ್ರವಾಗಿವೆ.</p>.<p>ಕರ್ನಾಟಕವೂ ಸೇರಿ ದೇಶದ 42 ಗ್ರಾಮ ಪಂಚಾಯಿತಿಗಳು ಪ್ರಶಸ್ತಿಗೆ ಭಾಜನವಾಗಿವೆ. ಕರ್ನಾಟಕ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಡತನ ಮುಕ್ತ ಮತ್ತು ಸುಧಾರಿತ ಜೀವನೋಪಾಯ ವಿಭಾಗದ ಪ್ರಥಮ ಪ್ರಶಸ್ತಿಯು ಹೆಬ್ರಿಯ ಮುದ್ರಾಡಿ ಗ್ರಾಮ ಪಂಚಾಯಿತಿಗೆ ಸಂದಿದೆ. ಪ್ರಶಸ್ತಿಯ ಮೊತ್ತ ₹1 ಕೋಟಿ.</p>.<p>ಆರೋಗ್ಯಕರ ಪಂಚಾಯಿತಿ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ವಂಡ್ಸೆ, ಮಕ್ಕಳಸ್ನೇಹಿ ಪಂಚಾಯಿತಿ ವಿಭಾಗದಲ್ಲಿ ಬೆಂಗಳೂರು ನಗರ ಜಿಲ್ಲೆಯ ಹಾಲನಾಯಕನಹಳ್ಳಿ, ನೀರು ಸಮೃದ್ಧ ಪಂಚಾಯಿತಿ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಮಡಮಕ್ಕಿ ಪಂಚಾಯಿತಿಗಳಿಗೆ ದ್ವಿತೀಯ ಪ್ರಶಸ್ತಿಗಳು ದೊರೆತಿದ್ದು, ತಲಾ ₹75 ಲಕ್ಷ ನಗದು ಪುರಸ್ಕಾರಕ್ಕೆ ಪಾತ್ರವಾಗಿವೆ.</p>.<p>ಮೂಲಸೌಕರ್ಯದಲ್ಲಿ ಸ್ವಾವಲಂಬಿ ಪಂಚಾಯಿತಿ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಸಾನೂರು ಗ್ರಾಮ ಪಂಚಾಯಿತಿ, ಸಾಮಾಜಿಕವಾಗಿ ನ್ಯಾಯಯುತ ಮತ್ತು ಸುರಕ್ಷಿತ ವಿಭಾಗದಲ್ಲಿ ಕುಂದಾಪುರದ ಹಕ್ಲಾಡಿ ಗ್ರಾಮ ಪಂಚಾಯಿತಿಗಳಿಗೆ ತೃತೀಯ ಪ್ರಶಸ್ತಿ ಲಭಿಸಿದ್ದು, ತಲಾ ₹25 ಲಕ್ಷ ನಗದು ಬಹುಮಾನ ಪಡೆದಿವೆ. ಆರು ಪ್ರಶಸ್ತಿಗಳಲ್ಲಿ ಉಡುಪಿ ಜಿಲ್ಲೆ ಐದು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-1075358330</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>